4:27 AM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಗೊಂಬೆಗಳೇ ಇಲ್ಲಿ ಪ್ರಮುಖ ಆಕರ್ಷಣೆ: ನಾಳೆಯಿಂದ ದಸರಾ ಹಬ್ಬದ ಆಲಂಕಾರಿಕ ವಸ್ತುಗಳ ವಸ್ತುಪ್ರದರ್ಶನ ಹಾಗೂ ಮಾರಾಟ ಮೇಳ

07/10/2021, 20:13

ಬೆಂಗಳೂರು(reporterkarnataka.com): ನಾಡ ಹಬ್ಬ ದಸರಾ ಅಂಗವಾಗಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಅಕ್ಟೋಬರ್‌ 8 ರಿಂದ 10 ದಿನಗಳ ಕಾಲ ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ. 

ಚಿತ್ತಾರ ಹಾಗೂ ಗ್ರಾಂಡ್‌ ಫ್ಲಿಯಾ ಮಾರ್ಕೇಟ್‌ ಸಹಯೋಗದಲ್ಲಿ ಏಕ್ ಈ ಮಾರಾಟ ಮೇಳದಲ್ಲಿ ದಸರಾ ಆಲಂಕಾರಕ್ಕೆ ಬೇಕಾಗಿರುವ ವಿಶೇಷ ಗೊಂಬೆಗಳು ಹಾಗೂ ಇನ್ನಿತರ ವಸ್ತುಗಳ ಒಂದೇ ವೇದಿಕೆಯ ಅಡಿಯಲ್ಲಿ ದೊರೆಯಲಿವೆ. 


ಪ್ರತಿ ದಸರಾ ಸಂಧರ್ಭದಲ್ಲೂ ತಮ್ಮ ಬೊಂಬೆಗಳ ಸಂಗ್ರಹದಲ್ಲಿ ಹೊಸತನ ಕಾಪಾಡುವ ನಿಟ್ಟಿನಲ್ಲಿ ಗ್ರಾಹಕರು ಕೆಲವೊಂದು ಗೊಂಬೆಗಳನ್ನು ಖರೀದಿಸುವುದು ನಡೆದು ಬಂದಿರುವ ಸಂಪ್ರದಾಯ. ಇಂತಹ ಸಂಪ್ರದಾಯಕ್ಕೆ ಪುಷ್ಠಿ ಕೊಡುವ ನಿಟ್ಟಿನಲ್ಲಿ ಹಾಗೂ ದಸರಾ ಹಬ್ಬಕ್ಕೆ ಬೇಕಾದ ಎಲ್ಲ ಸಾಮಗ್ರಿಗಳನ್ನು ಒಂದೇ ವೇದಿಕೆಯಡಿಯಲ್ಲಿ ಸಿಗುವ ರೀತಿಯಲ್ಲಿ ಮಾಡುವ ದೃಷ್ಟಿಯಿಂದ ಅಕ್ಟೋಬರ್‌ 8 ರಿಂದ 17 ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ‌ ಇಂಡಿಯನ್‌ ಆರ್ಟಿಸನ್ಸ್‌ ಕರಕುಶಲ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ. 


ಈ ಪ್ರದರ್ಶನ ಹಾಗೂ ಮಾರಾಟ ಮೇಳದ ಪ್ರಮುಖ ಆಕರ್ಷಣೆ ದಸರಾ ಗೊಂಬೆಗಳು. ಈ ಬಾರಿ ಒಂದೇ ವೇದಿಕೆಯ ಅಡಿಯಲ್ಲಿ ಎಲ್ಲಾ ರೀತಿಯ ಹಾಗೂ ವಿಭಿನ್ನ ಆಯಾಮದ ಗೊಂಬೆಗಳನ್ನು ಖರೀದಿಸಬಹುದಾಗಿದೆ. ಇದರ ಜೊತೆಯಲ್ಲಿಯೇ ಹಬ್ಬಕ್ಕೆ ಬೇಕಾಗಿರುವ ಎಲ್ಲಾ ರೀತಿಯ ಸಾಮಗ್ರಿಗಳನ್ನು ಇಲ್ಲಿ ಕೊಳ್ಳಬಹುದಾಗಿದೆ. ಅಲಂಕಾರಿಕ ವಸ್ತುಗಳ ಜೊತೆಯಲ್ಲಿಯೇ ಮನೆ ಮಂದಿಗೆ ಬೇಕಾಗಿರುವ ಬಟ್ಟೆಗಳು ಹಾಗೂ ಇನ್ನಿತರೆ ವಸ್ತುಗಳನ್ನು ಕೊಳ್ಳಬಹುದಾಗಿದೆ.


80ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಪ್ರಮುಖ ಆಕರ್ಷಣೆಯಾಗಿರಲಿವೆ

ಇತ್ತೀಚಿನ ಸುದ್ದಿ

ಜಾಹೀರಾತು