12:47 PM Wednesday22 - October 2025
ಬ್ರೇಕಿಂಗ್ ನ್ಯೂಸ್
ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ

ಇತ್ತೀಚಿನ ಸುದ್ದಿ

Good News: ಭಾರತೀಯ ರೈಲ್ವೆ ಇನ್ಮುಂದೆ ನಿಮ್ಮ ಮನೆ ಬಾಗಿಲಿಗೇ ತಲುಪಿಸಲಿದೆ ಪಾರ್ಸೆಲ್‌ !

21/02/2022, 10:10

ಹೊಸದಿಲ್ಲಿ(reporterkarnataka.com):

ಭಾರತೀಯ ರೈಲ್ವೆ ಅಂದರೆ ಅದು ಜನಸಾಮಾನ್ಯರ ಜೀವನದ ಅವಿಭಾಜ್ಯ ಅಂಗ. ಇಲ್ಲಿ ಜನರು ಕೇವಲ ಓಡಾಟ ನಡೆಸುವುದು ಮಾತ್ರವಲ್ಲದೆ, ಅನೇಕ ವಸ್ತುಗಳ ಪಾರ್ಸೆಲ್‌ಗಳನ್ನು ಮಾಡುತ್ತಾರೆ.

ಈ ರೀತಿ ರೈಲ್ವೆಯಲ್ಲಿ ಕಳುಹಿಸಲಾಗುತ್ತಿದ್ದ ಪಾರ್ಸೆಲ್‌ಗಳನ್ನು ರೈಲು ನಿಲ್ದಾಣಕ್ಕೆ ಹೋಗಿ ಪಡೆದುಕೊಂಡು ಬರಬೇಕಿತ್ತು. ಆದರೆ ಇದೀಗ ಇಲಾಖೆ ಜನರಿಗೆ ಇನ್ನಷ್ಟು ಹತ್ತಿರವಾಗಿದೆ.

ಭಾರತೀಯ ರೈಲ್ವೆ ವಿವಿಧ ವಿಷಯಗಳಲ್ಲಿ ಮೇಲ್ದರ್ಜೆಗೆ ಏರುತ್ತಿರುವ ಈ ಸಂದರ್ಭದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಪಾರ್ಸೆಲ್‌ಗಳನ್ನು ಮನೆ ಬಾಗಿಲಿಗೆ ತರುವ ಯೋಜನೆ ಆರಂಭಿಸಿದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳು ಭರದಿಂದ ಸಾಗಿದ್ದು, ಶೀಘ್ರವೇ ಇದು ಜನ ಸಾಮಾನ್ಯರಿಗೆ ಲಭ್ಯವಾಗಲಿದೆ.

ದೇಶದ ಯಾವುದೇ ಮೂಲೆಯಿಂದ ಚಿಕ್ಕಪುಟ್ಟ ವಸ್ತುಗಳಿಂದ ಹಿಡಿದು ಬೃಹದಾಕಾರದ ವಸ್ತುಗಳನ್ನು ಪಾರ್ಸೆಲ್‌ ಕಳುಹಿಸಿದರೆ ಅದು ಯಾರಿಗೆ ತಲುಪಬೇಕೋ ಅವರ ಮನೆಯ ಬಾಗಿಲಿಗೇ ಮುಟ್ಟಲಿದೆ.

ಇದಕ್ಕಾಗಿ ಮೊಬೈಲ್‌ನಲ್ಲಿ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಳ್ಳುವ ಅಗತ್ಯವಿದ್ದು, ಅದರ ಕುರಿತು ಸಂಪೂರ್ಣ ವಿವರವನ್ನು ರೈಲ್ವೆ ಇಲಾಖೆ ಶೀಘ್ರದಲ್ಲಿ ನೀಡಲಿದೆ. ಬೇರೆಲ್ಲಾ ಕೋರಿಯರ್‌ ಸರ್ವೀಸ್‌ಗಳಂತೆ ಈ ಅಪ್ಲಿಕೇಶನ್ ಸಹಾಯದಿಂದ ವಸ್ತುಗಳನ್ನು ಟ್ರ್ಯಾಕ್ ಮಾಡಲು ಸಾಧ್ಯವಾಗುತ್ತದೆ.

ಈಬಗ್ಗೆ ರೈಲ್ವೆಯು ಮನೆ-ಮನೆಗೆ ವಿತರಣಾ ಸೇವೆಯ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸುತ್ತಿದೆ. ಈ ಮೂಲಕ ದೂರದ ಊರುಗಳಿಂದ ನಮಗೆ ಬೇಕಾಸ ವಸ್ತುಗಳನ್ನು ರೈಲು ಸೇವೆ ಮೂಲಕವೂ ಸುಲಭವಾಗಿ ಪಡೆಯಬಹುದು ಎಂದು ಇಲಾಖೆ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು