4:42 PM Sunday28 - June 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ…

ಇತ್ತೀಚಿನ ಸುದ್ದಿ

Grama Panchayat | ಗ್ರಾಮ ಪಂಚಾಯತಿ ಆದಾಯದಲ್ಲಿ ಸಾರ್ವಕಾಲಿಕ ಹೆಚ್ಚಳ: ಕಳೆದ ವರ್ಷಕ್ಕಿಂತಲೂ 500 ಕೋಟಿ ಆದಾಯ ಅಧಿಕ

06/04/2025, 23:19

ಬೆಂಗಳೂರು(reporterkarnataka.com): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮೀಣ ಆಡಳಿತದಲ್ಲಿ ಮೌನ ಕ್ರಾಂತಿಯನ್ನು ನಡೆಸುತ್ತಿದ್ದು ವರ್ಷದಿಂದ ವರ್ಷಕ್ಕೆ ದಾಖಲೆಯ ಆದಾಯ ಸಂಗ್ರಹಣೆಯ ಮೂಲಕ ಪಂಚಾಯತ್ ಆರ್ಥಿಕತೆಯನ್ನು ಬಲಪಡಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
2022–23ನೆ ಸಾಲಿನಲ್ಲಿ ಇಲಾಖೆಯು 571.94 ಕೋಟಿ ರೂ. ಆದಾಯ ಗಳಿಸಿದ್ದರೆ, 2023–24ನೆ ಸಾಲಿನಲ್ಲಿ ಅದು 767.87 ಕೋಟಿ ರೂ.ಗಳಿಗೆ ಏರಿತು. 2024–25 ಸಾಲಿನಲ್ಲಿ ಆದಾಯ ಗರಿಷ್ಠ ಮಟ್ಟ ತಲುಪಿ 1272.43 ಕೋಟಿ ರೂ. ತಲುಪಿದ್ದು ಇದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆದಾಯ ಸಂಗ್ರಹಣೆಯಲ್ಲಿ ಸಾರ್ವಕಾಲಿಕ ದಾಖಲೆ ಆಗಿದೆ ಎಂದು ಸಚಿವರು ಹೇಳಿದ್ದಾರೆ.
ಕಳೆದ 18 ತಿಂಗಳುಗಳಲ್ಲಿ, ನಾವು 13,91,678 ಹೊಸ ಆಸ್ತಿಗಳನ್ನು ತೆರಿಗೆ ನೋಂದಣಿ ವ್ಯಾಪ್ತಿಗೆ ತರುವ ಮೂಲಕ ಪಂಚಾಯತ್ ಆಸ್ತಿಗಳನ್ನು 1,43,91,438ಕ್ಕೆ ಹೆಚ್ಚಿಸಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿರುವ ಸಚಿವರು ಗ್ರಾಮೀಣ ಆಸ್ತಿ ನಿರ್ವಹಣಾ ವೇದಿಕೆಯಾದ ಇ-ಸ್ವತ್ತು ಹಾದಿಯಲ್ಲಿ ನಡೆಯುತ್ತಿರುವ ದಿಟ್ಟ ಸುಧಾರಣೆಗಳೊಂದಿಗೆ, ನಾವು ಇನ್ನೂ ಹೆಚ್ಚಿನ ಆದಾಯ ಉತ್ಪಾದನೆಗೆ ವೇದಿಕೆಯನ್ನು ಸಜ್ಜುಗೊಳಿಸುತ್ತಿದ್ದೇವೆ ಮತ್ತು ತಳಮಟ್ಟದಲ್ಲಿ ಹೆಚ್ಚು ಸ್ಪಂದಿಸುವಂತೆ ಪಂಚಾಯತ್‌ಗಳಿಗೆ ಹೆಚ್ಚುಅಧಿಕಾರ ನೀಡುತ್ತಿದ್ದೇವೆ ಈ ಮೂಲಕ ನಾವು ಕೇವಲ ಹಳ್ಳಿಗಳನ್ನು ಬಲಪಡಿಸುತ್ತಿಲ್ಲ, ಅದರೊಂದಿಗೆ ಕರ್ನಾಟಕದ ಮುಂದಿನ ಆರ್ಥಿಕ ಎಂಜಿನ್‌ಗಳಿಗೆ ಶಕ್ತಿ ತುಂಬುತ್ತಿದ್ದೇವೆ ಎಂಬ ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು