5:43 PM Wednesday11 - March 2026
ಬ್ರೇಕಿಂಗ್ ನ್ಯೂಸ್
ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಇತ್ತೀಚಿನ ಸುದ್ದಿ

Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ ಕರೆ

19/04/2025, 19:19

ಗೋಕರ್ಣ(reporterkarnataka.com): ಬೀದರ್ ನಲ್ಲಿ ಜನಿವಾರದ ಕಾರಣಕ್ಕಾಗಿ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ನೀಡದ ಘಟನೆ ಮತ್ತು ಶಿವಮೊಗ್ಗದಲ್ಲಿ ಜನಿವಾರ ತುಂಡರಿಸಿದ ಘಟನೆ ತೀರಾ ವಿಷಾದನೀಯ. ಈ ದುರ್ವರ್ತನೆಯನ್ನು ಸಮಸ್ತ ಸಮಾಜ ಪ್ರತಿಭಟಿಸಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಕರೆ ನೀಡಿದ್ದಾರೆ.
ಅಧಿಕಾರಿಗಳ ಈ ವರ್ತನೆಯ ಹಿಂದು ದ್ವೇಷ, ಜಾತಿದ್ವೇಷ, ಒಂದು ಜಾತಿಯನ್ನು ಸಂಪೂರ್ಣ ತುಳಿದು ಬಿಡಬೇಕು ಎನ್ನುವ ಭಾವ ಕಾಣಿಸುತ್ತಿದೆ. ಪರೀಕ್ಷೆಗಳು ಮಕ್ಕಳ ಹಣೆಬರಹವನ್ನು ನಿರ್ಧರಿಸುವಂಥದ್ದು; ವಿದ್ಯಾರ್ಥಿಗಳು ಪರೀಕ್ಷೆಯ ಮಾನಸಿಕ ಒತ್ತಡದಲ್ಲಿರುವಾಗ ಅಧಿಕಾರಿಗಳು ಕ್ರೌರ್ಯ ಮೆರೆದಿರುವುದು ದಬ್ಬಾಳಿಕೆ ನಡೆಸಿರುವುದು ಖಂಡನೀಯ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಜನಿವಾರ ಕೀಳುವಾಗ ಮನಸ್ಸಿಗೆ ಎಂಥ ನೋವಾಗುತ್ತದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಬ್ರಾಹ್ಮಣರು ಇದನ್ನು ಸಹಿಸಬಾರದು; ಇದನ್ನು ಇಲ್ಲಿಗೇ ಬಿಟ್ಟರೆ ದೇಶದಲ್ಲಿ ಬದುಕಲೂ ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಎಚ್ಚರಿಸಿದ್ದಾರೆ.
ಈ ಕೃತ್ಯವನ್ನು ಬ್ರಾಹ್ಮಣರು ಸಂಘಟಿತರಾಗಿ ಪ್ರತಿಭಟಸುವುದು ಅಗತ್ಯ ಮಾತ್ರವಲ್ಲ; ಅನಿವಾರ್ಯವೂ ಹೌದು. ಇದು ಬ್ರಾಹ್ಮಣರಿಗಷ್ಟೇ ಸೀಮಿತವಲ್ಲ; ಬೇರೆಯವರೂ ಜನಿವಾರವನ್ನು ಗೌರವದಿಂದ ಧಾರಣೆ ಮಾಡುತ್ತಾರೆ. ಲಿಂಗಾಯಿತರು ಕೂಡಾ ಲಿಂಗವನ್ನು ಧರಿಸುತ್ತಾರೆ. ಅದನ್ನೂ ಇಂಥದ್ದೇ ಸೂತ್ರದಿಂದ ಧರಿಸಲಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಇಡೀ ಸಮಾಜಕ್ಕೆ ಅಪಾಯ ಕಾದಿದೆ ಎಂದು ಹೇಳಿದ್ದಾರೆ.
ಧಾರ್ಮಿಕ ಚಿಹ್ನೆಯನ್ನು ತೆಗೆದುಹಾಕಿದರೆ ಪರೀಕ್ಷೆ ಬರೆಯುವುದಿಲ್ಲ ಎಂದು ದೃಢ ನಿರ್ಧಾರ ಕೈಗೊಂಡ ವಿದ್ಯಾರ್ಥಿಗೆ ಅಭಿನಂದನೆ ಸಲ್ಲಿಸುತ್ತೇವೆ. ಧಾರ್ಮಿಕತೆಯಲ್ಲಿ ರಾಜಿ ಮಾಡಿಕೊಳ್ಳದ ವಿದ್ಯಾರ್ಥಿಯನ್ನು ಮೆಚ್ಚಬೇಕು. ಜನಿವಾರದ ಕಾರಣಕ್ಕೆ ಪರೀಕ್ಷೆ ಬರೆಯಲು ಸಾಧ್ಯವಾಗದ ಎಲ್ಲರಿಗೂ ಸಹಾಯಹಸ್ತ ಚಾಚಲು ಶ್ರೀಮಠ ಸಿದ್ಧ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇಡೀ ಬ್ರಾಹ್ಮಣ ಸಮಾಜ ಮಾತ್ರವಲ್ಲ; ಭಾರತೀಯರೆಲ್ಲರೂ ಒಗ್ಗೂಡಿ ತಕ್ಕ ಪ್ರತಿಕ್ರಿಯೆ ನೀಡಬೇಕು ಎಂದು ಅವರು ಆಶಿಸಿದ್ದಾರೆ.
ಹವ್ಯಕ ಮಹಾಮಂಡಲ ಕೂಡಾ ಘಟನೆಯನ್ನು ಖಂಡಿಸಿದ್ದು, ಸಮಗ್ರ ಹವ್ಯಕ ಮಹಾಮಂಡಲ ಸಭೆಯಲ್ಲಿ ಈ ಬಗ್ಗೆ ಖಂಡನಾ ನಿರ್ಣಯ ಆಂಗೀಕರಿಸಿದೆ. ಅಕ್ಷಮ್ಯ ಅಪರಾಧ ಎಸಗಿದ ಅಧಿಕಾರಿಗಳಿಗೆ ಶಿಕ್ಷೆ ವಿಧಿಸಿ ಸಾಮಾಜಿಕ ಸ್ವಾಸ್ಥ್ಯ ಕಾಪಾಡಬೇಕು. ಜನಿವಾರ ಕಾರಣಕ್ಕೆ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿ, ವಿದ್ಯಾರ್ಥಿಯ ಭವಿಷ್ಯ ಹಾಗೂ ಆತ್ಮಗೌರವ ರಕ್ಷಿಸಬೇಕು ಎಂದು ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು