12:55 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

Good News : ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಕುರಿತು ಸಿಹಿ ಸುದ್ದಿ ನೀಡಿದ ಸಚಿವ ನಾಗೇಶ್.!

23/10/2021, 11:55

ಬೆಂಗಳೂರು(Reporterkarnataka.com)
ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಮುಂದಡಿ ಇಟ್ಟಿದೆ. 6 ರಿಂದ 8ನೇ ತರಗತಿ ಮಕ್ಕಳ ಬೋಧನೆಗೆ ಶಿಕ್ಷಕರ ಕೊರತೆಯನ್ನು ನೀಗಿಸಲು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಂಬಡ್ತಿ ನೀಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಿಕ್ಷಕರ ಸಮಸ್ಯೆ ಇರುವುದು ನಿಜ. ಆದರೆ ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಯಾವುದೇ ಸಮಸ್ಯೆ ಆಗದ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ 25ರಿಂದ ಕಿರಿಯ ಪ್ರಾಥಮಿಕ ಶಾಲೆಗಳು ಆರಂಭಗೊಳ್ಳಲಿವೆ. ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು ಎಂದಿದ್ದಾರೆ.

ರಾಜ್ಯದಾದ್ಯಂತ ಸೋಮವಾರದಿಂದಲೇ ಬಿಸಿಯೂಟದ ಯೋಜನೆಯನ್ನು ಆರಂಭ ಮಾಡಲಾಗುತ್ತಿದೆ. 1ರಿಂದ 10ನೇ ತರಗತಿ ವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಕೂಡ ಬಿಸಿಯೂಟದ ಯೋಜನೆಯನ್ನು ನೀಡಲಾಗುತ್ತದೆ. ಕಿರಿಯ ಪ್ರಾಥಮಿಕ ಶಾಲಾರಂಭದ ಕುರಿತು ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಆರಂಭಗೊಳ್ಳುತ್ತಿದ್ದರೂ ಕೂಡ ಹಾಜರಾತಿಯನ್ನು ಕಡ್ಡಾಯಗೊಳಿಸಿಲ್ಲ. ಮಕ್ಕಳು ಶಾಲೆಗೆ ಹಾಜರಾಗಬೇಕಾದ್ರೆ ಕಡ್ಡಾಯವಾಗಿ ಪೋಷಕರು ಅನುಮತಿ ಪತ್ರವನ್ನು ನೀಡಬೇಕು. ಅಲ್ಲದೇ ಶಿಕ್ಷಕರಿಗೆ ಕಡ್ಡಾಯ ವ್ಯಾಕ್ಸಿನ್, ಶಾಲೆಗಳಲ್ಲಿ ಸಾಮಾಜಿಕ ಅಂತರ,‌ ಮಾಸ್ಕ್ ಬಳಕೆ‌‌‌‌ ಸೇರಿದಂತೆ ರಾಜ್ಯದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ವಿಸ್ತ್ರತವಾದ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು