4:52 PM Friday2 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ಕೊಲೆ ಪ್ರಕರಣ: ಉಪ್ಪಾರ ಸಮಾಜದಿಂದ ವಿಶೇಷ ಸಭೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

26/10/2024, 22:44

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ದೇವರಸನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಸೌಭಾಗ್ಯ ಅವರ ಪತಿ ನಂಜುಂಡಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತಾಲೂಕು ಉಪ್ಪಾರ ಸಮಾಜದ ವತಿಯಿಂದ ವಿಶೇಷ ಸಭೆ ನಡೆಯಿತು.


ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಮುಂಭಾಗದ ಉಪ್ಪಾರ ಜನಾಂಗದ ಛತ್ರದಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ತಾಲೂಕಿನ ಎಲ್ಲಾ ಗ್ರಾಮಗಳಲ್ಲಿನ ಉಪ್ಪಾರ ಜನಾಂಗದ ಮುಖಂಡರು ಪಕ್ಷಾತೀತವಾಗಿ ಸಭೆಯಲ್ಲಿ ಭಾಗವಹಿಸಿದ್ದರು. ಮೃತರ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಲೆ ಕೇಸಿನ ಬಗ್ಗೆ ಚರ್ಚೆ ಸೇರಿದಂತೆ ಈ ಕೇಸಿನಲ್ಲಿ ಸಮಾಜದ ಮುಖಂಡರು ಸೇರಿದಂತೆ ಯಾರೇ ಭಾಗಿಯಾಗಿದ್ದರು ಅವರ ವಿರುದ್ಧವು ಪೊಲೀಸರು ಸೂಕ್ತ ತನಿಖೆ ನಡೆಸಿ ಅವರನ್ನು ಬಂಧಿಸುವಂತೆ, ಮೃತರ ಕುಟುಂಬಕ್ಕೆ ಸಮಾಜದ ವತಿಯಿಂದ ಹಾಗೂ ಸರ್ಕಾರದಿಂದಲೂ ಆರ್ಥಿಕ ನೆರವು ಕೊಡಿಸುವಂತೆಯೂ ಅಲ್ಲದೆ ಮೃತರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಅವರ ಪತ್ನಿಗೆ ಅಧ್ಯಕ್ಷ ಸ್ಥಾನ ಕೊಡಿಸುವಂತೆಯೂ ಚರ್ಚೆ ನಡೆಸಲಾಯಿತು.
ನೊಂದ ಕುಟುಂಬದ ಜೊತೆಗೆ ನಮ್ಮ ಸಮಾಜ ಬೆನ್ನೆಲುಬಾಗಿ ನಿಂತಿದ್ದು ಸಮಾಜದ ವತಿಯಿಂದ ಒಂದು ಲಕ್ಷ ರೂಪಾಯಿ ನಗದು ನೆರವು ನೀಡಿರುವ ತಿಳಿಸಿ ಒಂದು ಲಕ್ಷ ನಗದು ಹಣವನ್ನು ಮೃತರ ಪತ್ನಿಗೆ ನೀಡಲಾಯಿತು.
ಸಭೆಯ ಬಳಿಕ ಸಮಾಜದ ಮುಖಂಡರಾದ ಹೆಮ್ಮರಗಾಲ ಸೋಮಣ್ಣ ಹಾಗೂ ಮೂಗ ಶೆಟ್ಟಿ ಹಾಗೂ ಮೃತನ ಪತ್ನಿ ಸೌಭಾಗ್ಯ ಮಾತನಾಡಿ ಸಭೆಯಲ್ಲಿ ಚರ್ಚಿಸಲಾದ ವಿಷಯಗಳ ಬಗ್ಗೆ ವಿವರಿಸಿದರು.
ಉಪ್ಪಾರ ಸಮಾಜದ ತಾಲೂಕಿನ ವಿವಿಧ ರಾಜಕೀಯ ಪಕ್ಷಗಳ ಎಲ್ಲಾ ಮುಖಂಡರು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು