1:29 PM Wednesday29 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ ಕರೆ

19/04/2025, 19:19

ಗೋಕರ್ಣ(reporterkarnataka.com): ಬೀದರ್ ನಲ್ಲಿ ಜನಿವಾರದ ಕಾರಣಕ್ಕಾಗಿ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ನೀಡದ ಘಟನೆ ಮತ್ತು ಶಿವಮೊಗ್ಗದಲ್ಲಿ ಜನಿವಾರ ತುಂಡರಿಸಿದ ಘಟನೆ ತೀರಾ ವಿಷಾದನೀಯ. ಈ ದುರ್ವರ್ತನೆಯನ್ನು ಸಮಸ್ತ ಸಮಾಜ ಪ್ರತಿಭಟಿಸಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಕರೆ ನೀಡಿದ್ದಾರೆ.
ಅಧಿಕಾರಿಗಳ ಈ ವರ್ತನೆಯ ಹಿಂದು ದ್ವೇಷ, ಜಾತಿದ್ವೇಷ, ಒಂದು ಜಾತಿಯನ್ನು ಸಂಪೂರ್ಣ ತುಳಿದು ಬಿಡಬೇಕು ಎನ್ನುವ ಭಾವ ಕಾಣಿಸುತ್ತಿದೆ. ಪರೀಕ್ಷೆಗಳು ಮಕ್ಕಳ ಹಣೆಬರಹವನ್ನು ನಿರ್ಧರಿಸುವಂಥದ್ದು; ವಿದ್ಯಾರ್ಥಿಗಳು ಪರೀಕ್ಷೆಯ ಮಾನಸಿಕ ಒತ್ತಡದಲ್ಲಿರುವಾಗ ಅಧಿಕಾರಿಗಳು ಕ್ರೌರ್ಯ ಮೆರೆದಿರುವುದು ದಬ್ಬಾಳಿಕೆ ನಡೆಸಿರುವುದು ಖಂಡನೀಯ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಜನಿವಾರ ಕೀಳುವಾಗ ಮನಸ್ಸಿಗೆ ಎಂಥ ನೋವಾಗುತ್ತದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಬ್ರಾಹ್ಮಣರು ಇದನ್ನು ಸಹಿಸಬಾರದು; ಇದನ್ನು ಇಲ್ಲಿಗೇ ಬಿಟ್ಟರೆ ದೇಶದಲ್ಲಿ ಬದುಕಲೂ ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಎಚ್ಚರಿಸಿದ್ದಾರೆ.
ಈ ಕೃತ್ಯವನ್ನು ಬ್ರಾಹ್ಮಣರು ಸಂಘಟಿತರಾಗಿ ಪ್ರತಿಭಟಸುವುದು ಅಗತ್ಯ ಮಾತ್ರವಲ್ಲ; ಅನಿವಾರ್ಯವೂ ಹೌದು. ಇದು ಬ್ರಾಹ್ಮಣರಿಗಷ್ಟೇ ಸೀಮಿತವಲ್ಲ; ಬೇರೆಯವರೂ ಜನಿವಾರವನ್ನು ಗೌರವದಿಂದ ಧಾರಣೆ ಮಾಡುತ್ತಾರೆ. ಲಿಂಗಾಯಿತರು ಕೂಡಾ ಲಿಂಗವನ್ನು ಧರಿಸುತ್ತಾರೆ. ಅದನ್ನೂ ಇಂಥದ್ದೇ ಸೂತ್ರದಿಂದ ಧರಿಸಲಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಇಡೀ ಸಮಾಜಕ್ಕೆ ಅಪಾಯ ಕಾದಿದೆ ಎಂದು ಹೇಳಿದ್ದಾರೆ.
ಧಾರ್ಮಿಕ ಚಿಹ್ನೆಯನ್ನು ತೆಗೆದುಹಾಕಿದರೆ ಪರೀಕ್ಷೆ ಬರೆಯುವುದಿಲ್ಲ ಎಂದು ದೃಢ ನಿರ್ಧಾರ ಕೈಗೊಂಡ ವಿದ್ಯಾರ್ಥಿಗೆ ಅಭಿನಂದನೆ ಸಲ್ಲಿಸುತ್ತೇವೆ. ಧಾರ್ಮಿಕತೆಯಲ್ಲಿ ರಾಜಿ ಮಾಡಿಕೊಳ್ಳದ ವಿದ್ಯಾರ್ಥಿಯನ್ನು ಮೆಚ್ಚಬೇಕು. ಜನಿವಾರದ ಕಾರಣಕ್ಕೆ ಪರೀಕ್ಷೆ ಬರೆಯಲು ಸಾಧ್ಯವಾಗದ ಎಲ್ಲರಿಗೂ ಸಹಾಯಹಸ್ತ ಚಾಚಲು ಶ್ರೀಮಠ ಸಿದ್ಧ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇಡೀ ಬ್ರಾಹ್ಮಣ ಸಮಾಜ ಮಾತ್ರವಲ್ಲ; ಭಾರತೀಯರೆಲ್ಲರೂ ಒಗ್ಗೂಡಿ ತಕ್ಕ ಪ್ರತಿಕ್ರಿಯೆ ನೀಡಬೇಕು ಎಂದು ಅವರು ಆಶಿಸಿದ್ದಾರೆ.
ಹವ್ಯಕ ಮಹಾಮಂಡಲ ಕೂಡಾ ಘಟನೆಯನ್ನು ಖಂಡಿಸಿದ್ದು, ಸಮಗ್ರ ಹವ್ಯಕ ಮಹಾಮಂಡಲ ಸಭೆಯಲ್ಲಿ ಈ ಬಗ್ಗೆ ಖಂಡನಾ ನಿರ್ಣಯ ಆಂಗೀಕರಿಸಿದೆ. ಅಕ್ಷಮ್ಯ ಅಪರಾಧ ಎಸಗಿದ ಅಧಿಕಾರಿಗಳಿಗೆ ಶಿಕ್ಷೆ ವಿಧಿಸಿ ಸಾಮಾಜಿಕ ಸ್ವಾಸ್ಥ್ಯ ಕಾಪಾಡಬೇಕು. ಜನಿವಾರ ಕಾರಣಕ್ಕೆ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿ, ವಿದ್ಯಾರ್ಥಿಯ ಭವಿಷ್ಯ ಹಾಗೂ ಆತ್ಮಗೌರವ ರಕ್ಷಿಸಬೇಕು ಎಂದು ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು