9:24 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್

09/06/2026, 16:24

ಬೆಂಗಳೂರು(reporterkarnataka.com): ಈ ಹಿಂದೆ ನಾನು ಆರೋಗ್ಯ ಸಚಿವನಾಗಿದ್ದ ವೇಳೆ ಆರೋಗ್ಯ ಕರ್ನಾಟಕದಲ್ಲಿ ಬಿಪಿಎಲ್‌ ಕಾರ್ಡ್‌ದಾರರಿಗೆ ಉಚಿತ ಹಾಗೂ ಎಪಿಎಲ್‌ನವರಿಗೆ ಶೇ.70ರಷ್ಟು ಉಚಿತ, ಶೇ.30ರಷ್ಟು ವೆಚ್ಚವನ್ನು ರೋಗಿ ಭರಿಸುವ ವ್ಯವಸ್ಥೆ ಇತ್ತು. ರಾಜ್ಯದಲ್ಲಿ ಶೇ. 70ರಷ್ಟು ರೋಗಿ ಭರಿಸುತ್ತಿದ್ದು, ಶೇ.30 ಸರ್ಕಾರ ಎಂಬಂತಾಗಿದೆ. ಈ ಬಗ್ಗೆ ಪುನರ್‌ ಪರಿಶೀಲನೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್‌ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಪಿಎಲ್‌ ಹಾಗೂ ಬಿಪಿಎಲ್‌ನವರಿಗೆ ಕಡಿಮೆ ದರದಲ್ಲಿ ಚಿಕಿತ್ಸೆ ಒದಗಿಸುವ ಬಗ್ಗೆ ರೂಪುರೇಷೆ ಮಾಡಲಾಗುವುದು ಎಂದು ತಿಳಿಸಿದರು.
ಖಾಸಗಿ ಆಸ್ಪತ್ರೆಯವರು ಆಯುಷ್ಮಾನ್‌ ಕರ್ನಾಟಕ ಯೋಜನೆಯಡಿ ಬಿಪಿಎಲ್‌ ಕಾರ್ಡ್‌ ಹೊಂದಿರುವ ರೋಗಿಯಿಂದ ಹಣ ಪಡೆಯುವಂತಿಲ್ಲ. ಒಂದು ವೇಳೆ ಹೆಚ್ಚುವರಿ ಶುಲ್ಕ ಪಡೆದರೆ ಆರೋಗ್ಯ ಮಿತ್ರರು ಈ ಬಗ್ಗೆ ಗಮನ ಹರಿಸಿ ಮೇಲಿನ ಅಧಿಕಾರಿಗಳ ಮೂಲಕ ಉಚಿತ ಚಿಕಿತ್ಸೆಗೆ ಕ್ರಮ ವಹಿಸಬೇಕು. ಒಂದು ವೇಳೆ ಹೆಚ್ಚುವರಿ ಶುಲ್ಕ ತಡೆಗೆ ವಿಫಲರಾಗುವ ಆರೋಗ್ಯ ಮಿತ್ರರ ವಿರುದ್ಧವೇ ಇಲಾಖೆಯಿಂದ ಕ್ರಮ ವಹಿಸಲಾಗುವುದು ಎಂದರು.
ಜನಸಾಮಾನ್ಯರಿಗೂ ಅತ್ಯುತ್ತಮ ಆರೋಗ್ಯ ಸೇವೆಗೆ ಖಾತರಿ ಪಡಿಸುವುದಕ್ಕಾಗಿ ಆರೋಗ್ಯ ಮಿತ್ರರ ನೇಮಕ ಮಾಡಿರುವುದು. ಅಗತ್ಯವಾದ ಕೆಲವು ಯೋಜನೆಗಳನ್ನು ಜಾರಿಗೊಳಿಸುವುದು ಹಾಗೂ ಅನಗತ್ಯ ಕಾರ್ಯಕ್ರಮಗಳನ್ನು ಕೈಬಿಡುವ ಬಗ್ಗೆಯೂ ಮುಂದಿನ ದಿನಗಳಲ್ಲಿ ರಾಜ್ಯವ್ಯಾಪಿ ಕ್ರಮ ವಹಿಸಲಾಗುವುದು ಎಂದು ಹೇಳಿದರು.

*ಗುತ್ತಿಗೆ ವೈದ್ಯರ ಕಾಯಂ ಮರು ಪರಿಶೀಲನೆ:*
ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ವೈದ್ಯರು 3 ವರ್ಷ ಸೇವೆ ಸಲ್ಲಿಸಿದರೆ ಅವರನ್ನು ಕಾಯಂಗೊಳಿಸುವ ಪದ್ಧತಿ ಹಿಂದೆ ಮಾಡಲಾಗಿತ್ತು. ಇದರಿಂದ ಉದ್ಯೋಗ ಭದ್ರತೆಯ ಕಾರಣದಿಂದ ಹೆಚ್ಚಿನ ವೈದ್ಯರ ನೇಮಕವಾಗುತ್ತಿತ್ತು. ಆದರೆ ಅದೀಗ ಬದಲಾಗಿದೆ. ಅದನ್ನು ಮರು ಪರಿಶೀಲಿಸಲಾಗುವುದು. ಗುಡ್ಡಗಾಡು, ಬುಡಕಟ್ಟು ಪ್ರದೇಶ, ಕುಗ್ರಾಮಗಳಲ್ಲಿ ವೈದ್ಯರು ಹೋಗುವುಗು ಕಡಿಮೆ. ಅದಕ್ಕಾಗಿ ಅಲ್ಲಿ ಕೆಲಸ ನಿರ್ವಹಿಸುವವರಿಗೆ ಹೆಚ್ಚುವರಿ ವೇತನ ನೀಡುವ ಬಗ್ಗೆ ಚರ್ಚಿಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು