12:05 PM Thursday1 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಗ್ರೇಸ್ ಮಿನಿಸ್ಟ್ರಿ: ಮಂಗಳೂರು ಮತ್ತು ಬೆಂಗಳೂರಿನಲ್ಲಿ ಅದ್ದೂರಿ ಪಸ್ಕ ಹಬ್ಬ ಆಚರಣೆ, ಮಂಜೂಷ ಪೆಟ್ಟಿಗೆ ಸ್ಥಾಪನೆ

18/04/2025, 19:36

ಬೆಂಗಳೂರು/ ಮಂಗಳೂರು(reporterkarnataka.com): ಗ್ರೇಸ್ ಮಿನಿಸ್ಟ್ರಿ ಸಂಸ್ಥೆ ವತಿಯಿಂದ ಎರಡು ದಿನಗಳ ಪಸ್ಕ ಹಬ್ಬ ಹಾಗೂ ಒಡಂಬಡಿಕೆ ಮಂಜೂಷ ಪೆಟ್ಟಿಗೆಯ ಸ್ಥಾಪನೆ ಮಂಗಳೂರಿನ ಹೊರವಲಯದ ವಳಚ್ಚಿಲ್ ಮತ್ತು ಬೆಂಗಳೂರಿನ ಬೂದಿಗೆರೆಯಲ್ಲಿ ನಡೆಯಿತು.
ಪಸ್ಕ ಹಬ್ಬ ಸಂದರ್ಭದಲ್ಲಿ ಗುಡ್ ಫ್ರೈಡೇ ಸಡಗರದ ಜೊತೆಗೆ ದೇಶದಲ್ಲೇ ಪ್ರಪ್ರಥಮ ಬಾರಿಗೆ ಚರ್ಚ್ ಆವರಣದಲ್ಲಿ ಬೈಬಲ್ ಪ್ರೇರಿತ ಒಡಂಬಡಿಕೆ ಮಂಜೂಷ ಪೆಟ್ಟಿಗೆಯನ್ನು ಅದ್ದೂರಿಯಾಗಿ ಬರಮಾಡಿಕೊಂಡು 7 ಸುತ್ತುಗಳ ಮೆರವಣಿಗೆಯ ನಂತರ ಬೆಂಗಳೂರಿನಲ್ಲಿ ಅನಾವರಣಗೊಳಿಸಲಾಯಿತು.
ದೇಶ-ವಿದೇಶಗಳಿಂದ ಹಾಗೂ ರಾಜ್ಯದ ಹಲವಾರು ಜಿಲ್ಲೆಗಳಿಂದ ಸಾವಿರಾರು ಭಕ್ತರು ಪಸ್ಕ ಹಬ್ಬದಲ್ಲಿ ಪಾಲ್ಗೊಂಡಿದ್ದು, ಬಿಷಪ್ ಡಾ. ಆಂಡ್ರೋ ರಿಚರ್ಡ್ ಅವರು ಪಸ್ಕ ಹಾಗೂ ಮಂಜೂಷ ಪೆಟ್ಟಿಗೆಯ ಮಹತ್ವವನ್ನ ಭಕ್ತರಿಗೆ ಸಾರಿದರು.
ಇದೇ ವೇಳೆ ಗ್ರೇಸ್ ಮಿನಿಸ್ಟ್ರಿ ನಿರ್ದೇಶಕರು ಹಾಗೂ ಸಂಸ್ಥಾಪಕರಾದ ಡಾ.ಆಂಡ್ರ್ಯೂ ರಿಚರ್ಡ್ ಅವರು ಮಾತನಾಡಿ, ಈ ವರ್ಷ ಪಸ್ಕ ಹಬ್ಬದ ಜೊತೆಗೆ ದೇಶದಲ್ಲೇ ಪ್ರಪ್ರಥಮ ಬಾರಿಗೆ ಮಂಜೂಷ ಪೆಟ್ಟಿಗೆಯ ಸ್ಥಾಪನೆ ಮಾಡಿರುವ ಸಂಸ್ಥೆ ಎಂದು ಹೇಳುವುದಕ್ಕೆ ಸಂತೋಷಪಡುತ್ತೇನೆ ಎಂದರು.
ಹಬ್ಬದ ಪ್ರಯುಕ್ತ ಬಡ ಮಕ್ಕಳ ಉಚಿತ ಶಿಕ್ಷಣಕ್ಕಾಗಿ ನೆರವು ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಸಮುದಾಯದ ಮಕ್ಕಳನ್ನು ಮತ್ತಷ್ಟು ಉತ್ತೇಜಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಇನ್ನು 2024ರ ಪಸ್ಕ ಹಬ್ಬ ಆಚರಿಸಿದ ಸಂದರ್ಭ ಬಡ ಚರ್ಚ್ ಒಂದು ಹಣಕಾಸಿನ ತೊಂದರೆಯಿಂದಾಗಿ ಅರ್ಧದಲ್ಲಿ ನಿಂತು ಹೋಗಿತ್ತು, ಗ್ರೇಸ್ ಮಿನಿಸ್ಟ್ರಿ ಸಂಸ್ಥೆಯಿಂದ 8 ಲಕ್ಷ ರೂ. ದೇಣಿಗೆ ನೀಡುವ ಮೂಲಕ ಆ ಚರ್ಚಿನ ಸಂಪೂರ್ಣ ನಿರ್ಮಾಣಕ್ಕೆ ಸಂಸ್ಥೆ ದಾರಿ ಮಾಡಿಕೊಟ್ಟಿದೆ ಎಂದರು.
ಪ್ರತಿ ವರ್ಷ ಪಸ್ಕ ಹಬ್ಬ ಆಯೋಜಿಸಲಾಗುತ್ತಿದ್ದು, ಆಮೂಲಕ ಬಡವರು, ಅನಾಥರು, ಬಡ ವಿದ್ಯಾರ್ಥಿಗಳಿಗೆ ಸಂಸ್ಥೆ ವತಿಯಿಂದ ನೆರವು ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ ಎಂದರು.


ಇನ್ನು ಒಡಂಬಡಿಕೆ ಮಂಜೂಷ ಪೆಟ್ಟಿಗೆ ಸ್ಥಾಪನೆಯ ನಂತರ ಸಾವಿರಾರು ಭಕ್ತಾದಿಗಳು ಸಾಲು ಸಾಲಿನಲ್ಲಿ ನಿಂತು ತಮ್ಮ ಪ್ರಾರ್ಥನ ಮನವಿಗಳನ್ನು ಸಲ್ಲಿಸಿ ದೇವರ ದರ್ಶನವನ್ನ ಪಡೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು