2:34 AM Monday26 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಗೋಕುಲ ಮಂದಿರ ಬ್ರಹ್ಮಕಲಶೋತ್ಸವ ಸಮಾರೋಪ: ಕೇಂದ್ರ ವಿತ್ತ ಖಾತೆ ರಾಜ್ಯ ಸಚಿವ ಡಾ. ಭಗತ್ ಕಿಶನ್ ರಾವ್ ಕರಾಡ್ ಭೇಟಿ

19/05/2022, 08:49

ಮುಂಬಯಿ(reporterkarnataka.com): ಬಾಂಬ್ ಸೌತ್ ಕನರಾ ಬಾಗ್ಸ್ ಆಸೋಸಿಯೇಶನ್ ಮತ್ತು ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್‌ ಸಂಸ್ಥೆಗಳ ಪುನರಾಭಿವೃದ್ಧಿಯೊಂದಿಗೆ ನವೀಕೃತ ಗೋಕುಲ ಮಂದಿರಕ್ಕೆ ಕೇಂದ್ರ ವಿತ್ತ ಖಾತೆ ರಾಜ್ಯ ಸಚಿವ ಡಾ. ಭಗತ್ ಕಿಶನ್ ರಾವ್ ಕರಾಡ್ ಭೇಟಿಯನ್ನಿತ್ತು ಉತ್ಸವಕ್ಕೆ ಮೆರಗು ನೀಡಿದರು.


ಬಳಿಕ ಸಾಯನ್ ಕಿಂಗ್‌ಸರ್ಕಲ್‌ನ ಶ್ರೀ ಷಣ್ಮುಖಾನಂದ ಚಂದ್ರಶೇಖರೇಂದ್ರ ಸರಸ್ವತಿ ಸಭಾಗೃಹದಲ್ಲಿ ಬಿಎಸ್‌ಕೆಬಿ ಆಸೋಸಿಯೇಶನ್ ಮತ್ತು ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್‌ನ ಅಧ್ಯಕ್ಷ ಡಾ| ಸುರೇಶ್ ಎಸ್.ರಾವ್ ಕಟೀಲು ಅಧ್ಯಕ್ಷತೆಯಲ್ಲಿ ಜರುಗಿದ ಗೋಕುಲ ಬ್ರಹ್ಮಕಲಶೋತ್ಸವ ಸಮಾರೋಪ ಸಮಾರಂಭದ ಸಭಾಕಾರ್ಯಕ್ರಮಕ್ಕೆ ಸಚಿವ ಡಾ| ಭಗತ್‌ ರಾವ್‌ ಚಾಲನೆಯನ್ನಿತ್ತರು. ಉಡುಪಿ ಶ್ರೀ ಪಲಿಮಾರು ಮಠದ ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಶ್ರೀ ಕ್ಷೇತ್ರ ಕಟೀಲು ಇದರ ಆನುವಂಶಿಕ ಆರ್ಚಕ ವೇ ಮೂ ಆನಂತ ಪದ್ಮನಾಭ ಆಸ್ರಣ್ಣ ಐತಿಹಾಸಿಕ ಸಮಾರಂಭದಲ್ಲಿ ಪಾಲ್ಗೊಂಡು ಅನುಗ್ರಹಿಸಿದರು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಕರ್ಣಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಎಂ.ಎಸ್.ಮಹಾಬಲೇಶ್ವರ ಭಟ್, ಅಜಂತಾ ಧಾರ್ಮ ಸಂಸ್ಥೆಯ ಉಪಾಧ್ಯಕ್ಷ ಮಧುಸೂದನ ಆಗರ್ವಾಲ್‌, ಚರೀಸ್ಮಾ ಬಿಲ್ಡರ್‌ನ ಕಾರ್ಯಾಧ್ಯಕ್ಷ ಮೂಲ್ಕಿ ಪಡುಮನೆ ಸುಧೀರ್‌ ವಿ.ಶೆಟ್ಟಿ, ಎಸ್‌ಬಿಐ ಲೈನ್ ಇನ್ಸೂರೆನ್ಸ್ ಕಂಪನಿಯ ಕಾರ್ಯನಿರ್ವಹಕ ನಿರ್ದೇಶಕ ಆನಂದ ಪೇಜಾವರ, ಕೆ.ಎಲ್‌ ಕುಂಡಾಂತಯ ಪ್ರಧಾನ ಅಭ್ಯಾಗತರಾಗಿದ್ದು, ಬಿಎಸ್‌ಕೆಬಿ ಉಪಾಧ್ಯಕ್ಷರುಗಳಾದ ವಾಮನ ಹೊಟ್ಟೆ ಮತ್ತು ಶೈಲಿನಿ ರಾವ್, ಕೋಶಾಧಿಕಾರಿ ಸಿಎ ಹರಿದಾಸ ಭಟ್, ಜೊತೆ ಕಾರ್ಯದರ್ಶಿ ಚಿನ್ನಾ ಮೇಲ್ಮನೆ ಮತ್ತು ಜಗದೀಸ್ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಬಿಎಸ್‌ಕೆಬಿ ಆಸೋಸಿಯೇಶನ್ ಕಾರ್ಯದರ್ಶಿ ಎ.ಪಿ.ಕೆ ಸೋತಿ, ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್‌ನ ವಿಶ್ವಸ್ಥ ಸದಸ್ಯರುಗಳಾದ ಎ.ಶ್ರೀನಿವಾಸ ರಾವ್, ಬಿ.ರಮಾನಂದ ರಾವ್, ಕೃಷ್ಣ ಆಚಾರ್ಯ, ಎಸ್.ಎಸ್. ಉಡುಪ ಜಮು, ಜೊತೆ ಕಾರ್ಯದರ್ಶಿ ಪಿ.ಸಿ.ಎನ್ ರಾವ್, ಜೊತೆ ಕೋಶಾಧಿಕಾರಿ ಪಿ. ಕುಸುಮಾ ಶ್ರೀನಿವಾಸ್, ಮಹಿಳಾ ವಿಭಾಗಧ್ಯಕ್ಷ ಐ.ಕೆ ಪ್ರೇಮಾ ಎಸ್.ರಾವ್, ವಿಜಯಲಕ್ಷ್ಮೀ ಸುರೇಶ್ ರಾವ್ ಇತರ ಪದಾಧಿಕಾರಿಗಳು, ಸದಸ್ಯರನೇಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು