1:53 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Govt Hospital | ಮಂಗಳೂರು ವೆನ್ಲಾಕ್, ಲೇಡಿಗೋಷನ್ ಆಸ್ಪತ್ರೆಗೆ ಆರೋಗ್ಯ ಆಯುಕ್ತರ ಭೇಟಿ: ಸಿಬ್ಬಂದಿ ನೇಮಕಾತಿ ಪರಿಶೀಲನೆ ಭರವಸೆ

16/03/2025, 21:54

ಮಂಗಳೂರು(reporterkarnataka.com): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಾ. ಕೆ.ಬಿ. ಶಿವಕುಮಾರ್ ಅವರು ಭಾನುವಾರ ಮಂಗಳೂರಿಗೆ ಆಗಮಿಸಿ, ಜಿಲ್ಲಾ ವೆನ್ ಲಾಕ್ ಹಾಗೂ ಲೇಡಿಗೋಷನ್ ಆಸ್ಪತ್ರೆಗಳಿಗೆ ಭೇಟಿ ನೀಡಿದರು.
ಮೊದಲು ವೆನ್ ಲಾಕ್ ಗೆ ಆಗಮಿಸಿದ ಅವರು, ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದರು. ಆಸ್ಪತ್ರೆಯಲ್ಲಿ ರೋಗಿಗಳಿಗೆ ದೊರಕುತ್ತಿರುವ ಸೌಲಭ್ಯಗಳ ಮಾಹಿತಿ ಪಡೆದ ಅವರು, ಸ್ವಚ್ಛತೆ ಮತ್ತು ಆಸ್ಪತ್ರೆ ಪರಿಸರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವೆನ್ ಲಾಕ್ ಮೂಲಸೌಕರ್ಯವನ್ನು ಇನ್ನಷ್ಟು ಮೇಲ್ದರ್ಜೆಗೇರಿಸಲು ಹಾಗೂ ಸಿಬ್ಬಂದಿ ನೇಮಕಾತಿಯ ಬಗ್ಗೆ ಬೇಡಿಕೆ ಬಂದಿದ್ದು, ಸರಕಾರದ ಮಟ್ಟದಲ್ಲಿ ಇದನ್ನು ಪರಿಶೀಲಿಸಲಾಗುವುದು ಎಂದು ಆಯುಕ್ತರು ತಿಳಿಸಿದರು.

ಬಳಿಕ ಲೇಡಿಗೋಷನ್ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಅಲ್ಲಿನ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನವಜಾತ ಶಿಶುಘಟಕ ವೀಕ್ಷಿಸಿದ ಅವರು, ಆಸ್ಪತ್ರೆಯಲ್ಲಿ ಹ್ಯೂಮನ್ ಮಿಲ್ಕ್ ಬ್ಯಾಂಕ್ ಸ್ಥಾಪನೆಯಿಂದ ಶಿಶು ಮರಣ ಪ್ರಮಾಣ ಕಡಿಮೆಗೊಂಡಿರುವುದಕ್ಕೆ ಶ್ಲಾಘಿಸಿದರು. ಸಿಎಸ್ಆರ್ ಅನುದಾನದಿಂದ ರೋಗಿಗಳಿಗೆ ಅತ್ಯಾಧುನಿಕ ಸೌಲಭ್ಯ ಗಳನ್ನು ಒದಗಿಸಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ವೆನ್ ಲಾಕ್ ಅಧೀಕ್ಷಕ ಡಾ. ಶಿವಕುಮಾರ್, ಲೇಡಿಗೋಷನ್ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು