1:03 PM Tuesday14 - October 2025
ಬ್ರೇಕಿಂಗ್ ನ್ಯೂಸ್
ಅಕ್ರಮ ಗೋವು ಸಾಗಾಟ ಮಾಡುತ್ತಿದ್ದ ವಾಹನ ಪಲ್ಟಿ: ಗಾಯಗೊಂಡ ಗೋವುಗಳನ್ನು ಬಿಟ್ಟು ಆರೋಪಿಗಳು… ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ನಡೆ ನಿಗೂಢ: ಸಚಿವ ಎಚ್. ಸಿ. ಮಹದೇವಪ್ಪ ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್…

ಇತ್ತೀಚಿನ ಸುದ್ದಿ

ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ಕೊಲೆ ಪ್ರಕರಣ: ಉಪ್ಪಾರ ಸಮಾಜದಿಂದ ವಿಶೇಷ ಸಭೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

26/10/2024, 22:44

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ದೇವರಸನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಸೌಭಾಗ್ಯ ಅವರ ಪತಿ ನಂಜುಂಡಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತಾಲೂಕು ಉಪ್ಪಾರ ಸಮಾಜದ ವತಿಯಿಂದ ವಿಶೇಷ ಸಭೆ ನಡೆಯಿತು.


ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಮುಂಭಾಗದ ಉಪ್ಪಾರ ಜನಾಂಗದ ಛತ್ರದಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ತಾಲೂಕಿನ ಎಲ್ಲಾ ಗ್ರಾಮಗಳಲ್ಲಿನ ಉಪ್ಪಾರ ಜನಾಂಗದ ಮುಖಂಡರು ಪಕ್ಷಾತೀತವಾಗಿ ಸಭೆಯಲ್ಲಿ ಭಾಗವಹಿಸಿದ್ದರು. ಮೃತರ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಲೆ ಕೇಸಿನ ಬಗ್ಗೆ ಚರ್ಚೆ ಸೇರಿದಂತೆ ಈ ಕೇಸಿನಲ್ಲಿ ಸಮಾಜದ ಮುಖಂಡರು ಸೇರಿದಂತೆ ಯಾರೇ ಭಾಗಿಯಾಗಿದ್ದರು ಅವರ ವಿರುದ್ಧವು ಪೊಲೀಸರು ಸೂಕ್ತ ತನಿಖೆ ನಡೆಸಿ ಅವರನ್ನು ಬಂಧಿಸುವಂತೆ, ಮೃತರ ಕುಟುಂಬಕ್ಕೆ ಸಮಾಜದ ವತಿಯಿಂದ ಹಾಗೂ ಸರ್ಕಾರದಿಂದಲೂ ಆರ್ಥಿಕ ನೆರವು ಕೊಡಿಸುವಂತೆಯೂ ಅಲ್ಲದೆ ಮೃತರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಅವರ ಪತ್ನಿಗೆ ಅಧ್ಯಕ್ಷ ಸ್ಥಾನ ಕೊಡಿಸುವಂತೆಯೂ ಚರ್ಚೆ ನಡೆಸಲಾಯಿತು.
ನೊಂದ ಕುಟುಂಬದ ಜೊತೆಗೆ ನಮ್ಮ ಸಮಾಜ ಬೆನ್ನೆಲುಬಾಗಿ ನಿಂತಿದ್ದು ಸಮಾಜದ ವತಿಯಿಂದ ಒಂದು ಲಕ್ಷ ರೂಪಾಯಿ ನಗದು ನೆರವು ನೀಡಿರುವ ತಿಳಿಸಿ ಒಂದು ಲಕ್ಷ ನಗದು ಹಣವನ್ನು ಮೃತರ ಪತ್ನಿಗೆ ನೀಡಲಾಯಿತು.
ಸಭೆಯ ಬಳಿಕ ಸಮಾಜದ ಮುಖಂಡರಾದ ಹೆಮ್ಮರಗಾಲ ಸೋಮಣ್ಣ ಹಾಗೂ ಮೂಗ ಶೆಟ್ಟಿ ಹಾಗೂ ಮೃತನ ಪತ್ನಿ ಸೌಭಾಗ್ಯ ಮಾತನಾಡಿ ಸಭೆಯಲ್ಲಿ ಚರ್ಚಿಸಲಾದ ವಿಷಯಗಳ ಬಗ್ಗೆ ವಿವರಿಸಿದರು.
ಉಪ್ಪಾರ ಸಮಾಜದ ತಾಲೂಕಿನ ವಿವಿಧ ರಾಜಕೀಯ ಪಕ್ಷಗಳ ಎಲ್ಲಾ ಮುಖಂಡರು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು