9:28 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು…

ಇತ್ತೀಚಿನ ಸುದ್ದಿ

Grama Panchayat | ಗ್ರಾಮ ಪಂಚಾಯತಿ ಆದಾಯದಲ್ಲಿ ಸಾರ್ವಕಾಲಿಕ ಹೆಚ್ಚಳ: ಕಳೆದ ವರ್ಷಕ್ಕಿಂತಲೂ 500 ಕೋಟಿ ಆದಾಯ ಅಧಿಕ

06/04/2025, 23:19

ಬೆಂಗಳೂರು(reporterkarnataka.com): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮೀಣ ಆಡಳಿತದಲ್ಲಿ ಮೌನ ಕ್ರಾಂತಿಯನ್ನು ನಡೆಸುತ್ತಿದ್ದು ವರ್ಷದಿಂದ ವರ್ಷಕ್ಕೆ ದಾಖಲೆಯ ಆದಾಯ ಸಂಗ್ರಹಣೆಯ ಮೂಲಕ ಪಂಚಾಯತ್ ಆರ್ಥಿಕತೆಯನ್ನು ಬಲಪಡಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
2022–23ನೆ ಸಾಲಿನಲ್ಲಿ ಇಲಾಖೆಯು 571.94 ಕೋಟಿ ರೂ. ಆದಾಯ ಗಳಿಸಿದ್ದರೆ, 2023–24ನೆ ಸಾಲಿನಲ್ಲಿ ಅದು 767.87 ಕೋಟಿ ರೂ.ಗಳಿಗೆ ಏರಿತು. 2024–25 ಸಾಲಿನಲ್ಲಿ ಆದಾಯ ಗರಿಷ್ಠ ಮಟ್ಟ ತಲುಪಿ 1272.43 ಕೋಟಿ ರೂ. ತಲುಪಿದ್ದು ಇದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆದಾಯ ಸಂಗ್ರಹಣೆಯಲ್ಲಿ ಸಾರ್ವಕಾಲಿಕ ದಾಖಲೆ ಆಗಿದೆ ಎಂದು ಸಚಿವರು ಹೇಳಿದ್ದಾರೆ.
ಕಳೆದ 18 ತಿಂಗಳುಗಳಲ್ಲಿ, ನಾವು 13,91,678 ಹೊಸ ಆಸ್ತಿಗಳನ್ನು ತೆರಿಗೆ ನೋಂದಣಿ ವ್ಯಾಪ್ತಿಗೆ ತರುವ ಮೂಲಕ ಪಂಚಾಯತ್ ಆಸ್ತಿಗಳನ್ನು 1,43,91,438ಕ್ಕೆ ಹೆಚ್ಚಿಸಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿರುವ ಸಚಿವರು ಗ್ರಾಮೀಣ ಆಸ್ತಿ ನಿರ್ವಹಣಾ ವೇದಿಕೆಯಾದ ಇ-ಸ್ವತ್ತು ಹಾದಿಯಲ್ಲಿ ನಡೆಯುತ್ತಿರುವ ದಿಟ್ಟ ಸುಧಾರಣೆಗಳೊಂದಿಗೆ, ನಾವು ಇನ್ನೂ ಹೆಚ್ಚಿನ ಆದಾಯ ಉತ್ಪಾದನೆಗೆ ವೇದಿಕೆಯನ್ನು ಸಜ್ಜುಗೊಳಿಸುತ್ತಿದ್ದೇವೆ ಮತ್ತು ತಳಮಟ್ಟದಲ್ಲಿ ಹೆಚ್ಚು ಸ್ಪಂದಿಸುವಂತೆ ಪಂಚಾಯತ್‌ಗಳಿಗೆ ಹೆಚ್ಚುಅಧಿಕಾರ ನೀಡುತ್ತಿದ್ದೇವೆ ಈ ಮೂಲಕ ನಾವು ಕೇವಲ ಹಳ್ಳಿಗಳನ್ನು ಬಲಪಡಿಸುತ್ತಿಲ್ಲ, ಅದರೊಂದಿಗೆ ಕರ್ನಾಟಕದ ಮುಂದಿನ ಆರ್ಥಿಕ ಎಂಜಿನ್‌ಗಳಿಗೆ ಶಕ್ತಿ ತುಂಬುತ್ತಿದ್ದೇವೆ ಎಂಬ ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು