10:21 PM Monday6 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ಕೊಲೆ ಪ್ರಕರಣ: ಉಪ್ಪಾರ ಸಮಾಜದಿಂದ ವಿಶೇಷ ಸಭೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

26/10/2024, 22:44

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ದೇವರಸನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಸೌಭಾಗ್ಯ ಅವರ ಪತಿ ನಂಜುಂಡಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತಾಲೂಕು ಉಪ್ಪಾರ ಸಮಾಜದ ವತಿಯಿಂದ ವಿಶೇಷ ಸಭೆ ನಡೆಯಿತು.


ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಮುಂಭಾಗದ ಉಪ್ಪಾರ ಜನಾಂಗದ ಛತ್ರದಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ತಾಲೂಕಿನ ಎಲ್ಲಾ ಗ್ರಾಮಗಳಲ್ಲಿನ ಉಪ್ಪಾರ ಜನಾಂಗದ ಮುಖಂಡರು ಪಕ್ಷಾತೀತವಾಗಿ ಸಭೆಯಲ್ಲಿ ಭಾಗವಹಿಸಿದ್ದರು. ಮೃತರ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಲೆ ಕೇಸಿನ ಬಗ್ಗೆ ಚರ್ಚೆ ಸೇರಿದಂತೆ ಈ ಕೇಸಿನಲ್ಲಿ ಸಮಾಜದ ಮುಖಂಡರು ಸೇರಿದಂತೆ ಯಾರೇ ಭಾಗಿಯಾಗಿದ್ದರು ಅವರ ವಿರುದ್ಧವು ಪೊಲೀಸರು ಸೂಕ್ತ ತನಿಖೆ ನಡೆಸಿ ಅವರನ್ನು ಬಂಧಿಸುವಂತೆ, ಮೃತರ ಕುಟುಂಬಕ್ಕೆ ಸಮಾಜದ ವತಿಯಿಂದ ಹಾಗೂ ಸರ್ಕಾರದಿಂದಲೂ ಆರ್ಥಿಕ ನೆರವು ಕೊಡಿಸುವಂತೆಯೂ ಅಲ್ಲದೆ ಮೃತರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಅವರ ಪತ್ನಿಗೆ ಅಧ್ಯಕ್ಷ ಸ್ಥಾನ ಕೊಡಿಸುವಂತೆಯೂ ಚರ್ಚೆ ನಡೆಸಲಾಯಿತು.
ನೊಂದ ಕುಟುಂಬದ ಜೊತೆಗೆ ನಮ್ಮ ಸಮಾಜ ಬೆನ್ನೆಲುಬಾಗಿ ನಿಂತಿದ್ದು ಸಮಾಜದ ವತಿಯಿಂದ ಒಂದು ಲಕ್ಷ ರೂಪಾಯಿ ನಗದು ನೆರವು ನೀಡಿರುವ ತಿಳಿಸಿ ಒಂದು ಲಕ್ಷ ನಗದು ಹಣವನ್ನು ಮೃತರ ಪತ್ನಿಗೆ ನೀಡಲಾಯಿತು.
ಸಭೆಯ ಬಳಿಕ ಸಮಾಜದ ಮುಖಂಡರಾದ ಹೆಮ್ಮರಗಾಲ ಸೋಮಣ್ಣ ಹಾಗೂ ಮೂಗ ಶೆಟ್ಟಿ ಹಾಗೂ ಮೃತನ ಪತ್ನಿ ಸೌಭಾಗ್ಯ ಮಾತನಾಡಿ ಸಭೆಯಲ್ಲಿ ಚರ್ಚಿಸಲಾದ ವಿಷಯಗಳ ಬಗ್ಗೆ ವಿವರಿಸಿದರು.
ಉಪ್ಪಾರ ಸಮಾಜದ ತಾಲೂಕಿನ ವಿವಿಧ ರಾಜಕೀಯ ಪಕ್ಷಗಳ ಎಲ್ಲಾ ಮುಖಂಡರು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು