10:41 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಗೊಂಬೆಗಳೇ ಇಲ್ಲಿ ಪ್ರಮುಖ ಆಕರ್ಷಣೆ: ನಾಳೆಯಿಂದ ದಸರಾ ಹಬ್ಬದ ಆಲಂಕಾರಿಕ ವಸ್ತುಗಳ ವಸ್ತುಪ್ರದರ್ಶನ ಹಾಗೂ ಮಾರಾಟ ಮೇಳ

07/10/2021, 20:13

ಬೆಂಗಳೂರು(reporterkarnataka.com): ನಾಡ ಹಬ್ಬ ದಸರಾ ಅಂಗವಾಗಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಅಕ್ಟೋಬರ್‌ 8 ರಿಂದ 10 ದಿನಗಳ ಕಾಲ ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ. 

ಚಿತ್ತಾರ ಹಾಗೂ ಗ್ರಾಂಡ್‌ ಫ್ಲಿಯಾ ಮಾರ್ಕೇಟ್‌ ಸಹಯೋಗದಲ್ಲಿ ಏಕ್ ಈ ಮಾರಾಟ ಮೇಳದಲ್ಲಿ ದಸರಾ ಆಲಂಕಾರಕ್ಕೆ ಬೇಕಾಗಿರುವ ವಿಶೇಷ ಗೊಂಬೆಗಳು ಹಾಗೂ ಇನ್ನಿತರ ವಸ್ತುಗಳ ಒಂದೇ ವೇದಿಕೆಯ ಅಡಿಯಲ್ಲಿ ದೊರೆಯಲಿವೆ. 


ಪ್ರತಿ ದಸರಾ ಸಂಧರ್ಭದಲ್ಲೂ ತಮ್ಮ ಬೊಂಬೆಗಳ ಸಂಗ್ರಹದಲ್ಲಿ ಹೊಸತನ ಕಾಪಾಡುವ ನಿಟ್ಟಿನಲ್ಲಿ ಗ್ರಾಹಕರು ಕೆಲವೊಂದು ಗೊಂಬೆಗಳನ್ನು ಖರೀದಿಸುವುದು ನಡೆದು ಬಂದಿರುವ ಸಂಪ್ರದಾಯ. ಇಂತಹ ಸಂಪ್ರದಾಯಕ್ಕೆ ಪುಷ್ಠಿ ಕೊಡುವ ನಿಟ್ಟಿನಲ್ಲಿ ಹಾಗೂ ದಸರಾ ಹಬ್ಬಕ್ಕೆ ಬೇಕಾದ ಎಲ್ಲ ಸಾಮಗ್ರಿಗಳನ್ನು ಒಂದೇ ವೇದಿಕೆಯಡಿಯಲ್ಲಿ ಸಿಗುವ ರೀತಿಯಲ್ಲಿ ಮಾಡುವ ದೃಷ್ಟಿಯಿಂದ ಅಕ್ಟೋಬರ್‌ 8 ರಿಂದ 17 ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ‌ ಇಂಡಿಯನ್‌ ಆರ್ಟಿಸನ್ಸ್‌ ಕರಕುಶಲ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ. 


ಈ ಪ್ರದರ್ಶನ ಹಾಗೂ ಮಾರಾಟ ಮೇಳದ ಪ್ರಮುಖ ಆಕರ್ಷಣೆ ದಸರಾ ಗೊಂಬೆಗಳು. ಈ ಬಾರಿ ಒಂದೇ ವೇದಿಕೆಯ ಅಡಿಯಲ್ಲಿ ಎಲ್ಲಾ ರೀತಿಯ ಹಾಗೂ ವಿಭಿನ್ನ ಆಯಾಮದ ಗೊಂಬೆಗಳನ್ನು ಖರೀದಿಸಬಹುದಾಗಿದೆ. ಇದರ ಜೊತೆಯಲ್ಲಿಯೇ ಹಬ್ಬಕ್ಕೆ ಬೇಕಾಗಿರುವ ಎಲ್ಲಾ ರೀತಿಯ ಸಾಮಗ್ರಿಗಳನ್ನು ಇಲ್ಲಿ ಕೊಳ್ಳಬಹುದಾಗಿದೆ. ಅಲಂಕಾರಿಕ ವಸ್ತುಗಳ ಜೊತೆಯಲ್ಲಿಯೇ ಮನೆ ಮಂದಿಗೆ ಬೇಕಾಗಿರುವ ಬಟ್ಟೆಗಳು ಹಾಗೂ ಇನ್ನಿತರೆ ವಸ್ತುಗಳನ್ನು ಕೊಳ್ಳಬಹುದಾಗಿದೆ.


80ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಪ್ರಮುಖ ಆಕರ್ಷಣೆಯಾಗಿರಲಿವೆ

ಇತ್ತೀಚಿನ ಸುದ್ದಿ

ಜಾಹೀರಾತು