12:01 PM Sunday15 - June 2025
ಬ್ರೇಕಿಂಗ್ ನ್ಯೂಸ್
Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ…

ಇತ್ತೀಚಿನ ಸುದ್ದಿ

ಗ್ರಾಪಂ ಸದಸ್ಯನ ಸಮ್ಮುಖದಲ್ಲೇ ಮದುವೆ – ಡಿಜೆ ಪಾರ್ಟಿ: ಕೊರೊನಾದ ಭೀತಿಯಲ್ಲಿ ಪಾವೂರು ಗ್ರಾಮಸ್ಥರು

27/05/2021, 23:46

ಮಂಗಳೂರು(reporterkarnataka news):ಕೊರೊನಾ ಕುರಿತು ಜಾಗೃತಿ ಮೂಡಿಸಬೇಕಾದ ಪಂಚಾಯಿತಿ ಸದಸ್ಯರೊಬ್ಬರ ಬೇಜವಾಬ್ದಾರಿತನದಿಂದ ಕೊರೊನಾ ಹಾಟ್ ಸ್ಪಾಟ್  ಆಗಿ ಬದಲಾಗುವ ಭೀತಿಯನ್ನು ಪಾವೂರು ಗ್ರಾಮಸ್ಥರು ಎದುರಿಸುತ್ತಿದ್ದಾರೆ.ಪಾವೂರು ಪಂಚಾಯಿತಿ ಸದಸ್ಯನ ಸಮ್ಮುಖದಲ್ಲಿ ಮದುವೆ ಹಾಗೂ ಡಿಜೆ ಪಾರ್ಟಿ ನಡೆದಿದ್ದು, ಇದರಲ್ಲಿ 500ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

ಮದುವೆಯಲ್ಲಿ ಗ್ರಾಮದ ಮತ್ತು ಹೊರ ಭಾಗದ. ಹಲವು ಮಂದಿ  ಭಾಗವಹಿಸಿದ್ದಾರೆ. ಇವರಲ್ಲಿ ಕೊರೊನಾ ಸೋಂಕಿತರು ಕೂಡ ಇದ್ದರು ಎನ್ನಲಾಗಿದೆ. ಪಾವೂರು ಗ್ರಾಮದ ವ್ಯಕ್ತಿಯ ಹೆಸರಿನಲ್ಲಿ ಮದುವೆಯ ಅನುಮತಿಯನ್ನು ಪಡೆದು ಪರವೂರಿನ ಜೋಡಿಯನ್ನು ತಂದು ಕಾನೂನು ಬಾಹಿರವಾಗಿ ಮದುವೆ ಮಾಡಿಸಿದ್ದು, ಈ ಮದುವೆ ಕಾರ್ಯಕ್ರಮದಲ್ಲಿ ಪಂಚಾಯಿತಿ ಸದಸ್ಯರು ಭಾಗಿಯಾಗಿರುತ್ತಾರೆ, ಇದು ಅಲ್ಲದೆ ಹಲವಾರು ಕೊರೊನಾ ಸೋಂಕಿತರ ಸಂಪರ್ಕಕ್ಕೆ ಬಂದ ವೇಲೇರಿಯನ್ ಡಿಸೋಜ ಅವರು ಗ್ರಾಮದ ಹಲವಾರು ಮನೆಗಳಿಗೆ ಭೇಟಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಇವರ ಇಂತಹ ಬೇಜವಾಬ್ದಾರಿತನದಿಂದ ಪಾವೂರು ಗ್ರಾಮದಲ್ಲಿ ಕೊರೊನಾ ಹರಡುವ ಭೀತಿ ಉಂಟಾಗಿದೆ. ಈ ಕಾರ್ಯಕ್ರಮದ ನಂತರ ಈ ಊರಿನಲ್ಲಿ ಹಲವಾರು ಜನರಿಗೆ ಕೊರೊನಾ ಲಕ್ಷಣಗಳು ಕಂಡು ಬಂದಿದ್ದು, ಸಾರ್ವಜನಿಕರು ಭಯಭೀತಗೊಂಡಿದ್ದಾರೆ. ಇವರನ್ನು ಕೊರೊನಾ

 ಪರೀಕ್ಷೆ ಮಾಡಿಸಬೇಡಿ ಎಂದು ಸ್ವತಃ ಟಾಸ್ಕ್ ಫೋರ್ಸ್ ಸದಸ್ಯರೇ ಮನವಿ ಮಾಡಿರುವ ಬಗ್ಗೆ ಮಾಹಿತಿ ಇದೆ.  ಪರೀಕ್ಷೆಗೆ ಒಳಪಡದ ಜನರು ರಾಜಾರೋಷವಾಗಿ ಗ್ರಾಮದಲ್ಲಿ ತಿರುಗುತ್ತಿದ್ದಾರೆ. ಇದು ಜನರಲ್ಲಿ ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಇದೆಲ್ಲಾ ಗೊತ್ತಿದ್ದೂ ಪಾವೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು  ಮತ್ತು ಉಪಾಧ್ಯಕ್ಷರು ಜಾಣಕುರುಡು ತೋರಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಹೇಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು