5:23 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಗ್ರಾಪಂ ಸದಸ್ಯನ ಸಮ್ಮುಖದಲ್ಲೇ ಮದುವೆ – ಡಿಜೆ ಪಾರ್ಟಿ: ಕೊರೊನಾದ ಭೀತಿಯಲ್ಲಿ ಪಾವೂರು ಗ್ರಾಮಸ್ಥರು

27/05/2021, 23:46

ಮಂಗಳೂರು(reporterkarnataka news):ಕೊರೊನಾ ಕುರಿತು ಜಾಗೃತಿ ಮೂಡಿಸಬೇಕಾದ ಪಂಚಾಯಿತಿ ಸದಸ್ಯರೊಬ್ಬರ ಬೇಜವಾಬ್ದಾರಿತನದಿಂದ ಕೊರೊನಾ ಹಾಟ್ ಸ್ಪಾಟ್  ಆಗಿ ಬದಲಾಗುವ ಭೀತಿಯನ್ನು ಪಾವೂರು ಗ್ರಾಮಸ್ಥರು ಎದುರಿಸುತ್ತಿದ್ದಾರೆ.ಪಾವೂರು ಪಂಚಾಯಿತಿ ಸದಸ್ಯನ ಸಮ್ಮುಖದಲ್ಲಿ ಮದುವೆ ಹಾಗೂ ಡಿಜೆ ಪಾರ್ಟಿ ನಡೆದಿದ್ದು, ಇದರಲ್ಲಿ 500ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

ಮದುವೆಯಲ್ಲಿ ಗ್ರಾಮದ ಮತ್ತು ಹೊರ ಭಾಗದ. ಹಲವು ಮಂದಿ  ಭಾಗವಹಿಸಿದ್ದಾರೆ. ಇವರಲ್ಲಿ ಕೊರೊನಾ ಸೋಂಕಿತರು ಕೂಡ ಇದ್ದರು ಎನ್ನಲಾಗಿದೆ. ಪಾವೂರು ಗ್ರಾಮದ ವ್ಯಕ್ತಿಯ ಹೆಸರಿನಲ್ಲಿ ಮದುವೆಯ ಅನುಮತಿಯನ್ನು ಪಡೆದು ಪರವೂರಿನ ಜೋಡಿಯನ್ನು ತಂದು ಕಾನೂನು ಬಾಹಿರವಾಗಿ ಮದುವೆ ಮಾಡಿಸಿದ್ದು, ಈ ಮದುವೆ ಕಾರ್ಯಕ್ರಮದಲ್ಲಿ ಪಂಚಾಯಿತಿ ಸದಸ್ಯರು ಭಾಗಿಯಾಗಿರುತ್ತಾರೆ, ಇದು ಅಲ್ಲದೆ ಹಲವಾರು ಕೊರೊನಾ ಸೋಂಕಿತರ ಸಂಪರ್ಕಕ್ಕೆ ಬಂದ ವೇಲೇರಿಯನ್ ಡಿಸೋಜ ಅವರು ಗ್ರಾಮದ ಹಲವಾರು ಮನೆಗಳಿಗೆ ಭೇಟಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಇವರ ಇಂತಹ ಬೇಜವಾಬ್ದಾರಿತನದಿಂದ ಪಾವೂರು ಗ್ರಾಮದಲ್ಲಿ ಕೊರೊನಾ ಹರಡುವ ಭೀತಿ ಉಂಟಾಗಿದೆ. ಈ ಕಾರ್ಯಕ್ರಮದ ನಂತರ ಈ ಊರಿನಲ್ಲಿ ಹಲವಾರು ಜನರಿಗೆ ಕೊರೊನಾ ಲಕ್ಷಣಗಳು ಕಂಡು ಬಂದಿದ್ದು, ಸಾರ್ವಜನಿಕರು ಭಯಭೀತಗೊಂಡಿದ್ದಾರೆ. ಇವರನ್ನು ಕೊರೊನಾ

 ಪರೀಕ್ಷೆ ಮಾಡಿಸಬೇಡಿ ಎಂದು ಸ್ವತಃ ಟಾಸ್ಕ್ ಫೋರ್ಸ್ ಸದಸ್ಯರೇ ಮನವಿ ಮಾಡಿರುವ ಬಗ್ಗೆ ಮಾಹಿತಿ ಇದೆ.  ಪರೀಕ್ಷೆಗೆ ಒಳಪಡದ ಜನರು ರಾಜಾರೋಷವಾಗಿ ಗ್ರಾಮದಲ್ಲಿ ತಿರುಗುತ್ತಿದ್ದಾರೆ. ಇದು ಜನರಲ್ಲಿ ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಇದೆಲ್ಲಾ ಗೊತ್ತಿದ್ದೂ ಪಾವೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು  ಮತ್ತು ಉಪಾಧ್ಯಕ್ಷರು ಜಾಣಕುರುಡು ತೋರಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಹೇಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು