1:50 AM Monday20 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ಕೊಲೆ ಪ್ರಕರಣ: ಉಪ್ಪಾರ ಸಮಾಜದಿಂದ ವಿಶೇಷ ಸಭೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

26/10/2024, 22:44

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ದೇವರಸನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಸೌಭಾಗ್ಯ ಅವರ ಪತಿ ನಂಜುಂಡಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತಾಲೂಕು ಉಪ್ಪಾರ ಸಮಾಜದ ವತಿಯಿಂದ ವಿಶೇಷ ಸಭೆ ನಡೆಯಿತು.


ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಮುಂಭಾಗದ ಉಪ್ಪಾರ ಜನಾಂಗದ ಛತ್ರದಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ತಾಲೂಕಿನ ಎಲ್ಲಾ ಗ್ರಾಮಗಳಲ್ಲಿನ ಉಪ್ಪಾರ ಜನಾಂಗದ ಮುಖಂಡರು ಪಕ್ಷಾತೀತವಾಗಿ ಸಭೆಯಲ್ಲಿ ಭಾಗವಹಿಸಿದ್ದರು. ಮೃತರ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಲೆ ಕೇಸಿನ ಬಗ್ಗೆ ಚರ್ಚೆ ಸೇರಿದಂತೆ ಈ ಕೇಸಿನಲ್ಲಿ ಸಮಾಜದ ಮುಖಂಡರು ಸೇರಿದಂತೆ ಯಾರೇ ಭಾಗಿಯಾಗಿದ್ದರು ಅವರ ವಿರುದ್ಧವು ಪೊಲೀಸರು ಸೂಕ್ತ ತನಿಖೆ ನಡೆಸಿ ಅವರನ್ನು ಬಂಧಿಸುವಂತೆ, ಮೃತರ ಕುಟುಂಬಕ್ಕೆ ಸಮಾಜದ ವತಿಯಿಂದ ಹಾಗೂ ಸರ್ಕಾರದಿಂದಲೂ ಆರ್ಥಿಕ ನೆರವು ಕೊಡಿಸುವಂತೆಯೂ ಅಲ್ಲದೆ ಮೃತರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಅವರ ಪತ್ನಿಗೆ ಅಧ್ಯಕ್ಷ ಸ್ಥಾನ ಕೊಡಿಸುವಂತೆಯೂ ಚರ್ಚೆ ನಡೆಸಲಾಯಿತು.
ನೊಂದ ಕುಟುಂಬದ ಜೊತೆಗೆ ನಮ್ಮ ಸಮಾಜ ಬೆನ್ನೆಲುಬಾಗಿ ನಿಂತಿದ್ದು ಸಮಾಜದ ವತಿಯಿಂದ ಒಂದು ಲಕ್ಷ ರೂಪಾಯಿ ನಗದು ನೆರವು ನೀಡಿರುವ ತಿಳಿಸಿ ಒಂದು ಲಕ್ಷ ನಗದು ಹಣವನ್ನು ಮೃತರ ಪತ್ನಿಗೆ ನೀಡಲಾಯಿತು.
ಸಭೆಯ ಬಳಿಕ ಸಮಾಜದ ಮುಖಂಡರಾದ ಹೆಮ್ಮರಗಾಲ ಸೋಮಣ್ಣ ಹಾಗೂ ಮೂಗ ಶೆಟ್ಟಿ ಹಾಗೂ ಮೃತನ ಪತ್ನಿ ಸೌಭಾಗ್ಯ ಮಾತನಾಡಿ ಸಭೆಯಲ್ಲಿ ಚರ್ಚಿಸಲಾದ ವಿಷಯಗಳ ಬಗ್ಗೆ ವಿವರಿಸಿದರು.
ಉಪ್ಪಾರ ಸಮಾಜದ ತಾಲೂಕಿನ ವಿವಿಧ ರಾಜಕೀಯ ಪಕ್ಷಗಳ ಎಲ್ಲಾ ಮುಖಂಡರು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು