4:21 AM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ತಾಲೂಕು ಕಚೇರಿ ಎದುರು ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ: ಬೇಡಿಕೆ ಈಡೇರಿಕೆಗೆ ಆಗ್ರಹ

27/09/2024, 15:04

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಸರ್ಕಾರದಿಂದ ಹಲವು ಯೋಜನೆಗಳು ಜಾರಿಯಾಗಿವೆ. ಆಧುನೀಕರಣವಾಗಿ, ತಾಂತ್ರಿಕವಾಗಿ ಎಲ್ಲಾ ಸಲಕರಣೆ ನೀಡದೇ ಕೆಲಸಗಳನ್ನು ಮೊಬೈಲ್ ನಲ್ಲಿ ಮಾಡುವಂತೆ ಒತ್ತಡ ಹಾಕುತ್ತಿದ್ದಾರೆ. ಇದರ ಬಗ್ಗೆ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಮಾಡಿದರೂ ಯಾವುದೇ ಸ್ಪಂದನೆ ನೀಡಿಲ್ಲ ಎಂದು ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಅಧ್ಯಕ್ಷರಾದ ಚಂದ್ರಶೇಖರ್ ಹೇಳಿದರು.
ಪಟ್ಟಣದ ತಾಲೂಕು ಕಚೇರಿ ಎದುರು ಗುರುವಾರದಿಂದ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಸಂದರ್ಭದಲ್ಲಿ ಮಾತನಾಡಿ ನಮಗೆ ಯಾವುದೇ ಕಚೇರಿ ಇಲ್ಲ, ಕೂರಲು ಕುರ್ಚಿ ಇಲ್ಲ, ಯಾವುದೇ ಗ್ರಾಮಕ್ಕೆ ಹೋದರೂ, ಅರಳಿ ಮರದ ಕೆಳಗೆ, ಸ್ಕೂಲ್, ಅಂಗನವಾಡಿ, ಅಥವಾ ಬೈಕ್ ನಲ್ಲಿ ಹೋಗುವಾಗ ರೈತರು ಸಿಕ್ಕಿದರೆ ಅದೇ ಜಾಗದಲ್ಲಿ ಸಹಿ, ಸೀಲ್ ಹಾಕಿ ಕೊಡುತ್ತೇವೆ. ನಾವು ಕಷ್ಟಪಟ್ಟು ಕೆಲಸ ಮಾಡುತ್ತಿರುವುದು ಸರ್ಕಾರಕ್ಕೆ ಗೊತ್ತಾಗುತ್ತಿಲ್ಲ, ಇಲ್ಲಿಯವರೆಗೆ ಯಾವುದೇ ಮೊಬೈಲ್, ಡಾಟಾ ಕೊಟ್ಟಿಲ್ಲ, ತಾಂತ್ರಿಕವಾಗಿ ಬದಲಾವಣೆ ಆಗಿದೆ. ಆದರೆ ಕೆಲಸ ಮಾಡಲು ಯಾವುದೇ ಅಗತ್ಯವಾದ ಸಲಕರಣೆ ನೀಡಿಲ್ಲ ಎಂದರು.
ಗ್ರಾಮ ಆಡಳಿತ ಅಧಿಕಾರಿಗಳಾದ ಸುಧೀರ್ ಮಾತನಾಡಿ, ಕಂದಾಯ ಇಲಾಖೆಯನ್ನು ಮಾತೃ ಇಲಾಖೆ ಎಂದು ಪರಿಗಣನೆ ಮಾಡಿದ್ದಾರೆ. ಸಾರ್ವಜನಿಕರ ಹಾಗೂ ರೈತರ ಜೊತೆಗೆ ನಿಕಟ ಸಂಪರ್ಕ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ಈಗಿನ ತಂತ್ರಜ್ಞಾನ ಕಾಲದಲ್ಲಿ ಕಂದಾಯ ಇಲಾಖೆಯಲ್ಲಿರುವ 44 ಸಕಾಲ ಸೇವೆಗಳ ಪೈಕಿ 21 ಸೇವೆಗಳನ್ನು ನಮ್ಮ ಮೊಬೈಲ್ ಆಪ್ ನಲ್ಲಿ ಮಾಡಲು ವ್ಯವಸ್ಥೆ ಮಾಡಿದ್ದಾರೆ. ಆದರೆ ಅದಕ್ಕೆ ಬೇಕಾದ ಡಾಟಾ ಹಾಗೂ ಇತರ ಫೆಸಿಲಿಟಿ ಕೊಡುತ್ತಿಲ್ಲ ಎಂದರು.
ಎಲ್ಲಾ ತಂತ್ರಜ್ಞಾನವನ್ನು ಮೊಬೈಲ್ ನಲ್ಲೆ ಅಳವಡಿಕೆ ಮಾಡಿರುವುದರಿಂದ ನಾವೆಲ್ಲರೂ ಎರಡರಿಂದ ಮೂರು ಗಂಟೆ ಮೊಬೈಲ್ ನಲ್ಲೆ ಕಳೆಯುವಂತಾಗಿದೆ. ರಜಾ ದಿನಗಳಲ್ಲಿಯೂ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ ಅಷ್ಟೇ ಅಲ್ಲದೆ ಕೆಲಸ ಇದ್ದ ಸಂದರ್ಭದಲ್ಲಿ ಸಮಯ ಮೀರಿದ್ದರೂ ಕೆಲಸ ಮಾಡಿಸಿ ಕೊಳ್ಳುತ್ತಿದ್ದಾರೆ. ಅಗತ್ಯವಾದ ಸಲಕರಣೆ ಇಲ್ಲದ ಕಾರಣ ಸಾರ್ವಜನಿಕರಿಗೂ ಸರಿಯಾದ ಸಮಯಕ್ಕೆ ಕೆಲಸ ಮಾಡಿಕೊಡಲು ಆಗುತ್ತಿಲ್ಲ ಎಂದರು.
ಗ್ರಾಮ ಆಡಳಿತ ಅಧಿಕಾರಿಯಾಗಿ ಕೆಲಸಕ್ಕೆ ಸೇರಿದರೆ 30 ವರ್ಷಗಳ ಕಾಲ ಸೇವೆ ಮಾಡಿದರೂ ಸಹ ಗ್ರಾಮ ಆಡಳಿತ ಅಧಿಕಾರಿಯಾಗಿಯೇ ನಿವೃತ್ತಿಯಾಗುತ್ತಿದ್ದಾರೆ. ವರ್ಗಾವಣೆ ವಿಚಾರದಲ್ಲೂ ಸಹ ತಡೆದಿದ್ದಾರೆ. ಜಾತಿ ವಿಚಾರದಲ್ಲಿ ಸಣ್ಣ ತಪ್ಪುಗಳು ಆದರೂ ನಮ್ಮ ಮೇಲೆ ಕೇಸ್ ದಾಖಲು ಮಾಡುವ ಕೆಲಸ ಆಗುತ್ತಿದೆ ಅದು ನಿಲ್ಲಬೇಕು, ನಮ್ಮ ಬೇಡಿಕೆಗಳನ್ನು ಸ್ಪಂದಿಸದೆ ಇದ್ದರೆ ಅನಿರ್ದಿಷ್ಟಾವಧಿ ಮುಷ್ಕರದಿಂದ ಹಿಂದೆ ಸರಿಯುವುದಿಲ್ಲ ಎಂದರು.
ಈ ಸಂದರ್ಭದಲ್ಲಿ 30ಕ್ಕೂ ಹೆಚ್ಚು ಗ್ರಾಮ ಆಡಳಿತ ಅಧಿಕಾರಿಗಳು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು