4:56 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ಕೊಲೆ ಪ್ರಕರಣ: ಉಪ್ಪಾರ ಸಮಾಜದಿಂದ ವಿಶೇಷ ಸಭೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

26/10/2024, 22:44

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ದೇವರಸನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಸೌಭಾಗ್ಯ ಅವರ ಪತಿ ನಂಜುಂಡಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತಾಲೂಕು ಉಪ್ಪಾರ ಸಮಾಜದ ವತಿಯಿಂದ ವಿಶೇಷ ಸಭೆ ನಡೆಯಿತು.


ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಮುಂಭಾಗದ ಉಪ್ಪಾರ ಜನಾಂಗದ ಛತ್ರದಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ತಾಲೂಕಿನ ಎಲ್ಲಾ ಗ್ರಾಮಗಳಲ್ಲಿನ ಉಪ್ಪಾರ ಜನಾಂಗದ ಮುಖಂಡರು ಪಕ್ಷಾತೀತವಾಗಿ ಸಭೆಯಲ್ಲಿ ಭಾಗವಹಿಸಿದ್ದರು. ಮೃತರ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಲೆ ಕೇಸಿನ ಬಗ್ಗೆ ಚರ್ಚೆ ಸೇರಿದಂತೆ ಈ ಕೇಸಿನಲ್ಲಿ ಸಮಾಜದ ಮುಖಂಡರು ಸೇರಿದಂತೆ ಯಾರೇ ಭಾಗಿಯಾಗಿದ್ದರು ಅವರ ವಿರುದ್ಧವು ಪೊಲೀಸರು ಸೂಕ್ತ ತನಿಖೆ ನಡೆಸಿ ಅವರನ್ನು ಬಂಧಿಸುವಂತೆ, ಮೃತರ ಕುಟುಂಬಕ್ಕೆ ಸಮಾಜದ ವತಿಯಿಂದ ಹಾಗೂ ಸರ್ಕಾರದಿಂದಲೂ ಆರ್ಥಿಕ ನೆರವು ಕೊಡಿಸುವಂತೆಯೂ ಅಲ್ಲದೆ ಮೃತರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಅವರ ಪತ್ನಿಗೆ ಅಧ್ಯಕ್ಷ ಸ್ಥಾನ ಕೊಡಿಸುವಂತೆಯೂ ಚರ್ಚೆ ನಡೆಸಲಾಯಿತು.
ನೊಂದ ಕುಟುಂಬದ ಜೊತೆಗೆ ನಮ್ಮ ಸಮಾಜ ಬೆನ್ನೆಲುಬಾಗಿ ನಿಂತಿದ್ದು ಸಮಾಜದ ವತಿಯಿಂದ ಒಂದು ಲಕ್ಷ ರೂಪಾಯಿ ನಗದು ನೆರವು ನೀಡಿರುವ ತಿಳಿಸಿ ಒಂದು ಲಕ್ಷ ನಗದು ಹಣವನ್ನು ಮೃತರ ಪತ್ನಿಗೆ ನೀಡಲಾಯಿತು.
ಸಭೆಯ ಬಳಿಕ ಸಮಾಜದ ಮುಖಂಡರಾದ ಹೆಮ್ಮರಗಾಲ ಸೋಮಣ್ಣ ಹಾಗೂ ಮೂಗ ಶೆಟ್ಟಿ ಹಾಗೂ ಮೃತನ ಪತ್ನಿ ಸೌಭಾಗ್ಯ ಮಾತನಾಡಿ ಸಭೆಯಲ್ಲಿ ಚರ್ಚಿಸಲಾದ ವಿಷಯಗಳ ಬಗ್ಗೆ ವಿವರಿಸಿದರು.
ಉಪ್ಪಾರ ಸಮಾಜದ ತಾಲೂಕಿನ ವಿವಿಧ ರಾಜಕೀಯ ಪಕ್ಷಗಳ ಎಲ್ಲಾ ಮುಖಂಡರು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು