10:11 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ಸ್ನಾತಕೋತ್ತರ ಪದವಿಯಲ್ಲಿ ಚಿನ್ನದ ಪದಕ: ಚಿತ್ತಾರಿಯ ಗಿರೀಶ್ ಪಿ. ಎಂ. ಸಾಧನೆಗೆ ಸನ್ಮಾನ

18/03/2025, 11:56

ಕಾಸರಗೋಡು(reporterkarnataka.com): ವಿದ್ಯಾರ್ಥಿಗಳಿಗೆ, ಕ್ರೀಡಾಪಟುಗಳಿಗೆ, ಕಲಾವಿದರುಗಳಿಗೆ ವಿವಿಧ ಪರೀಕ್ಷೆಗಳಲ್ಲಿ, ಸ್ಪರ್ಧೆಗಳಲ್ಲಿ ಉನ್ನತ ಶ್ರೇಣಿ ಯಲ್ಲಿ ಉತ್ತೀರ್ಣರಾದಾಗ ಸಂಘ ಸಂಸ್ಥೆಗಳು, ಸಾರ್ವಜನಿಕರು ಅಭಿನಂದಿಸಿ ಬೆನ್ನು ತಟ್ಟಿದಾಗ, ಅದು ಉತ್ತೀರ್ಣರಾದವರೀಗೆ ಮಾತ್ರವಲ್ಲ ಉಳಿದವರೀಗೂ ಪ್ರೇರಣೆಯಾಗುತ್ತದೆ ಎಂದು ರಾಮರಾಜ ಕ್ಷತ್ರಿಯ ಯಾನೆ ಕೋಟೆಯಾರ್ ಸೇವಾ ಸಂಘ ಜಿಲ್ಲಾ ಸಂಘ ಉಪಾಧ್ಯಕ್ಷೆ ಉಶಾಕಿರಣ್ ಹೇಳಿದರು.
ಅವರು ಕಾಸರಗೋಡು ಕನ್ನಡ ಭವನದಲ್ಲಿ “ಮಂಗಳೂರು ವಿಶ್ವವಿದ್ಯಾಲಯ 2023-24 ನೇ ಸಾಲಿನ ಸ್ನಾತಕೋತ್ತರ ಪರೀಕ್ಷೆಯಲ್ಲಿ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಷಯದಲ್ಲಿ ಪ್ರಥಮ ಸ್ಥಾನ ಚಿನ್ನದ ಪದಕದೊಂದಿಗೆ ಪಡೆದ ಕಾಸರಗೋಡು ಜಿಲ್ಲೆಯ ಚಿತ್ತಾರಿಯ ಗಿರೀಶ್ ಪಿ. ಎಂ. ಅವರ ಸಾಧನೆಗೆ ನೀಡಿದ ಅಭಿನಂದನಾ ಸಮಾರಂಭದ ಅದ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡ ಭವನದಲ್ಲಿ ನಡೆದ ಈ ಸರಳ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರಾಮರಾಜ ಕ್ಷತ್ರಿಯ ಕೂಡ್ಲು ಉಪಸಂಘ ಅಧ್ಯಕ್ಷ ಸತೀಶ್ ಕೂಡ್ಲು, ವಿಶ್ವ ರಾಮಕ್ಷತ್ರಿಯ ಮಹಾಸಂಘ ಸಂಘಟನಾ ಕಾರ್ಯದರ್ಶಿ ಸಂಧ್ಯಾರಾಣಿ ಟೀಚರ್, ಎಡನೀರು ಹೈಯರ್ ಸೆಕೆಂಡರಿ ಅಧ್ಯಾಪಕ ಪ್ರವೀಣ್ ಶೆಟ್ಟಿ ಮಾಸ್ಟರ್, ಅಭಿನಂದನಾ ಮಾತುಗಳನ್ನಾಡಿದರು. ಕನ್ನಡ ಭವನ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಹಾಗೂ ಅತಿಥಿಗಳು ಶಾಲು ಹೊದಿಸಿ, ಹಾರ ತೊಡಿಸಿ, ಅಭಿನಂದನ ಪತ್ರ, ಸ್ಮರಣಿಕೆ ನೀಡಿ ಗಿರೀಶ್ ಪಿ ಎಂ ಅವರನ್ನು ಅಭಿನಂದಿಸಿದರು. ಕನ್ನಡ ಭವನದ ಸಂಘಟನಾ ಕಾರ್ಯದರ್ಶಿ ರಾಜೇಶ್ ಕೋಟೆಕಣಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಸಂಧ್ಯಾ ರಾಣಿ ಟೀಚರ್ ವಂದಿಸಿದರು.
ಅಭಿನಂದನೆ ಸ್ವೀಕರಿಸಿದ ಗಿರೀಶ್ ಪಿ. ಎಂ. ಹರ್ಷ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು