12:27 PM Monday25 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

Good News: ಭಾರತೀಯ ರೈಲ್ವೆ ಇನ್ಮುಂದೆ ನಿಮ್ಮ ಮನೆ ಬಾಗಿಲಿಗೇ ತಲುಪಿಸಲಿದೆ ಪಾರ್ಸೆಲ್‌ !

21/02/2022, 10:10

ಹೊಸದಿಲ್ಲಿ(reporterkarnataka.com):

ಭಾರತೀಯ ರೈಲ್ವೆ ಅಂದರೆ ಅದು ಜನಸಾಮಾನ್ಯರ ಜೀವನದ ಅವಿಭಾಜ್ಯ ಅಂಗ. ಇಲ್ಲಿ ಜನರು ಕೇವಲ ಓಡಾಟ ನಡೆಸುವುದು ಮಾತ್ರವಲ್ಲದೆ, ಅನೇಕ ವಸ್ತುಗಳ ಪಾರ್ಸೆಲ್‌ಗಳನ್ನು ಮಾಡುತ್ತಾರೆ.

ಈ ರೀತಿ ರೈಲ್ವೆಯಲ್ಲಿ ಕಳುಹಿಸಲಾಗುತ್ತಿದ್ದ ಪಾರ್ಸೆಲ್‌ಗಳನ್ನು ರೈಲು ನಿಲ್ದಾಣಕ್ಕೆ ಹೋಗಿ ಪಡೆದುಕೊಂಡು ಬರಬೇಕಿತ್ತು. ಆದರೆ ಇದೀಗ ಇಲಾಖೆ ಜನರಿಗೆ ಇನ್ನಷ್ಟು ಹತ್ತಿರವಾಗಿದೆ.

ಭಾರತೀಯ ರೈಲ್ವೆ ವಿವಿಧ ವಿಷಯಗಳಲ್ಲಿ ಮೇಲ್ದರ್ಜೆಗೆ ಏರುತ್ತಿರುವ ಈ ಸಂದರ್ಭದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಪಾರ್ಸೆಲ್‌ಗಳನ್ನು ಮನೆ ಬಾಗಿಲಿಗೆ ತರುವ ಯೋಜನೆ ಆರಂಭಿಸಿದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳು ಭರದಿಂದ ಸಾಗಿದ್ದು, ಶೀಘ್ರವೇ ಇದು ಜನ ಸಾಮಾನ್ಯರಿಗೆ ಲಭ್ಯವಾಗಲಿದೆ.

ದೇಶದ ಯಾವುದೇ ಮೂಲೆಯಿಂದ ಚಿಕ್ಕಪುಟ್ಟ ವಸ್ತುಗಳಿಂದ ಹಿಡಿದು ಬೃಹದಾಕಾರದ ವಸ್ತುಗಳನ್ನು ಪಾರ್ಸೆಲ್‌ ಕಳುಹಿಸಿದರೆ ಅದು ಯಾರಿಗೆ ತಲುಪಬೇಕೋ ಅವರ ಮನೆಯ ಬಾಗಿಲಿಗೇ ಮುಟ್ಟಲಿದೆ.

ಇದಕ್ಕಾಗಿ ಮೊಬೈಲ್‌ನಲ್ಲಿ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಳ್ಳುವ ಅಗತ್ಯವಿದ್ದು, ಅದರ ಕುರಿತು ಸಂಪೂರ್ಣ ವಿವರವನ್ನು ರೈಲ್ವೆ ಇಲಾಖೆ ಶೀಘ್ರದಲ್ಲಿ ನೀಡಲಿದೆ. ಬೇರೆಲ್ಲಾ ಕೋರಿಯರ್‌ ಸರ್ವೀಸ್‌ಗಳಂತೆ ಈ ಅಪ್ಲಿಕೇಶನ್ ಸಹಾಯದಿಂದ ವಸ್ತುಗಳನ್ನು ಟ್ರ್ಯಾಕ್ ಮಾಡಲು ಸಾಧ್ಯವಾಗುತ್ತದೆ.

ಈಬಗ್ಗೆ ರೈಲ್ವೆಯು ಮನೆ-ಮನೆಗೆ ವಿತರಣಾ ಸೇವೆಯ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸುತ್ತಿದೆ. ಈ ಮೂಲಕ ದೂರದ ಊರುಗಳಿಂದ ನಮಗೆ ಬೇಕಾಸ ವಸ್ತುಗಳನ್ನು ರೈಲು ಸೇವೆ ಮೂಲಕವೂ ಸುಲಭವಾಗಿ ಪಡೆಯಬಹುದು ಎಂದು ಇಲಾಖೆ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು