11:58 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ಕೊಲೆ ಪ್ರಕರಣ: ಉಪ್ಪಾರ ಸಮಾಜದಿಂದ ವಿಶೇಷ ಸಭೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

26/10/2024, 22:44

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ದೇವರಸನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಸೌಭಾಗ್ಯ ಅವರ ಪತಿ ನಂಜುಂಡಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತಾಲೂಕು ಉಪ್ಪಾರ ಸಮಾಜದ ವತಿಯಿಂದ ವಿಶೇಷ ಸಭೆ ನಡೆಯಿತು.


ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಮುಂಭಾಗದ ಉಪ್ಪಾರ ಜನಾಂಗದ ಛತ್ರದಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ತಾಲೂಕಿನ ಎಲ್ಲಾ ಗ್ರಾಮಗಳಲ್ಲಿನ ಉಪ್ಪಾರ ಜನಾಂಗದ ಮುಖಂಡರು ಪಕ್ಷಾತೀತವಾಗಿ ಸಭೆಯಲ್ಲಿ ಭಾಗವಹಿಸಿದ್ದರು. ಮೃತರ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಲೆ ಕೇಸಿನ ಬಗ್ಗೆ ಚರ್ಚೆ ಸೇರಿದಂತೆ ಈ ಕೇಸಿನಲ್ಲಿ ಸಮಾಜದ ಮುಖಂಡರು ಸೇರಿದಂತೆ ಯಾರೇ ಭಾಗಿಯಾಗಿದ್ದರು ಅವರ ವಿರುದ್ಧವು ಪೊಲೀಸರು ಸೂಕ್ತ ತನಿಖೆ ನಡೆಸಿ ಅವರನ್ನು ಬಂಧಿಸುವಂತೆ, ಮೃತರ ಕುಟುಂಬಕ್ಕೆ ಸಮಾಜದ ವತಿಯಿಂದ ಹಾಗೂ ಸರ್ಕಾರದಿಂದಲೂ ಆರ್ಥಿಕ ನೆರವು ಕೊಡಿಸುವಂತೆಯೂ ಅಲ್ಲದೆ ಮೃತರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಅವರ ಪತ್ನಿಗೆ ಅಧ್ಯಕ್ಷ ಸ್ಥಾನ ಕೊಡಿಸುವಂತೆಯೂ ಚರ್ಚೆ ನಡೆಸಲಾಯಿತು.
ನೊಂದ ಕುಟುಂಬದ ಜೊತೆಗೆ ನಮ್ಮ ಸಮಾಜ ಬೆನ್ನೆಲುಬಾಗಿ ನಿಂತಿದ್ದು ಸಮಾಜದ ವತಿಯಿಂದ ಒಂದು ಲಕ್ಷ ರೂಪಾಯಿ ನಗದು ನೆರವು ನೀಡಿರುವ ತಿಳಿಸಿ ಒಂದು ಲಕ್ಷ ನಗದು ಹಣವನ್ನು ಮೃತರ ಪತ್ನಿಗೆ ನೀಡಲಾಯಿತು.
ಸಭೆಯ ಬಳಿಕ ಸಮಾಜದ ಮುಖಂಡರಾದ ಹೆಮ್ಮರಗಾಲ ಸೋಮಣ್ಣ ಹಾಗೂ ಮೂಗ ಶೆಟ್ಟಿ ಹಾಗೂ ಮೃತನ ಪತ್ನಿ ಸೌಭಾಗ್ಯ ಮಾತನಾಡಿ ಸಭೆಯಲ್ಲಿ ಚರ್ಚಿಸಲಾದ ವಿಷಯಗಳ ಬಗ್ಗೆ ವಿವರಿಸಿದರು.
ಉಪ್ಪಾರ ಸಮಾಜದ ತಾಲೂಕಿನ ವಿವಿಧ ರಾಜಕೀಯ ಪಕ್ಷಗಳ ಎಲ್ಲಾ ಮುಖಂಡರು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು