7:55 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು…

ಇತ್ತೀಚಿನ ಸುದ್ದಿ

ಗೋಣಿಕೊಪ್ಪ: ಕೇರಳದ ಖಾಸಗಿ ಬಸ್ -ಬೈಕ್ ಅಪಘಾತ: ಸವಾರರಿಬ್ಬರ ದಾರುಣ ಸಾವು

06/02/2026, 21:24

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೇರಳ ಮೂಲದ ಖಾಸಗಿ ಬಸ್ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಇಬ್ಬರೂ ಬೈಕ್ ಸವಾರರು ಮೃತಪಟ್ಟ ಘಟನೆ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪ ದಲ್ಲಿ ನಡೆದಿದೆ.ಕಳೆದ ರಾತ್ರಿ ಗೋಣಿಕೊಪ್ಪದ ಮುಖ್ಯ ರಸ್ತೆಯ ಉಮಾ ಮಹೇಶ್ವರಿ ದೇವಾಲಯ ಬಳಿ ತೆರಳುತ್ತಿದ್ದ ಬೈಕ್ ಗೆ ಏಕಾಎಕಿ ಬಸ್ ಅಪ್ಪಳಿಸಿದ್ದು ಗೋಣಿಕೊಪ್ಪಲಿನ ಸುಲೈಮಾನ್(32)ಹಾಗೂ ಪೌಲೋಸ್(28) ಮೃತ ರಾಗಿದ್ದಾರೆ.
ದೇವಾಲಯದ ಮುಖ್ಯ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ
ಸುಲೈಮಾನ್‌ ಸ್ಥಳದಲ್ಲಿ ಮೃತಪಟ್ರೆ ಇನ್ನೊಬ್ಬ ಬೈಕ್ ಸವಾರ ಗಂಭೀರ ಗಾಯಗೊಂಡ ಚೆನ್ನಂಗೊಲ್ಲಿ ನಿವಾಸಿ ಪೌಲೋಸ್ ಅವರನ್ನು ಹೆಚ್ಚಿನ ಚಿಕಿತ್ಸೆ ಗೆ ಮೈಸೂರಿಗೆ ಕರೆದೊಯ್ಯುವ ಸಂದರ್ಭ ದಾರಿ ಮದ್ಯೆ ಸಾವನಪ್ಪಿದ್ದಾರೆ. ಖಾಸಗಿ ಬಸ್ ಕೇರಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಇದಾಗಿದೆ. ಪ್ರಯಾಣಿಕರನ್ನು ಪಡೆಯುವ ಸಲುವಾಗಿ ತಡರಾತ್ರಿ ಈ ಭಾಗದಲ್ಲಿ ಕೇರಳದ ಖಾಸಗಿ ಬಸ್ ಗಳು ನಡೆಸುವ ಪೈಪೋಟಿ ಈ ಘಟನೆಗೆ ಕಾರಣವಾಗಿದೆ. ಸದ್ಯ
ಗೋಣಿಕೊಪ್ಪಲು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು ಬಸ್ ಅನ್ನು ಪೊಲೀಸರ ವಶಪಡಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು