9:04 PM Tuesday2 - September 2025
ಬ್ರೇಕಿಂಗ್ ನ್ಯೂಸ್
ಸೌಜನ್ಯ ಪ್ರಕರಣ | ಸುಪ್ರೀಂಕೋರ್ಟ್ ಮೊರೆ ಹೋದರೆ ಸಂಪೂರ್ಣ ಬೆಂಬಲ: ಬಿಜೆಪಿ ರಾಜ್ಯಾಧ್ಯಕ್ಷ… ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್… ಕೊಡಗಿನಾದ್ಯoತ ಕೈಲೂ ಮುಹೂರ್ತ ಹಬ್ಬ ಸಂಭ್ರಮ: ಮಾಂಸ ಖರೀದಿ ಜೋರು ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ… Kaali river | ಸೂಪಾ ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹದ ಕುರಿತು… ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ: ಸಿಎಂ ಚಾಲನೆ ಧರ್ಮಸ್ಥಳ ಯಾತ್ರೆಯಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗಲಾರದು: ಸಿಎಂ ಸಿದ್ದರಾಮಯ್ಯ ಗಣೇಶ ವಿಸರ್ಜನೆ: ಕುಶಾಲನಗರದಲ್ಲಿ ನಿಯಮ ಉಲ್ಲಂಘಿಸಿದ 5 ಡಿಜೆ ವಾಹನ ಪೊಲೀಸ್ ವಶಕ್ಕೆ ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ… ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ

ಇತ್ತೀಚಿನ ಸುದ್ದಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನಾಭರಣ ಕಳವು: ಏರ್ ಪೋರ್ಟ್ ಲೋಡಿಂಗ್ ನೌಕರರಿಂದಲೇ ಕೃತ್ಯ; 5 ಮಂದಿ ಬಂಧನ

02/09/2025, 20:06

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭಾರಣ ಕಳವು ಮಾಡಿದ ಪ್ರಕರಣ ಸಂಬಂಧಿಸಿದಂತೆ ಬಜಪೆ ಪೊಲೀಸರು 5 ಮಂದಿಯನ್ನು ಬಂಧಿಸಿದ್ದು, ಅಘಾತಕ್ಕಾರಿ ವಿಷಯವೆಂದರೆ ಇವರಲ್ಲಿ 4 ಮಂದಿ ಏರ್ ಪೋರ್ಟ್ ಸಿಬ್ಬಂದಿಗಳಾಗಿದ್ದಾರೆ.
ಬಂಧಿತರನ್ನು ಮಂಗಳೂರು ಹೊರವಲಯದ ಕುಂದಾವರದ ನಿತಿನ್, ಮೂಡು ಪರೇರಾದ ರಾಜೇಶ್, ಸದಾನಂದ, ರವಿರಾಜ್, ಬಜಪೆ ನಿವಾಸಿ ಪ್ರವೀಣ್ ಫೆರ್ನಾಂಡಿಸ್ ಎಂದು ಗುರುತಿಸಲಾಗಿದೆ.
ಬಂಧಿತರಲ್ಲಿ ಪ್ರಮುಖ ನಾಲ್ವರು ಆರೋಪಿಗಳು ವಿಮಾನ ನಿಲ್ದಾಣದ ಲೋಡಿಂಗ್ ಮತ್ತು ಅನ್ ಲೋಡಿಂಗ್ ಮಾಡುವ ನೌಕರರು ಆಗಿದ್ದಾರೆ.

*ಏನಿದು ಘಟನೆ?:*
ಮಹಿಳಾ ಪ್ರಯಾಣಿಕರೊಬ್ಬರು ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ದಲ್ಲಿ
ಅಗಸ್ಟ್ 30ರಂದು ಆಗಮಿಸಿದ್ದರು. ವಿಮಾನ ನಿಲ್ದಾಣದ ಬ್ಯಾಗೇಜ್ ಬೆಲ್ಟ್ ನಿಂದ ಟ್ರೋಲಿ ಬ್ಯಾಗ್ ಪಡೆದು ಪರಿಶೀಲನೆ ನಡೆಸಿದ ವೇಳೆ 56 ಗ್ರಾಂ ತೂಕದ 4,50,000 ರೂ. ಮೌಲ್ಯದ ಚಿನ್ನಾಭಾರಣ ಕಳವು ಆಗಿರುವುದು ಗಮನಕ್ಕೆ ಬಂತು. ತಕ್ಷಣ ಅವರು ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದರು. ತಕ್ಷಣ ಕಾರ್ಯಾಚರಣೆಗೆ ಇಳಿದ ಪೊಲೀಸರು ಏರ್ ಪೋರ್ಟ್
ಸಿಬ್ಬಂದಿಗಳನ್ನು ವಿಚಾರಣೆ ನಡೆಸಿದ ವೇಳೆ ತಪ್ಪು ಒಪ್ಪಿಕೊಂಡಿದ್ದಾರೆ. ಚಿನ್ನಾಭರಣವನ್ನು ರವಿರಾಜ್ ಎಂಬವರಿಗೆ ಮಾರಾಟ ಮಾಡಿರುವುದಾಗಿ ತಿಳಿಸಿದ್ದು, ಈ ಹಿನ್ನಲ್ಲೆಯಲ್ಲಿ ಅ. ಕ್ರ.157/2025 ಕಲಂ 303(2) ಹಾಗೂ ರವಿರಾಜ್ ಎಂಬುವವರನ್ನು 312(2) ಬಿ.ಎನ್. ಎಸ್ ಆರೋಪದ ಮೇರೆಗೆ ಬಂಧಿಸಲಾಯಿತು. ಆರೋಪಿಗಳಿಂದ 5 ಲಕ್ಷ ಮೌಲ್ಯದ 50 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿಗಳು ಈ ಹಿಂದೆ ಸಹ ಹಲವು ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು