3:42 PM Monday6 - July 2026
ಬ್ರೇಕಿಂಗ್ ನ್ಯೂಸ್
ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ…

ಇತ್ತೀಚಿನ ಸುದ್ದಿ

Good News: ಭಾರತೀಯ ರೈಲ್ವೆ ಇನ್ಮುಂದೆ ನಿಮ್ಮ ಮನೆ ಬಾಗಿಲಿಗೇ ತಲುಪಿಸಲಿದೆ ಪಾರ್ಸೆಲ್‌ !

21/02/2022, 10:10

ಹೊಸದಿಲ್ಲಿ(reporterkarnataka.com):

ಭಾರತೀಯ ರೈಲ್ವೆ ಅಂದರೆ ಅದು ಜನಸಾಮಾನ್ಯರ ಜೀವನದ ಅವಿಭಾಜ್ಯ ಅಂಗ. ಇಲ್ಲಿ ಜನರು ಕೇವಲ ಓಡಾಟ ನಡೆಸುವುದು ಮಾತ್ರವಲ್ಲದೆ, ಅನೇಕ ವಸ್ತುಗಳ ಪಾರ್ಸೆಲ್‌ಗಳನ್ನು ಮಾಡುತ್ತಾರೆ.

ಈ ರೀತಿ ರೈಲ್ವೆಯಲ್ಲಿ ಕಳುಹಿಸಲಾಗುತ್ತಿದ್ದ ಪಾರ್ಸೆಲ್‌ಗಳನ್ನು ರೈಲು ನಿಲ್ದಾಣಕ್ಕೆ ಹೋಗಿ ಪಡೆದುಕೊಂಡು ಬರಬೇಕಿತ್ತು. ಆದರೆ ಇದೀಗ ಇಲಾಖೆ ಜನರಿಗೆ ಇನ್ನಷ್ಟು ಹತ್ತಿರವಾಗಿದೆ.

ಭಾರತೀಯ ರೈಲ್ವೆ ವಿವಿಧ ವಿಷಯಗಳಲ್ಲಿ ಮೇಲ್ದರ್ಜೆಗೆ ಏರುತ್ತಿರುವ ಈ ಸಂದರ್ಭದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಪಾರ್ಸೆಲ್‌ಗಳನ್ನು ಮನೆ ಬಾಗಿಲಿಗೆ ತರುವ ಯೋಜನೆ ಆರಂಭಿಸಿದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳು ಭರದಿಂದ ಸಾಗಿದ್ದು, ಶೀಘ್ರವೇ ಇದು ಜನ ಸಾಮಾನ್ಯರಿಗೆ ಲಭ್ಯವಾಗಲಿದೆ.

ದೇಶದ ಯಾವುದೇ ಮೂಲೆಯಿಂದ ಚಿಕ್ಕಪುಟ್ಟ ವಸ್ತುಗಳಿಂದ ಹಿಡಿದು ಬೃಹದಾಕಾರದ ವಸ್ತುಗಳನ್ನು ಪಾರ್ಸೆಲ್‌ ಕಳುಹಿಸಿದರೆ ಅದು ಯಾರಿಗೆ ತಲುಪಬೇಕೋ ಅವರ ಮನೆಯ ಬಾಗಿಲಿಗೇ ಮುಟ್ಟಲಿದೆ.

ಇದಕ್ಕಾಗಿ ಮೊಬೈಲ್‌ನಲ್ಲಿ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಳ್ಳುವ ಅಗತ್ಯವಿದ್ದು, ಅದರ ಕುರಿತು ಸಂಪೂರ್ಣ ವಿವರವನ್ನು ರೈಲ್ವೆ ಇಲಾಖೆ ಶೀಘ್ರದಲ್ಲಿ ನೀಡಲಿದೆ. ಬೇರೆಲ್ಲಾ ಕೋರಿಯರ್‌ ಸರ್ವೀಸ್‌ಗಳಂತೆ ಈ ಅಪ್ಲಿಕೇಶನ್ ಸಹಾಯದಿಂದ ವಸ್ತುಗಳನ್ನು ಟ್ರ್ಯಾಕ್ ಮಾಡಲು ಸಾಧ್ಯವಾಗುತ್ತದೆ.

ಈಬಗ್ಗೆ ರೈಲ್ವೆಯು ಮನೆ-ಮನೆಗೆ ವಿತರಣಾ ಸೇವೆಯ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸುತ್ತಿದೆ. ಈ ಮೂಲಕ ದೂರದ ಊರುಗಳಿಂದ ನಮಗೆ ಬೇಕಾಸ ವಸ್ತುಗಳನ್ನು ರೈಲು ಸೇವೆ ಮೂಲಕವೂ ಸುಲಭವಾಗಿ ಪಡೆಯಬಹುದು ಎಂದು ಇಲಾಖೆ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು