2:33 AM Monday27 - July 2026
ಬ್ರೇಕಿಂಗ್ ನ್ಯೂಸ್
Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ…

ಇತ್ತೀಚಿನ ಸುದ್ದಿ

ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ಕೊಲೆ ಪ್ರಕರಣ: ಉಪ್ಪಾರ ಸಮಾಜದಿಂದ ವಿಶೇಷ ಸಭೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

26/10/2024, 22:44

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ದೇವರಸನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಸೌಭಾಗ್ಯ ಅವರ ಪತಿ ನಂಜುಂಡಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತಾಲೂಕು ಉಪ್ಪಾರ ಸಮಾಜದ ವತಿಯಿಂದ ವಿಶೇಷ ಸಭೆ ನಡೆಯಿತು.


ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಮುಂಭಾಗದ ಉಪ್ಪಾರ ಜನಾಂಗದ ಛತ್ರದಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ತಾಲೂಕಿನ ಎಲ್ಲಾ ಗ್ರಾಮಗಳಲ್ಲಿನ ಉಪ್ಪಾರ ಜನಾಂಗದ ಮುಖಂಡರು ಪಕ್ಷಾತೀತವಾಗಿ ಸಭೆಯಲ್ಲಿ ಭಾಗವಹಿಸಿದ್ದರು. ಮೃತರ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಲೆ ಕೇಸಿನ ಬಗ್ಗೆ ಚರ್ಚೆ ಸೇರಿದಂತೆ ಈ ಕೇಸಿನಲ್ಲಿ ಸಮಾಜದ ಮುಖಂಡರು ಸೇರಿದಂತೆ ಯಾರೇ ಭಾಗಿಯಾಗಿದ್ದರು ಅವರ ವಿರುದ್ಧವು ಪೊಲೀಸರು ಸೂಕ್ತ ತನಿಖೆ ನಡೆಸಿ ಅವರನ್ನು ಬಂಧಿಸುವಂತೆ, ಮೃತರ ಕುಟುಂಬಕ್ಕೆ ಸಮಾಜದ ವತಿಯಿಂದ ಹಾಗೂ ಸರ್ಕಾರದಿಂದಲೂ ಆರ್ಥಿಕ ನೆರವು ಕೊಡಿಸುವಂತೆಯೂ ಅಲ್ಲದೆ ಮೃತರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಅವರ ಪತ್ನಿಗೆ ಅಧ್ಯಕ್ಷ ಸ್ಥಾನ ಕೊಡಿಸುವಂತೆಯೂ ಚರ್ಚೆ ನಡೆಸಲಾಯಿತು.
ನೊಂದ ಕುಟುಂಬದ ಜೊತೆಗೆ ನಮ್ಮ ಸಮಾಜ ಬೆನ್ನೆಲುಬಾಗಿ ನಿಂತಿದ್ದು ಸಮಾಜದ ವತಿಯಿಂದ ಒಂದು ಲಕ್ಷ ರೂಪಾಯಿ ನಗದು ನೆರವು ನೀಡಿರುವ ತಿಳಿಸಿ ಒಂದು ಲಕ್ಷ ನಗದು ಹಣವನ್ನು ಮೃತರ ಪತ್ನಿಗೆ ನೀಡಲಾಯಿತು.
ಸಭೆಯ ಬಳಿಕ ಸಮಾಜದ ಮುಖಂಡರಾದ ಹೆಮ್ಮರಗಾಲ ಸೋಮಣ್ಣ ಹಾಗೂ ಮೂಗ ಶೆಟ್ಟಿ ಹಾಗೂ ಮೃತನ ಪತ್ನಿ ಸೌಭಾಗ್ಯ ಮಾತನಾಡಿ ಸಭೆಯಲ್ಲಿ ಚರ್ಚಿಸಲಾದ ವಿಷಯಗಳ ಬಗ್ಗೆ ವಿವರಿಸಿದರು.
ಉಪ್ಪಾರ ಸಮಾಜದ ತಾಲೂಕಿನ ವಿವಿಧ ರಾಜಕೀಯ ಪಕ್ಷಗಳ ಎಲ್ಲಾ ಮುಖಂಡರು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು