4:46 AM Saturday19 - July 2025
ಬ್ರೇಕಿಂಗ್ ನ್ಯೂಸ್
ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ…

ಇತ್ತೀಚಿನ ಸುದ್ದಿ

Govt Hospital | ಶ್ರೀನಿವಾಸಪುರ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ: ಸ್ತ್ರೀರೋಗ ತಜ್ಞೆಯೂ ಇಲ್ಲ

17/03/2025, 14:37

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ಪಟ್ಟಣದ 100 ಹಾಸಿಗೆಗಳ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ 5 ವರ್ಷಗಳಿಂದ ಕಿವಿ, ಮೂಗು, ಗಂಟಲು (ಇಎನ್‌ಟಿ) ತಜ್ಞರ ಕೊರತೆ ಉಂಟಾಗಿದೆ. ಈ ನಡುವೆ, ಸ್ತ್ರೀರೋಗ ತಜ್ಞೆ ಡಾ. ಗೌಸಿಯಾ ಬಾನು ರಾಜೀನಾಮೆ ನೀಡಿದ ಕಾರಣ, ಮಹಿಳಾ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಲಭ್ಯವಿಲ್ಲ.
ಶ್ರೀನಿವಾಸಪುರ ಹಾಗೂ ಸುತ್ತಮುತ್ತಲಿನ 300ಕ್ಕೂ ಹೆಚ್ಚು ಹಳ್ಳಿಗಳ ಜನತೆ ಈ ಸಮಸ್ಯೆಯಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಬಡ ರೋಗಿಗಳು ತುರ್ತು ಚಿಕಿತ್ಸೆಗಾಗಿ, ಖಾಸಗಿ ಆಸ್ಪತ್ರೆಗಳು, ಕೋಲಾರ , ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಆಸ್ಪತ್ರೆಗಳು ಅಥವಾ ಆಂಧ್ರಪ್ರದೇಶದ ಮದನಪಲ್ಲಿಗೆ ತೆರಳುವ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಇದರಿಂದ ಆರ್ಥಿಕವಾಗಿ ಹಿಂದುಳಿದ ಜನರು ದೂರ ಪ್ರಯಾಣ, ಹೆಚ್ಚಿದ ವೆಚ್ಚ, ಮತ್ತು ಚಿಕಿತ್ಸೆಗಾಗಿ ನಿರೀಕ್ಷಿಸುವ ಸಮಸ್ಯೆ ಎದುರಿಸುತ್ತಿದ್ದಾರೆ.
ಸರ್ಕಾರ ಈ ಸಮಸ್ಯೆಗೆ ತಕ್ಷಣ ಸ್ಪಂದಿಸಿ, ಅಗತ್ಯ ತಜ್ಞ ವೈದ್ಯರನ್ನು ನೇಮಕ ಮಾಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತ್ವರಿತ ಕ್ರಮ ಕೈಗೊಂಡು, ತಾಲ್ಲೂಕು ಮಟ್ಟದಲ್ಲಿ ವೈದ್ಯರ ನೇಮಕಾತಿ ಖಾಯಂಗೊಳಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು