3:53 PM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಮೇಕೆದಾಟು | ರಾಜ್ಯ ಪರ ಮಹತ್ವದ ತೀರ್ಪು ಸರಕಾರಕ್ಕೆ ದೊರೆತ ಮಹತ್ವದ ಗೆಲುವು: ಪದ್ಮರಾಜ್ ಆರ್.ಪೂಜಾರಿ

15/11/2025, 10:27

ಮಂಗಳೂರು(reporterkarnataka.com): ಮೇಕೆದಾಟು ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ್ದು, ಕರ್ನಾಟಕದ ಪರವಾಗಿ ಮಹತ್ವದ ತೀರ್ಪು ಬಂದಿರುವುದು ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ಸಿಕ್ಕಿದ ದೊಡ್ಡ ಗೆಲುವು ಎಂದು ಕಾಂಗ್ರೆಸ್ ಮುಖಂಡ ಪದ್ಮರಾಜ್ ಆರ್.ಪೂಜಾರಿ ಹೇಳಿದ್ದಾರೆ.
ಮೇಕೆದಾಟು ಯೋಜನೆ ಕಾಂಗ್ರೆಸ್ ನೇತೃತ್ವದ ಸರ್ಕಾರದ ಕನಸ್ಸಾಗಿತ್ತು. ರಾಜ್ಯದ ಜನರ ಪ್ರಾರ್ಥನೆ, ಜನರ ಕಷ್ಟಕ್ಕೆ ನ್ಯಾಯಾಲಯ ಸ್ಪಂದಿಸಿದೆ. ಕರ್ನಾಟಕದ ಪಾಲಿಗೆ ಇದೊಂದು ಅಭೂತಪೂರ್ವ ಗೆಲುವಾಗಿದ್ದು, ಸರ್ಕಾರದ ದಿಟ್ಟ ನಿಲುವು, ಕಾನೂನು ತಜ್ಞರ ನಿರಂತರ ಪರಿಶ್ರಮದಿಂದ ಈ ಗೆಲುವು ಸಾಧ್ಯವಾಗಿದೆ. ಮಹತ್ವದ ಗೆಲುವಿಗೆ ಸಹಕರಿಸಿದ ಕರ್ನಾಟಕ ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ, ಕಾನೂನು ತಜ್ಞರ ತಂಡ, ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಪದ್ಮರಾಜ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು