10:41 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ಕೊಲೆ ಪ್ರಕರಣ: ಉಪ್ಪಾರ ಸಮಾಜದಿಂದ ವಿಶೇಷ ಸಭೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

26/10/2024, 22:44

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ದೇವರಸನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಸೌಭಾಗ್ಯ ಅವರ ಪತಿ ನಂಜುಂಡಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತಾಲೂಕು ಉಪ್ಪಾರ ಸಮಾಜದ ವತಿಯಿಂದ ವಿಶೇಷ ಸಭೆ ನಡೆಯಿತು.


ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಮುಂಭಾಗದ ಉಪ್ಪಾರ ಜನಾಂಗದ ಛತ್ರದಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ತಾಲೂಕಿನ ಎಲ್ಲಾ ಗ್ರಾಮಗಳಲ್ಲಿನ ಉಪ್ಪಾರ ಜನಾಂಗದ ಮುಖಂಡರು ಪಕ್ಷಾತೀತವಾಗಿ ಸಭೆಯಲ್ಲಿ ಭಾಗವಹಿಸಿದ್ದರು. ಮೃತರ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಲೆ ಕೇಸಿನ ಬಗ್ಗೆ ಚರ್ಚೆ ಸೇರಿದಂತೆ ಈ ಕೇಸಿನಲ್ಲಿ ಸಮಾಜದ ಮುಖಂಡರು ಸೇರಿದಂತೆ ಯಾರೇ ಭಾಗಿಯಾಗಿದ್ದರು ಅವರ ವಿರುದ್ಧವು ಪೊಲೀಸರು ಸೂಕ್ತ ತನಿಖೆ ನಡೆಸಿ ಅವರನ್ನು ಬಂಧಿಸುವಂತೆ, ಮೃತರ ಕುಟುಂಬಕ್ಕೆ ಸಮಾಜದ ವತಿಯಿಂದ ಹಾಗೂ ಸರ್ಕಾರದಿಂದಲೂ ಆರ್ಥಿಕ ನೆರವು ಕೊಡಿಸುವಂತೆಯೂ ಅಲ್ಲದೆ ಮೃತರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಅವರ ಪತ್ನಿಗೆ ಅಧ್ಯಕ್ಷ ಸ್ಥಾನ ಕೊಡಿಸುವಂತೆಯೂ ಚರ್ಚೆ ನಡೆಸಲಾಯಿತು.
ನೊಂದ ಕುಟುಂಬದ ಜೊತೆಗೆ ನಮ್ಮ ಸಮಾಜ ಬೆನ್ನೆಲುಬಾಗಿ ನಿಂತಿದ್ದು ಸಮಾಜದ ವತಿಯಿಂದ ಒಂದು ಲಕ್ಷ ರೂಪಾಯಿ ನಗದು ನೆರವು ನೀಡಿರುವ ತಿಳಿಸಿ ಒಂದು ಲಕ್ಷ ನಗದು ಹಣವನ್ನು ಮೃತರ ಪತ್ನಿಗೆ ನೀಡಲಾಯಿತು.
ಸಭೆಯ ಬಳಿಕ ಸಮಾಜದ ಮುಖಂಡರಾದ ಹೆಮ್ಮರಗಾಲ ಸೋಮಣ್ಣ ಹಾಗೂ ಮೂಗ ಶೆಟ್ಟಿ ಹಾಗೂ ಮೃತನ ಪತ್ನಿ ಸೌಭಾಗ್ಯ ಮಾತನಾಡಿ ಸಭೆಯಲ್ಲಿ ಚರ್ಚಿಸಲಾದ ವಿಷಯಗಳ ಬಗ್ಗೆ ವಿವರಿಸಿದರು.
ಉಪ್ಪಾರ ಸಮಾಜದ ತಾಲೂಕಿನ ವಿವಿಧ ರಾಜಕೀಯ ಪಕ್ಷಗಳ ಎಲ್ಲಾ ಮುಖಂಡರು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು