3:21 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

Good News: ಭಾರತೀಯ ರೈಲ್ವೆ ಇನ್ಮುಂದೆ ನಿಮ್ಮ ಮನೆ ಬಾಗಿಲಿಗೇ ತಲುಪಿಸಲಿದೆ ಪಾರ್ಸೆಲ್‌ !

21/02/2022, 10:10

ಹೊಸದಿಲ್ಲಿ(reporterkarnataka.com):

ಭಾರತೀಯ ರೈಲ್ವೆ ಅಂದರೆ ಅದು ಜನಸಾಮಾನ್ಯರ ಜೀವನದ ಅವಿಭಾಜ್ಯ ಅಂಗ. ಇಲ್ಲಿ ಜನರು ಕೇವಲ ಓಡಾಟ ನಡೆಸುವುದು ಮಾತ್ರವಲ್ಲದೆ, ಅನೇಕ ವಸ್ತುಗಳ ಪಾರ್ಸೆಲ್‌ಗಳನ್ನು ಮಾಡುತ್ತಾರೆ.

ಈ ರೀತಿ ರೈಲ್ವೆಯಲ್ಲಿ ಕಳುಹಿಸಲಾಗುತ್ತಿದ್ದ ಪಾರ್ಸೆಲ್‌ಗಳನ್ನು ರೈಲು ನಿಲ್ದಾಣಕ್ಕೆ ಹೋಗಿ ಪಡೆದುಕೊಂಡು ಬರಬೇಕಿತ್ತು. ಆದರೆ ಇದೀಗ ಇಲಾಖೆ ಜನರಿಗೆ ಇನ್ನಷ್ಟು ಹತ್ತಿರವಾಗಿದೆ.

ಭಾರತೀಯ ರೈಲ್ವೆ ವಿವಿಧ ವಿಷಯಗಳಲ್ಲಿ ಮೇಲ್ದರ್ಜೆಗೆ ಏರುತ್ತಿರುವ ಈ ಸಂದರ್ಭದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಪಾರ್ಸೆಲ್‌ಗಳನ್ನು ಮನೆ ಬಾಗಿಲಿಗೆ ತರುವ ಯೋಜನೆ ಆರಂಭಿಸಿದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳು ಭರದಿಂದ ಸಾಗಿದ್ದು, ಶೀಘ್ರವೇ ಇದು ಜನ ಸಾಮಾನ್ಯರಿಗೆ ಲಭ್ಯವಾಗಲಿದೆ.

ದೇಶದ ಯಾವುದೇ ಮೂಲೆಯಿಂದ ಚಿಕ್ಕಪುಟ್ಟ ವಸ್ತುಗಳಿಂದ ಹಿಡಿದು ಬೃಹದಾಕಾರದ ವಸ್ತುಗಳನ್ನು ಪಾರ್ಸೆಲ್‌ ಕಳುಹಿಸಿದರೆ ಅದು ಯಾರಿಗೆ ತಲುಪಬೇಕೋ ಅವರ ಮನೆಯ ಬಾಗಿಲಿಗೇ ಮುಟ್ಟಲಿದೆ.

ಇದಕ್ಕಾಗಿ ಮೊಬೈಲ್‌ನಲ್ಲಿ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಳ್ಳುವ ಅಗತ್ಯವಿದ್ದು, ಅದರ ಕುರಿತು ಸಂಪೂರ್ಣ ವಿವರವನ್ನು ರೈಲ್ವೆ ಇಲಾಖೆ ಶೀಘ್ರದಲ್ಲಿ ನೀಡಲಿದೆ. ಬೇರೆಲ್ಲಾ ಕೋರಿಯರ್‌ ಸರ್ವೀಸ್‌ಗಳಂತೆ ಈ ಅಪ್ಲಿಕೇಶನ್ ಸಹಾಯದಿಂದ ವಸ್ತುಗಳನ್ನು ಟ್ರ್ಯಾಕ್ ಮಾಡಲು ಸಾಧ್ಯವಾಗುತ್ತದೆ.

ಈಬಗ್ಗೆ ರೈಲ್ವೆಯು ಮನೆ-ಮನೆಗೆ ವಿತರಣಾ ಸೇವೆಯ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸುತ್ತಿದೆ. ಈ ಮೂಲಕ ದೂರದ ಊರುಗಳಿಂದ ನಮಗೆ ಬೇಕಾಸ ವಸ್ತುಗಳನ್ನು ರೈಲು ಸೇವೆ ಮೂಲಕವೂ ಸುಲಭವಾಗಿ ಪಡೆಯಬಹುದು ಎಂದು ಇಲಾಖೆ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು