3:37 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

Good News: ವೋಲ್ವೋ ಬಸ್ ಪ್ರಯಾಣ ದರ, ಪಾಸ್ ದರ ಇಳಿಕೆ; ಬೆಂಗಳೂರಿನಲ್ಲಿ ಒಟ್ಟು 173 ಎಸಿ ಬಸ್ ಆರಂಭ

16/12/2021, 08:35

ಬೆಂಗಳೂರು(reporterkarnataka.com):

ಬೆಂಗಳೂರು ನಗರದಲ್ಲಿನ ಹವಾನಿಯಂತ್ರಿತ (ವಜ್ರ) ಬಸ್ ಸೇವೆಗಳ ಮಧ್ಯಮ ಮತ್ತು ದೂರದ ಪ್ರಯಾಣ ದರಗಳು ಮತ್ತು ಬಸ್ ಪಾಸ್ ದರಗಳನ್ನು ಬಿಎಂಟಿಸಿ ಕಡಿಮೆ ಮಾಡಿ ಆದೇಶವನ್ನು ಹೊರಡಿಸಿದೆ.

ವಜ್ರ ಸೇವೆಗಳ ಮೊದಲ ಮೂರು ಹಂತಗಳು, ಅಂದ್ರೆ 6 ಕಿ.ಮೀ ವರೆಗೆ ಒಂದೇ ಆಗಿರುತ್ತದೆ. ಹಂತ 4 (8 ಕಿಮೀ) ಮತ್ತು ಆಚೆಗೆ ಪ್ರಯಾಣಿಸುವ ಪ್ರಯಾಣಿಕರು ಪ್ರಯಾಣಿಸುವ ದೂರವನ್ನು ಅವಲಂಬಿಸಿ ರೂ 5 ರಿಂದ ರೂ 40 ರವರೆ ಬೆಲೆ ಇಳಿಕೆಯಾಗಲಿದೆ ತಿಳಿಸಿದೆ.

ವಜ್ರ ದಿನದ ಪಾಸ್‌ನ ಬೆಲೆಯನ್ನು 120 ರೂ.ನಿಂದ 100 ರೂ.ಗೆ ಇಳಿಸಲಾಗಿದ್ದು, ಮಾಸಿಕ ಪಾಸ್ ಬೆಲೆಯು 2000 ರೂ.ನಿಂದ 1500 ರೂ.ಗೆ ಕಡಿತಗೊಂಡಿದೆ. ಆದರೆ ಈ ರಿಯಾಯಿತಿಯು ವಿಮಾನ ನಿಲ್ದಾಣದ ಬಸ್‌ಗಳಿಗೆ ಅನ್ವಯಿಸುವುದಿಲ್ಲ ಎಂದು ತಿಳಿಸಿದೆ.

ಇನ್ನೂ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸಾಮಾನ್ಯ ಮತ್ತು ವಾಯುವಜ್ರ ಸೇವೆಗಳ ಪ್ರಯಾಣದಲ್ಲಿ ಯಾವುದೇ ಬದಲಾವಣೆಗಳು ಇರೋದಿಲ್ಲ ಎಂದು ತಿಳಿಸಿದೆ. ಶುಕ್ರವಾರದಿಂದ 12 ಮಾರ್ಗಗಳಲ್ಲಿ 90 ಹೆಚ್ಚುವರಿ ಎಸಿ ಬಸ್ ಸೇವೆಗಳನ್ನು ಆರಂಭಿಸಲಾಗುವುದು ಅಂತ ತಿಳಿಸಿದ್ದು, ಇದರೊಂದಿಗೆ ನಗರದಲ್ಲಿ ಒಟ್ಟು 173 ಎಸಿ ಬಸ್‌ಗಳು ಸಂಚಾರ ಮಾಡಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು