1:48 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

Grama Panchayat | ಗ್ರಾಮ ಪಂಚಾಯತಿ ಆದಾಯದಲ್ಲಿ ಸಾರ್ವಕಾಲಿಕ ಹೆಚ್ಚಳ: ಕಳೆದ ವರ್ಷಕ್ಕಿಂತಲೂ 500 ಕೋಟಿ ಆದಾಯ ಅಧಿಕ

06/04/2025, 23:19

ಬೆಂಗಳೂರು(reporterkarnataka.com): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮೀಣ ಆಡಳಿತದಲ್ಲಿ ಮೌನ ಕ್ರಾಂತಿಯನ್ನು ನಡೆಸುತ್ತಿದ್ದು ವರ್ಷದಿಂದ ವರ್ಷಕ್ಕೆ ದಾಖಲೆಯ ಆದಾಯ ಸಂಗ್ರಹಣೆಯ ಮೂಲಕ ಪಂಚಾಯತ್ ಆರ್ಥಿಕತೆಯನ್ನು ಬಲಪಡಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
2022–23ನೆ ಸಾಲಿನಲ್ಲಿ ಇಲಾಖೆಯು 571.94 ಕೋಟಿ ರೂ. ಆದಾಯ ಗಳಿಸಿದ್ದರೆ, 2023–24ನೆ ಸಾಲಿನಲ್ಲಿ ಅದು 767.87 ಕೋಟಿ ರೂ.ಗಳಿಗೆ ಏರಿತು. 2024–25 ಸಾಲಿನಲ್ಲಿ ಆದಾಯ ಗರಿಷ್ಠ ಮಟ್ಟ ತಲುಪಿ 1272.43 ಕೋಟಿ ರೂ. ತಲುಪಿದ್ದು ಇದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆದಾಯ ಸಂಗ್ರಹಣೆಯಲ್ಲಿ ಸಾರ್ವಕಾಲಿಕ ದಾಖಲೆ ಆಗಿದೆ ಎಂದು ಸಚಿವರು ಹೇಳಿದ್ದಾರೆ.
ಕಳೆದ 18 ತಿಂಗಳುಗಳಲ್ಲಿ, ನಾವು 13,91,678 ಹೊಸ ಆಸ್ತಿಗಳನ್ನು ತೆರಿಗೆ ನೋಂದಣಿ ವ್ಯಾಪ್ತಿಗೆ ತರುವ ಮೂಲಕ ಪಂಚಾಯತ್ ಆಸ್ತಿಗಳನ್ನು 1,43,91,438ಕ್ಕೆ ಹೆಚ್ಚಿಸಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿರುವ ಸಚಿವರು ಗ್ರಾಮೀಣ ಆಸ್ತಿ ನಿರ್ವಹಣಾ ವೇದಿಕೆಯಾದ ಇ-ಸ್ವತ್ತು ಹಾದಿಯಲ್ಲಿ ನಡೆಯುತ್ತಿರುವ ದಿಟ್ಟ ಸುಧಾರಣೆಗಳೊಂದಿಗೆ, ನಾವು ಇನ್ನೂ ಹೆಚ್ಚಿನ ಆದಾಯ ಉತ್ಪಾದನೆಗೆ ವೇದಿಕೆಯನ್ನು ಸಜ್ಜುಗೊಳಿಸುತ್ತಿದ್ದೇವೆ ಮತ್ತು ತಳಮಟ್ಟದಲ್ಲಿ ಹೆಚ್ಚು ಸ್ಪಂದಿಸುವಂತೆ ಪಂಚಾಯತ್‌ಗಳಿಗೆ ಹೆಚ್ಚುಅಧಿಕಾರ ನೀಡುತ್ತಿದ್ದೇವೆ ಈ ಮೂಲಕ ನಾವು ಕೇವಲ ಹಳ್ಳಿಗಳನ್ನು ಬಲಪಡಿಸುತ್ತಿಲ್ಲ, ಅದರೊಂದಿಗೆ ಕರ್ನಾಟಕದ ಮುಂದಿನ ಆರ್ಥಿಕ ಎಂಜಿನ್‌ಗಳಿಗೆ ಶಕ್ತಿ ತುಂಬುತ್ತಿದ್ದೇವೆ ಎಂಬ ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು