2:50 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಗೋವಿನತೋಟ: ಶ್ರೀಮದ್ಭಾಗವತ ಕಥಾ ಪಾರಾಯಣ ಸಪ್ತಾಹ, ಗೋ ನವರಾತ್ರಿ ಉತ್ಸವಕ್ಕೆ ಚಾಲನೆ; ನಾರಾಯಣ ಕವಚ ಯಾಗ

16/11/2023, 12:39

ಬಂಟ್ವಾಳ(reporterkarnataka.com): ಎಲ್ಲಾ ದೇವತೆಗಳ ಸನ್ನಿಧಾನ ಗೋವಿನಲ್ಲಿದೆ.ಗೋವಿನ ರಕ್ಷಣೆ ಮಾಡುವುದರಿಂದ ಸದ್ಬುದ್ಧಿ ಸಿಗುತ್ತದೆ. ಗೋ ಎಂದರೆ ವೇದ, ಸೂರ್ಯ ಕಿರಣ. ಆದ್ದರಿಂದ ಇನ್ನು ಒಂಭತ್ತು ದಿನಗಳ ಕಾಲ ಈ ಕಾರ್ಯಕ್ರಮದಲ್ಲಿ ಗೋವಿನ ಬಗ್ಗೆ ಅರ್ಥ ಮಾಡಿಕೊಳ್ಳುವ ಪ್ರಯತ್ನ ಮಾಡೋಣ. ಭಗವಂತನ ಅನುಗ್ರಹದಿಂದ ಮಾತ್ರ ಉತ್ತಮ ಸಾಧನೆ ಮಾಡಲು ಸಾಧ್ಯ. ಗೋವಿನಿಂದ ಬಂದ ಪ್ರಸಾದ ಸ್ವೀಕರಿಸಿದರೆ ಗೋಪಾಲ ಕೃಷ್ಣ ರಕ್ಷಣೆ ಮಾಡುತ್ತಾನೆ ಎಂದು ಅದಮಾರು ಮಠದ ಶ್ರೀ ಈಶ ಪ್ರಿಯ ತೀರ್ಥ ಶ್ರೀಪಾದಂಗಳರವರು ಹೇಳಿದರು.

ಅವರು ರಾಧಾ ಸುರಭಿ ಗೋ ಮಂದಿರ ಗೋವಿನತೋಟದಲ್ಲಿ ನಡೆಯುವ ದಕ್ಷಿಣ ಭಾರತದಲ್ಲಿಯೇ ಪ್ರಥಮ ಅಷ್ಟೋತ್ತರ ಶತ (108) ಶ್ರೀಮದ್ಭಾಗವತ ಕಥಾ ಪಾರಾಯಣ ಸಪ್ತಾಹ ಮಹಾಯಾಗ,1108 ನಾರಾಯಣ ಕವಚ ಯಾಗ ಮತ್ತು ಗೋ ನವರಾತ್ರಿ ಉತ್ಸವವಕ್ಜೆ ಚಾಲನೆ ನೀಡಿ ಮಾತನಾಡಿದರು.
ಫರಂಗಿಪೇಟೆ ಶ್ರೀ ವರದೇಶ್ವರ ದೇವಸ್ಥಾನದಿಂದ ಹಸಿರುವಾಣಿ ಹೊರೆಕಾಣಿಕೆಯ ಭವ್ಯ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿಯ ಮೂಲಕ ಗೋ ಮಂದಿರಕ್ಕೆ ಸಾಗಿ ಬಂತು. ಶೋಭಯಾತ್ರೆಯಲ್ಲಿ ಚೆಂಡೆ, ವಾದ್ಯ,ಗೊಂಬೆ, ಕುಣಿತ ಭಜನೆ,108 ಗೋಪಾಲ ಕೃಷ್ಣರು,108 ಕಲಶದೊಂದಿಗೆ ಮಾತೆಯರು, ಸ್ಥಬ್ದಚಿತ್ರ,ಮೆರವಣಿಗೆಗೆ ಮೆರಗು ನೀಡಿತು. ಗೋ ಮಂದಿರದ ಭಕ್ತಿ ಭೂಷಣ್ ಪ್ರಭುಜಿ, ವೃಂದಾವನದ ರಮೇಶ್ ಗೊಸ್ವಾಮಿ, ಬ್ರಿಜೇಶ್ ಗೋ ಸ್ವಾಮಿ, ಗೋ ಸೇವಾ ಗತಿ ವಿಧಿಯ ಪ್ರವೀಣ ಸರಳಾಯ,ಉತ್ಸವ ಸಮಿತಿಯ ಗೌರವಧ್ಯಕ್ಷ ಐತಪ್ಪ ಆಳ್ವ ಸುಜಿರುಗುತ್ತು, ಅಧ್ಯಕ್ಷ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕಾರ್ಯಾಧ್ಯಕ್ಷ ತೇವು ತಾರಾನಾಥ ಕೊಟ್ಟಾರಿ, ಕೋಶಾಧಿಕಾರಿ ಪದ್ಮನಾಭ ಶೆಟ್ಟಿ ಪುಂಚಮೆ, ಪ್ರ. ಕಾರ್ಯದರ್ಶಿ ದಾಮೋದರ ನೆತ್ತರಕೆರೆ, ಪ್ರಮುಖರಾದ ಕೃಷ್ಣ ಕುಮಾರ್ ಪೂಂಜ, ರವೀಂದ್ರ ಕಂಬಳಿ, ರಾಮದಾಸ ಬಂಟ್ವಾಳ, ಗಣೇಶ ಸುವರ್ಣ ತುಂಬೆ, ಅನಿಲ್ ಪಂಡಿತ್, ಪಿ. ಸುಬ್ರಮಣ್ಯ ರಾವ್, ನವೀನ ಚಾಪೆ, ವಿನಯ ಕಡೆಗೋಳಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು