10:43 AM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಗ್ರೇಸ್ ಮಿನಿಸ್ಟ್ರಿ: ಮಂಗಳೂರು ಮತ್ತು ಬೆಂಗಳೂರಿನಲ್ಲಿ ಅದ್ದೂರಿ ಪಸ್ಕ ಹಬ್ಬ ಆಚರಣೆ, ಮಂಜೂಷ ಪೆಟ್ಟಿಗೆ ಸ್ಥಾಪನೆ

18/04/2025, 19:36

ಬೆಂಗಳೂರು/ ಮಂಗಳೂರು(reporterkarnataka.com): ಗ್ರೇಸ್ ಮಿನಿಸ್ಟ್ರಿ ಸಂಸ್ಥೆ ವತಿಯಿಂದ ಎರಡು ದಿನಗಳ ಪಸ್ಕ ಹಬ್ಬ ಹಾಗೂ ಒಡಂಬಡಿಕೆ ಮಂಜೂಷ ಪೆಟ್ಟಿಗೆಯ ಸ್ಥಾಪನೆ ಮಂಗಳೂರಿನ ಹೊರವಲಯದ ವಳಚ್ಚಿಲ್ ಮತ್ತು ಬೆಂಗಳೂರಿನ ಬೂದಿಗೆರೆಯಲ್ಲಿ ನಡೆಯಿತು.
ಪಸ್ಕ ಹಬ್ಬ ಸಂದರ್ಭದಲ್ಲಿ ಗುಡ್ ಫ್ರೈಡೇ ಸಡಗರದ ಜೊತೆಗೆ ದೇಶದಲ್ಲೇ ಪ್ರಪ್ರಥಮ ಬಾರಿಗೆ ಚರ್ಚ್ ಆವರಣದಲ್ಲಿ ಬೈಬಲ್ ಪ್ರೇರಿತ ಒಡಂಬಡಿಕೆ ಮಂಜೂಷ ಪೆಟ್ಟಿಗೆಯನ್ನು ಅದ್ದೂರಿಯಾಗಿ ಬರಮಾಡಿಕೊಂಡು 7 ಸುತ್ತುಗಳ ಮೆರವಣಿಗೆಯ ನಂತರ ಬೆಂಗಳೂರಿನಲ್ಲಿ ಅನಾವರಣಗೊಳಿಸಲಾಯಿತು.
ದೇಶ-ವಿದೇಶಗಳಿಂದ ಹಾಗೂ ರಾಜ್ಯದ ಹಲವಾರು ಜಿಲ್ಲೆಗಳಿಂದ ಸಾವಿರಾರು ಭಕ್ತರು ಪಸ್ಕ ಹಬ್ಬದಲ್ಲಿ ಪಾಲ್ಗೊಂಡಿದ್ದು, ಬಿಷಪ್ ಡಾ. ಆಂಡ್ರೋ ರಿಚರ್ಡ್ ಅವರು ಪಸ್ಕ ಹಾಗೂ ಮಂಜೂಷ ಪೆಟ್ಟಿಗೆಯ ಮಹತ್ವವನ್ನ ಭಕ್ತರಿಗೆ ಸಾರಿದರು.
ಇದೇ ವೇಳೆ ಗ್ರೇಸ್ ಮಿನಿಸ್ಟ್ರಿ ನಿರ್ದೇಶಕರು ಹಾಗೂ ಸಂಸ್ಥಾಪಕರಾದ ಡಾ.ಆಂಡ್ರ್ಯೂ ರಿಚರ್ಡ್ ಅವರು ಮಾತನಾಡಿ, ಈ ವರ್ಷ ಪಸ್ಕ ಹಬ್ಬದ ಜೊತೆಗೆ ದೇಶದಲ್ಲೇ ಪ್ರಪ್ರಥಮ ಬಾರಿಗೆ ಮಂಜೂಷ ಪೆಟ್ಟಿಗೆಯ ಸ್ಥಾಪನೆ ಮಾಡಿರುವ ಸಂಸ್ಥೆ ಎಂದು ಹೇಳುವುದಕ್ಕೆ ಸಂತೋಷಪಡುತ್ತೇನೆ ಎಂದರು.
ಹಬ್ಬದ ಪ್ರಯುಕ್ತ ಬಡ ಮಕ್ಕಳ ಉಚಿತ ಶಿಕ್ಷಣಕ್ಕಾಗಿ ನೆರವು ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಸಮುದಾಯದ ಮಕ್ಕಳನ್ನು ಮತ್ತಷ್ಟು ಉತ್ತೇಜಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಇನ್ನು 2024ರ ಪಸ್ಕ ಹಬ್ಬ ಆಚರಿಸಿದ ಸಂದರ್ಭ ಬಡ ಚರ್ಚ್ ಒಂದು ಹಣಕಾಸಿನ ತೊಂದರೆಯಿಂದಾಗಿ ಅರ್ಧದಲ್ಲಿ ನಿಂತು ಹೋಗಿತ್ತು, ಗ್ರೇಸ್ ಮಿನಿಸ್ಟ್ರಿ ಸಂಸ್ಥೆಯಿಂದ 8 ಲಕ್ಷ ರೂ. ದೇಣಿಗೆ ನೀಡುವ ಮೂಲಕ ಆ ಚರ್ಚಿನ ಸಂಪೂರ್ಣ ನಿರ್ಮಾಣಕ್ಕೆ ಸಂಸ್ಥೆ ದಾರಿ ಮಾಡಿಕೊಟ್ಟಿದೆ ಎಂದರು.
ಪ್ರತಿ ವರ್ಷ ಪಸ್ಕ ಹಬ್ಬ ಆಯೋಜಿಸಲಾಗುತ್ತಿದ್ದು, ಆಮೂಲಕ ಬಡವರು, ಅನಾಥರು, ಬಡ ವಿದ್ಯಾರ್ಥಿಗಳಿಗೆ ಸಂಸ್ಥೆ ವತಿಯಿಂದ ನೆರವು ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ ಎಂದರು.


ಇನ್ನು ಒಡಂಬಡಿಕೆ ಮಂಜೂಷ ಪೆಟ್ಟಿಗೆ ಸ್ಥಾಪನೆಯ ನಂತರ ಸಾವಿರಾರು ಭಕ್ತಾದಿಗಳು ಸಾಲು ಸಾಲಿನಲ್ಲಿ ನಿಂತು ತಮ್ಮ ಪ್ರಾರ್ಥನ ಮನವಿಗಳನ್ನು ಸಲ್ಲಿಸಿ ದೇವರ ದರ್ಶನವನ್ನ ಪಡೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು