4:41 AM Friday9 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಗೊಂಬೆಗಳೇ ಇಲ್ಲಿ ಪ್ರಮುಖ ಆಕರ್ಷಣೆ: ನಾಳೆಯಿಂದ ದಸರಾ ಹಬ್ಬದ ಆಲಂಕಾರಿಕ ವಸ್ತುಗಳ ವಸ್ತುಪ್ರದರ್ಶನ ಹಾಗೂ ಮಾರಾಟ ಮೇಳ

07/10/2021, 20:13

ಬೆಂಗಳೂರು(reporterkarnataka.com): ನಾಡ ಹಬ್ಬ ದಸರಾ ಅಂಗವಾಗಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಅಕ್ಟೋಬರ್‌ 8 ರಿಂದ 10 ದಿನಗಳ ಕಾಲ ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ. 

ಚಿತ್ತಾರ ಹಾಗೂ ಗ್ರಾಂಡ್‌ ಫ್ಲಿಯಾ ಮಾರ್ಕೇಟ್‌ ಸಹಯೋಗದಲ್ಲಿ ಏಕ್ ಈ ಮಾರಾಟ ಮೇಳದಲ್ಲಿ ದಸರಾ ಆಲಂಕಾರಕ್ಕೆ ಬೇಕಾಗಿರುವ ವಿಶೇಷ ಗೊಂಬೆಗಳು ಹಾಗೂ ಇನ್ನಿತರ ವಸ್ತುಗಳ ಒಂದೇ ವೇದಿಕೆಯ ಅಡಿಯಲ್ಲಿ ದೊರೆಯಲಿವೆ. 


ಪ್ರತಿ ದಸರಾ ಸಂಧರ್ಭದಲ್ಲೂ ತಮ್ಮ ಬೊಂಬೆಗಳ ಸಂಗ್ರಹದಲ್ಲಿ ಹೊಸತನ ಕಾಪಾಡುವ ನಿಟ್ಟಿನಲ್ಲಿ ಗ್ರಾಹಕರು ಕೆಲವೊಂದು ಗೊಂಬೆಗಳನ್ನು ಖರೀದಿಸುವುದು ನಡೆದು ಬಂದಿರುವ ಸಂಪ್ರದಾಯ. ಇಂತಹ ಸಂಪ್ರದಾಯಕ್ಕೆ ಪುಷ್ಠಿ ಕೊಡುವ ನಿಟ್ಟಿನಲ್ಲಿ ಹಾಗೂ ದಸರಾ ಹಬ್ಬಕ್ಕೆ ಬೇಕಾದ ಎಲ್ಲ ಸಾಮಗ್ರಿಗಳನ್ನು ಒಂದೇ ವೇದಿಕೆಯಡಿಯಲ್ಲಿ ಸಿಗುವ ರೀತಿಯಲ್ಲಿ ಮಾಡುವ ದೃಷ್ಟಿಯಿಂದ ಅಕ್ಟೋಬರ್‌ 8 ರಿಂದ 17 ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ‌ ಇಂಡಿಯನ್‌ ಆರ್ಟಿಸನ್ಸ್‌ ಕರಕುಶಲ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ. 


ಈ ಪ್ರದರ್ಶನ ಹಾಗೂ ಮಾರಾಟ ಮೇಳದ ಪ್ರಮುಖ ಆಕರ್ಷಣೆ ದಸರಾ ಗೊಂಬೆಗಳು. ಈ ಬಾರಿ ಒಂದೇ ವೇದಿಕೆಯ ಅಡಿಯಲ್ಲಿ ಎಲ್ಲಾ ರೀತಿಯ ಹಾಗೂ ವಿಭಿನ್ನ ಆಯಾಮದ ಗೊಂಬೆಗಳನ್ನು ಖರೀದಿಸಬಹುದಾಗಿದೆ. ಇದರ ಜೊತೆಯಲ್ಲಿಯೇ ಹಬ್ಬಕ್ಕೆ ಬೇಕಾಗಿರುವ ಎಲ್ಲಾ ರೀತಿಯ ಸಾಮಗ್ರಿಗಳನ್ನು ಇಲ್ಲಿ ಕೊಳ್ಳಬಹುದಾಗಿದೆ. ಅಲಂಕಾರಿಕ ವಸ್ತುಗಳ ಜೊತೆಯಲ್ಲಿಯೇ ಮನೆ ಮಂದಿಗೆ ಬೇಕಾಗಿರುವ ಬಟ್ಟೆಗಳು ಹಾಗೂ ಇನ್ನಿತರೆ ವಸ್ತುಗಳನ್ನು ಕೊಳ್ಳಬಹುದಾಗಿದೆ.


80ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಪ್ರಮುಖ ಆಕರ್ಷಣೆಯಾಗಿರಲಿವೆ

ಇತ್ತೀಚಿನ ಸುದ್ದಿ

ಜಾಹೀರಾತು