1:05 PM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

Grama Panchayat | ಗ್ರಾಮ ಪಂಚಾಯತಿ ಆದಾಯದಲ್ಲಿ ಸಾರ್ವಕಾಲಿಕ ಹೆಚ್ಚಳ: ಕಳೆದ ವರ್ಷಕ್ಕಿಂತಲೂ 500 ಕೋಟಿ ಆದಾಯ ಅಧಿಕ

06/04/2025, 23:19

ಬೆಂಗಳೂರು(reporterkarnataka.com): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮೀಣ ಆಡಳಿತದಲ್ಲಿ ಮೌನ ಕ್ರಾಂತಿಯನ್ನು ನಡೆಸುತ್ತಿದ್ದು ವರ್ಷದಿಂದ ವರ್ಷಕ್ಕೆ ದಾಖಲೆಯ ಆದಾಯ ಸಂಗ್ರಹಣೆಯ ಮೂಲಕ ಪಂಚಾಯತ್ ಆರ್ಥಿಕತೆಯನ್ನು ಬಲಪಡಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
2022–23ನೆ ಸಾಲಿನಲ್ಲಿ ಇಲಾಖೆಯು 571.94 ಕೋಟಿ ರೂ. ಆದಾಯ ಗಳಿಸಿದ್ದರೆ, 2023–24ನೆ ಸಾಲಿನಲ್ಲಿ ಅದು 767.87 ಕೋಟಿ ರೂ.ಗಳಿಗೆ ಏರಿತು. 2024–25 ಸಾಲಿನಲ್ಲಿ ಆದಾಯ ಗರಿಷ್ಠ ಮಟ್ಟ ತಲುಪಿ 1272.43 ಕೋಟಿ ರೂ. ತಲುಪಿದ್ದು ಇದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆದಾಯ ಸಂಗ್ರಹಣೆಯಲ್ಲಿ ಸಾರ್ವಕಾಲಿಕ ದಾಖಲೆ ಆಗಿದೆ ಎಂದು ಸಚಿವರು ಹೇಳಿದ್ದಾರೆ.
ಕಳೆದ 18 ತಿಂಗಳುಗಳಲ್ಲಿ, ನಾವು 13,91,678 ಹೊಸ ಆಸ್ತಿಗಳನ್ನು ತೆರಿಗೆ ನೋಂದಣಿ ವ್ಯಾಪ್ತಿಗೆ ತರುವ ಮೂಲಕ ಪಂಚಾಯತ್ ಆಸ್ತಿಗಳನ್ನು 1,43,91,438ಕ್ಕೆ ಹೆಚ್ಚಿಸಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿರುವ ಸಚಿವರು ಗ್ರಾಮೀಣ ಆಸ್ತಿ ನಿರ್ವಹಣಾ ವೇದಿಕೆಯಾದ ಇ-ಸ್ವತ್ತು ಹಾದಿಯಲ್ಲಿ ನಡೆಯುತ್ತಿರುವ ದಿಟ್ಟ ಸುಧಾರಣೆಗಳೊಂದಿಗೆ, ನಾವು ಇನ್ನೂ ಹೆಚ್ಚಿನ ಆದಾಯ ಉತ್ಪಾದನೆಗೆ ವೇದಿಕೆಯನ್ನು ಸಜ್ಜುಗೊಳಿಸುತ್ತಿದ್ದೇವೆ ಮತ್ತು ತಳಮಟ್ಟದಲ್ಲಿ ಹೆಚ್ಚು ಸ್ಪಂದಿಸುವಂತೆ ಪಂಚಾಯತ್‌ಗಳಿಗೆ ಹೆಚ್ಚುಅಧಿಕಾರ ನೀಡುತ್ತಿದ್ದೇವೆ ಈ ಮೂಲಕ ನಾವು ಕೇವಲ ಹಳ್ಳಿಗಳನ್ನು ಬಲಪಡಿಸುತ್ತಿಲ್ಲ, ಅದರೊಂದಿಗೆ ಕರ್ನಾಟಕದ ಮುಂದಿನ ಆರ್ಥಿಕ ಎಂಜಿನ್‌ಗಳಿಗೆ ಶಕ್ತಿ ತುಂಬುತ್ತಿದ್ದೇವೆ ಎಂಬ ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು