8:51 PM Saturday21 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

Good News: ಭಾರತೀಯ ರೈಲ್ವೆ ಇನ್ಮುಂದೆ ನಿಮ್ಮ ಮನೆ ಬಾಗಿಲಿಗೇ ತಲುಪಿಸಲಿದೆ ಪಾರ್ಸೆಲ್‌ !

21/02/2022, 10:10

ಹೊಸದಿಲ್ಲಿ(reporterkarnataka.com):

ಭಾರತೀಯ ರೈಲ್ವೆ ಅಂದರೆ ಅದು ಜನಸಾಮಾನ್ಯರ ಜೀವನದ ಅವಿಭಾಜ್ಯ ಅಂಗ. ಇಲ್ಲಿ ಜನರು ಕೇವಲ ಓಡಾಟ ನಡೆಸುವುದು ಮಾತ್ರವಲ್ಲದೆ, ಅನೇಕ ವಸ್ತುಗಳ ಪಾರ್ಸೆಲ್‌ಗಳನ್ನು ಮಾಡುತ್ತಾರೆ.

ಈ ರೀತಿ ರೈಲ್ವೆಯಲ್ಲಿ ಕಳುಹಿಸಲಾಗುತ್ತಿದ್ದ ಪಾರ್ಸೆಲ್‌ಗಳನ್ನು ರೈಲು ನಿಲ್ದಾಣಕ್ಕೆ ಹೋಗಿ ಪಡೆದುಕೊಂಡು ಬರಬೇಕಿತ್ತು. ಆದರೆ ಇದೀಗ ಇಲಾಖೆ ಜನರಿಗೆ ಇನ್ನಷ್ಟು ಹತ್ತಿರವಾಗಿದೆ.

ಭಾರತೀಯ ರೈಲ್ವೆ ವಿವಿಧ ವಿಷಯಗಳಲ್ಲಿ ಮೇಲ್ದರ್ಜೆಗೆ ಏರುತ್ತಿರುವ ಈ ಸಂದರ್ಭದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಪಾರ್ಸೆಲ್‌ಗಳನ್ನು ಮನೆ ಬಾಗಿಲಿಗೆ ತರುವ ಯೋಜನೆ ಆರಂಭಿಸಿದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳು ಭರದಿಂದ ಸಾಗಿದ್ದು, ಶೀಘ್ರವೇ ಇದು ಜನ ಸಾಮಾನ್ಯರಿಗೆ ಲಭ್ಯವಾಗಲಿದೆ.

ದೇಶದ ಯಾವುದೇ ಮೂಲೆಯಿಂದ ಚಿಕ್ಕಪುಟ್ಟ ವಸ್ತುಗಳಿಂದ ಹಿಡಿದು ಬೃಹದಾಕಾರದ ವಸ್ತುಗಳನ್ನು ಪಾರ್ಸೆಲ್‌ ಕಳುಹಿಸಿದರೆ ಅದು ಯಾರಿಗೆ ತಲುಪಬೇಕೋ ಅವರ ಮನೆಯ ಬಾಗಿಲಿಗೇ ಮುಟ್ಟಲಿದೆ.

ಇದಕ್ಕಾಗಿ ಮೊಬೈಲ್‌ನಲ್ಲಿ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಳ್ಳುವ ಅಗತ್ಯವಿದ್ದು, ಅದರ ಕುರಿತು ಸಂಪೂರ್ಣ ವಿವರವನ್ನು ರೈಲ್ವೆ ಇಲಾಖೆ ಶೀಘ್ರದಲ್ಲಿ ನೀಡಲಿದೆ. ಬೇರೆಲ್ಲಾ ಕೋರಿಯರ್‌ ಸರ್ವೀಸ್‌ಗಳಂತೆ ಈ ಅಪ್ಲಿಕೇಶನ್ ಸಹಾಯದಿಂದ ವಸ್ತುಗಳನ್ನು ಟ್ರ್ಯಾಕ್ ಮಾಡಲು ಸಾಧ್ಯವಾಗುತ್ತದೆ.

ಈಬಗ್ಗೆ ರೈಲ್ವೆಯು ಮನೆ-ಮನೆಗೆ ವಿತರಣಾ ಸೇವೆಯ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸುತ್ತಿದೆ. ಈ ಮೂಲಕ ದೂರದ ಊರುಗಳಿಂದ ನಮಗೆ ಬೇಕಾಸ ವಸ್ತುಗಳನ್ನು ರೈಲು ಸೇವೆ ಮೂಲಕವೂ ಸುಲಭವಾಗಿ ಪಡೆಯಬಹುದು ಎಂದು ಇಲಾಖೆ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು