6:44 AM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ಕೊಲೆ ಪ್ರಕರಣ: ಉಪ್ಪಾರ ಸಮಾಜದಿಂದ ವಿಶೇಷ ಸಭೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

26/10/2024, 22:44

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ದೇವರಸನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಸೌಭಾಗ್ಯ ಅವರ ಪತಿ ನಂಜುಂಡಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತಾಲೂಕು ಉಪ್ಪಾರ ಸಮಾಜದ ವತಿಯಿಂದ ವಿಶೇಷ ಸಭೆ ನಡೆಯಿತು.


ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಮುಂಭಾಗದ ಉಪ್ಪಾರ ಜನಾಂಗದ ಛತ್ರದಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ತಾಲೂಕಿನ ಎಲ್ಲಾ ಗ್ರಾಮಗಳಲ್ಲಿನ ಉಪ್ಪಾರ ಜನಾಂಗದ ಮುಖಂಡರು ಪಕ್ಷಾತೀತವಾಗಿ ಸಭೆಯಲ್ಲಿ ಭಾಗವಹಿಸಿದ್ದರು. ಮೃತರ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಲೆ ಕೇಸಿನ ಬಗ್ಗೆ ಚರ್ಚೆ ಸೇರಿದಂತೆ ಈ ಕೇಸಿನಲ್ಲಿ ಸಮಾಜದ ಮುಖಂಡರು ಸೇರಿದಂತೆ ಯಾರೇ ಭಾಗಿಯಾಗಿದ್ದರು ಅವರ ವಿರುದ್ಧವು ಪೊಲೀಸರು ಸೂಕ್ತ ತನಿಖೆ ನಡೆಸಿ ಅವರನ್ನು ಬಂಧಿಸುವಂತೆ, ಮೃತರ ಕುಟುಂಬಕ್ಕೆ ಸಮಾಜದ ವತಿಯಿಂದ ಹಾಗೂ ಸರ್ಕಾರದಿಂದಲೂ ಆರ್ಥಿಕ ನೆರವು ಕೊಡಿಸುವಂತೆಯೂ ಅಲ್ಲದೆ ಮೃತರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಅವರ ಪತ್ನಿಗೆ ಅಧ್ಯಕ್ಷ ಸ್ಥಾನ ಕೊಡಿಸುವಂತೆಯೂ ಚರ್ಚೆ ನಡೆಸಲಾಯಿತು.
ನೊಂದ ಕುಟುಂಬದ ಜೊತೆಗೆ ನಮ್ಮ ಸಮಾಜ ಬೆನ್ನೆಲುಬಾಗಿ ನಿಂತಿದ್ದು ಸಮಾಜದ ವತಿಯಿಂದ ಒಂದು ಲಕ್ಷ ರೂಪಾಯಿ ನಗದು ನೆರವು ನೀಡಿರುವ ತಿಳಿಸಿ ಒಂದು ಲಕ್ಷ ನಗದು ಹಣವನ್ನು ಮೃತರ ಪತ್ನಿಗೆ ನೀಡಲಾಯಿತು.
ಸಭೆಯ ಬಳಿಕ ಸಮಾಜದ ಮುಖಂಡರಾದ ಹೆಮ್ಮರಗಾಲ ಸೋಮಣ್ಣ ಹಾಗೂ ಮೂಗ ಶೆಟ್ಟಿ ಹಾಗೂ ಮೃತನ ಪತ್ನಿ ಸೌಭಾಗ್ಯ ಮಾತನಾಡಿ ಸಭೆಯಲ್ಲಿ ಚರ್ಚಿಸಲಾದ ವಿಷಯಗಳ ಬಗ್ಗೆ ವಿವರಿಸಿದರು.
ಉಪ್ಪಾರ ಸಮಾಜದ ತಾಲೂಕಿನ ವಿವಿಧ ರಾಜಕೀಯ ಪಕ್ಷಗಳ ಎಲ್ಲಾ ಮುಖಂಡರು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು