10:25 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಸರ್ಕಾರಿ ಕಚೇರಿಗಳು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು: ಉಡುಪಿ ನಿರ್ಗಮನ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

20/06/2025, 18:47

ಉಡುಪಿ(reporterkarnataka.com): ಸರ್ಕಾರಿ ಕಚೇರಿಗಳು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು, ಸರ್ಕಾರಿ ಕೆಲಸಗಳನ್ನು ನಿಷ್ಠೆಯಿಂದ ಮಾಡಿದರೆ ಜನರು ನಮ್ಮನ್ನು ಗೌರವಿಸುತ್ತಾರೆ ಎಂದು ಉಡುಪಿ ಜಿಲ್ಲೆಯ ನಿರ್ಗಮನ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.
ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಉಡುಪಿ ಜಿಲ್ಲೆ ರಾಜ್ಯದಲ್ಲಿಯೇ ಉತ್ತಮವಾದ ಜಿಲ್ಲೆಯಾಗಿದ್ದು ಇಲ್ಲಿನ ಜಿಲ್ಲಾ ಮಟ್ಟ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಉತ್ತಮ ರೀತಿಯಿಂದ ಒಂದು ತಂಡವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಡಾ. ವಿದ್ಯಾಕುಮಾರಿ ನುಡಿದರು.
ಜನರು ನಿರೀಕ್ಷೆಯನ್ನಿಟ್ಟುಕೊಂಡು ಕೆಲಸ ಕಾರ್ಯಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಬರುತ್ತಿದ್ದವರಿಗೆ ನನ್ನಿಂದ ಸಾಧ್ಯವಾದಷ್ಟು ಕೆಲಸ ಕಾರ್ಯಗಳನ್ನು ಮಾಡಿ ಕೊಟ್ಟಿದ್ದೇನೆ. ಸರ್ಕಾರಿ ಕಚೇರಿಗಳು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು, ಸರ್ಕಾರಿ ಕೆಲಸಗಳನ್ನು ನಿಷ್ಠೆಯಿಂದ ಮಾಡಿದರೆ ಜನರು ನಮ್ಮನ್ನು ಗೌರವಿಸುತ್ತಾರೆ ಎಂದರು.
ಮಳೆಗಾಲದ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಉತ್ತಮ ನಿರ್ವಹಣೆ, ಆರೋಗ್ಯ ಇಲಾಖೆಯಲ್ಲಿ ಉತ್ತಮ ಸೌಲಭ್ಯ, ಮರಳು ಹಾಗೂ ಗಣಿ ಸಮಸ್ಯೆ ಬಗೆಹರಿಸುವಲ್ಲಿ ಹಾಗೂ ಮತದಾನ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲಾಗಿದೆ. ಕಳೆದ ಐದು ವರ್ಷದ ನಂತರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ತಂದು ಕೊಟ್ಟಿದೆ ಎಂದರು.
ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ನಿರ್ಗಮನ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಕರ್ತವ್ಯ ನಿರ್ವಹಣೆ ಬಗ್ಗೆ ಮಾತನಾಡಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಕರಾವಳಿ ಕಾವಲು ಪಡೆ ಅಧೀಕ್ಷಕ ಮಿಥುನ್, ಡಿ.ಎಫ್.ಓ ಗಣಪತಿ, ಎ.ಎಸ್.ಪಿ. ಹರ್ಷಂಪ್ರಿಯವದ, ಸಹಾಯಕ ಕಮಿಷನರ್ ರಶ್ಮಿ, ಜಿಲ್ಲಾ, ತಾಲೂಕು ಮಟ್ಟದ ವಿವಿಧ ಅಧಿಕಾರಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಅನಿಸಿಕೆ ಹಂಚಿಕೊಂಡರು.
ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಸ್ವಾಗತಿಸಿದರು. ಯುವಜನ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ. ರೋಶನ್ ಶೆಟ್ಟಿ ನಿರೂಪಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು