12:34 PM Friday19 - December 2025
ಬ್ರೇಕಿಂಗ್ ನ್ಯೂಸ್
ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ

ಇತ್ತೀಚಿನ ಸುದ್ದಿ

ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ಕೊಲೆ ಪ್ರಕರಣ: ಉಪ್ಪಾರ ಸಮಾಜದಿಂದ ವಿಶೇಷ ಸಭೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

26/10/2024, 22:44

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ದೇವರಸನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಸೌಭಾಗ್ಯ ಅವರ ಪತಿ ನಂಜುಂಡಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತಾಲೂಕು ಉಪ್ಪಾರ ಸಮಾಜದ ವತಿಯಿಂದ ವಿಶೇಷ ಸಭೆ ನಡೆಯಿತು.


ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಮುಂಭಾಗದ ಉಪ್ಪಾರ ಜನಾಂಗದ ಛತ್ರದಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ತಾಲೂಕಿನ ಎಲ್ಲಾ ಗ್ರಾಮಗಳಲ್ಲಿನ ಉಪ್ಪಾರ ಜನಾಂಗದ ಮುಖಂಡರು ಪಕ್ಷಾತೀತವಾಗಿ ಸಭೆಯಲ್ಲಿ ಭಾಗವಹಿಸಿದ್ದರು. ಮೃತರ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಲೆ ಕೇಸಿನ ಬಗ್ಗೆ ಚರ್ಚೆ ಸೇರಿದಂತೆ ಈ ಕೇಸಿನಲ್ಲಿ ಸಮಾಜದ ಮುಖಂಡರು ಸೇರಿದಂತೆ ಯಾರೇ ಭಾಗಿಯಾಗಿದ್ದರು ಅವರ ವಿರುದ್ಧವು ಪೊಲೀಸರು ಸೂಕ್ತ ತನಿಖೆ ನಡೆಸಿ ಅವರನ್ನು ಬಂಧಿಸುವಂತೆ, ಮೃತರ ಕುಟುಂಬಕ್ಕೆ ಸಮಾಜದ ವತಿಯಿಂದ ಹಾಗೂ ಸರ್ಕಾರದಿಂದಲೂ ಆರ್ಥಿಕ ನೆರವು ಕೊಡಿಸುವಂತೆಯೂ ಅಲ್ಲದೆ ಮೃತರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಅವರ ಪತ್ನಿಗೆ ಅಧ್ಯಕ್ಷ ಸ್ಥಾನ ಕೊಡಿಸುವಂತೆಯೂ ಚರ್ಚೆ ನಡೆಸಲಾಯಿತು.
ನೊಂದ ಕುಟುಂಬದ ಜೊತೆಗೆ ನಮ್ಮ ಸಮಾಜ ಬೆನ್ನೆಲುಬಾಗಿ ನಿಂತಿದ್ದು ಸಮಾಜದ ವತಿಯಿಂದ ಒಂದು ಲಕ್ಷ ರೂಪಾಯಿ ನಗದು ನೆರವು ನೀಡಿರುವ ತಿಳಿಸಿ ಒಂದು ಲಕ್ಷ ನಗದು ಹಣವನ್ನು ಮೃತರ ಪತ್ನಿಗೆ ನೀಡಲಾಯಿತು.
ಸಭೆಯ ಬಳಿಕ ಸಮಾಜದ ಮುಖಂಡರಾದ ಹೆಮ್ಮರಗಾಲ ಸೋಮಣ್ಣ ಹಾಗೂ ಮೂಗ ಶೆಟ್ಟಿ ಹಾಗೂ ಮೃತನ ಪತ್ನಿ ಸೌಭಾಗ್ಯ ಮಾತನಾಡಿ ಸಭೆಯಲ್ಲಿ ಚರ್ಚಿಸಲಾದ ವಿಷಯಗಳ ಬಗ್ಗೆ ವಿವರಿಸಿದರು.
ಉಪ್ಪಾರ ಸಮಾಜದ ತಾಲೂಕಿನ ವಿವಿಧ ರಾಜಕೀಯ ಪಕ್ಷಗಳ ಎಲ್ಲಾ ಮುಖಂಡರು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು