11:16 AM Monday2 - June 2025
ಬ್ರೇಕಿಂಗ್ ನ್ಯೂಸ್
Chikkamagaluru | ಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್; ಇಬ್ಬರು… ರಾಜ್ಯದಲ್ಲಿ ಹುಕ್ಕಾ ಬಾರ್ ಗಳ ನಿಷೇಧಕ್ಕೆ ರಾಷ್ಟ್ರಪತಿ ಅಂಕಿತ: ತಂಬಾಕು ಉತ್ಪನ್ನ ಖರೀದಿ… ತುಮಕೂರು ಹೇಮಾವತಿ ನದಿ ಕೆನಾಲ್ ಯೋಜನೆ ಸಮಸ್ಯೆ ಬಗೆಹರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆ ನಿಷೇಧ: ಸರಕಾರದ ಅಧಿಸೂಚನೆ Koppala | ಮಾಹಿತಿ ಆಯೋಗವನ್ನು ಜನರ ಬಳಿ ಕೊಂಡೊಯ್ಯುವ ಚಿಂತನೆ: ರುದ್ರಣ್ಣ ಹರ್ತಿಕೋಟೆ ಇಬ್ಬರು ಮಕ್ಕಳು, ಎರಡೂ ಕಾಲು ಕಳೆದುಕೊಂಡ ಅಶ್ವಿನಿಗೆ ಸರಕಾರಿ ನೌಕರಿ ನೀಡಿ: ಬಿಜೆಪಿ… ಕೆಪಿಟಿಸಿಎಲ್ ಜಿಐಎಸ್ ಮ್ಯಾಪಿಂಗ್ ಅಪ್ಲಿಕೇಶನ್ ಬಿಡುಗಡೆ: ಭೂಗತ ಕೇಬಲ್ ಕಾಮಗಾರಿಗಳ ನೈಜ-ಸಮಯದ ಮಾಹಿತಿ… Mysore | ‘ದಿ ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ಸ್’ ಗೆ ರಾಜ್ಯಪಾಲ ಥಾವರ್… ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ… ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ಬೆಳಕಿಗೆ: ಕೊಚ್ಚಿಯಿಂದ ಬಂದ ಯುವಕನಿಗೆ…

ಇತ್ತೀಚಿನ ಸುದ್ದಿ

ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆ ನಿಷೇಧ: ಸರಕಾರದ ಅಧಿಸೂಚನೆ

31/05/2025, 22:54

*ಸಾರ್ವಜನಿಕ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಂದ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿಯವರಿಂದ ಅನುಮೋದನೆ*

*ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನದ ಹೊರತಾಗಿ ಹೊಗೆ ರಹಿತ ತಂಬಾಕು ಪದಾರ್ಥಗಳನ್ನ ಸೇವಿಸಿ ಉಗಿಯುವಂತಿಲ್ಲ*

ಬೆಂಗಳೂರು(reporterkarnataka.com):ವಿಶ್ವ ತಂಬಾಕು ರಹಿತ ದಿನದಂದು ‘ಸಾರ್ವಜನಿಕ ಆರೋಗ್ಯ’ ರಕ್ಷಣೆಯತ್ತ ರಾಜ್ಯ ಸರ್ಕಾರದಿಂದ ಮಹತ್ವದ ಅಧಿಸೂಚನೆ ಹೊರಡಿಸಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿದೆ. COTPA ಕಾಯ್ದೆಗೆ ತಿದ್ದುಪಡಿ ತಂದು ಹೊಗೆ ರಹಿತ ತಂಬಾಕು ಪದಾರ್ಥಗಳಿಗೆ ಕಡಿವಾಣ ಹಾಕುವುದರೊಂದಿಗೆ ಹುಕ್ಕಾ ಬ್ಯಾನ್ ಮಾಡಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕ್ರಮಕ್ಕೆ ಇದೀಗ ರಾಷ್ಟ್ರಪತಿಗಳಿಂದ ಕೂಡ ಮನ್ನಣೆ ದೊರೆತಿದ್ದು, ಇಂದು ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ.
ರಾಜ್ಯದಲ್ಲಿ ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನವಷ್ಟೇ ಅಲ್ಲದೇ ಹೊಗೆ ರಹಿತ ತಂಬಾಕು ಪದಾರ್ಥಗಳನ್ನ ಸೇವಿಸಿ ಉಗಿಯುವಂತಿಲ್ಲ.
ಸಿಗರೇಟ್ ಹೊರತಾಗಿಯೂ ಹೊಗೆ ರಹಿತ ತಂಬಾಕು ಪದಾರ್ಥಗಳು ಸಾರ್ವಜನಿಕ ಆರೋಗ್ಯಕ್ಕೆ ಹಾನಿ ಉಂಟುಮಾಡುತ್ತಿದ್ದವು. ತಂಬಾಕು ಪದಾರ್ಥಗಳನ್ನ ಸೇವಿಸಿ ಸಾರ್ವಜನಿಕ ಸ್ಥಳಗಳಲ್ಲಿ ಏಲ್ಲಿ ಬೇಕಂದರಲ್ಲಿ ಉಗಿಯುವುದರಿಂದ ಗಾಳಿಯಲ್ಲಿ ಒಬ್ಬರಿಂದ ಒಬ್ಬರಿಗೆ ವೈರಸ್ ಹರಡಬಹುದು. ವಿಶೇಷವಾಗಿ ಕೋವಿಡ್ 19 ವೈರಸ್ ನಿಂದ ಸಾರ್ವಜನಿಕರು ತಮ್ಮನ್ನ ತಾವು ರಕ್ಷಿಸಿಕೊಕೊಳ್ಳುವುದು ಸವಾಲಾಗಿತ್ತು. ಅಲ್ಲದೇ ಟಿ.ಬಿ ಹೊಂದಿರುವ ರೋಗಿಗಳಿಗು ತೊಂದರೆ ಉಂಟಾಗಿತ್ತು.
ಈ ಸಮಸ್ಯೆಗಳನ್ನ ಸೂಕ್ಷ್ಮವಾಗಿ ಗಮನಿಸಿದ್ದ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಾರ್ವಜನಿಕ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಈ ಹಿಂದೆ ಇದ್ದ COPTA ಕಾಯ್ದೆಗೆ ತಿದ್ದುಪಡಿ ತಂದು ರಾಜ್ಯದ ಎರಡು ಸದನದಲ್ಲಿ ಅನುಮೋದನೆ ಪಡೆದಿದ್ದರು. ಇದು ಕೇಂದ್ರದ ಕಾಯ್ದೆಯಾಗಿದ್ದರಿಂದ ರಾಷ್ಟ್ರಪತಿಯವರ ಅನುಮೋದನೆಗೆ ಕಳಿಸಲಾಗಿತ್ತು. ರಾಜ್ಯ ಸರ್ಕಾರದ ಈ ಮಹತ್ವದ ಹೆಜ್ಜೆಗೆ ರಾಷ್ಟ್ರಪತಿಗಳಿಂದ ಅನುಮೋದನೆ ದೊರೆತಿದ್ದು, ರಾಜ್ಯ ಸರ್ಕಾರಿಂದ ಇಂದು ಅಧಿಸೂಚನೆ ಹೊರಡಿಸಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಸೇವನೆಗೆ 200 ರೂ. ಇದ್ದ ದಂಡವನ್ನು 1000 ರೂಪಾಯಿ ವರೆಗೆ ಹೆಚ್ಚಿಸಲಾಗಿದೆ. 21 ವರ್ಷದ ಒಳಗಿನವರು ತಂಬಾಕು ಪದಾರ್ಥಗಳನ್ನ ಮಾರಾಟ ಮಾಡದಂತೆ ನಿಷೇಧ ಹೇರಲಾಗಿದೆ. ಉಪಹಾರ ಗೃಹ, ಪಬ್, ಬಾರ್, ರೇಸ್ಟೋರೆಂಟ್ ಗಳಲ್ಲಿ ಹುಕ್ಕಾ ಬ್ಯಾನ್ ಮಾಡಲಾಗಿದ್ದು, ಹುಕ್ಕಾ ಬಾರ್ ವಿರುದ್ಧ ಕನಿಷ್ಠ 50 ಸಾವಿರದಿಂದ 1 ಲಕ್ಷ ದಂಡ, ಮೂರು ವರ್ಷ ಜೈಲು ಶಿಕ್ಷೆ ವಿಧಿಸಲು ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು