3:53 AM Monday22 - December 2025
ಬ್ರೇಕಿಂಗ್ ನ್ಯೂಸ್
ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ

ಇತ್ತೀಚಿನ ಸುದ್ದಿ

ಗ್ರಾಪಂ ಸದಸ್ಯೆ ಪತಿ ಕೊಲೆ ಪ್ರಕರಣ: ಮತ್ತಿಬ್ಬರು ಪ್ರಮುಖ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

05/11/2024, 17:13

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಿಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ತಾಲೂಕು ಉಪ್ಪಾರ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದ ವಿಚಾರವಾಗಿ ತಿಂಗಳ ಹಿಂದೆ ಕೆಬ್ಬೇಪುರ ಗ್ರಾಮದ ದೇವರಸನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಸೌಭಾಗ್ಯ ಎಂಬವರ ಪತಿ ನಂಜುಂಡಸ್ವಾಮಿ ಎಂಬುವರನ್ನು ಅಧಿಕಾರದ ದುರಾಸೆಗೆ ಫ್ರೀ ಪ್ಲಾನ್ ಮಾಡಿ ಮರ್ಡರ್ ಮಾಡಲಾಗಿತ್ತು.


ಈಗಾಗಲೇ ಕೊಲೆಗೆ ಸಂಬಂಧಿಸಿದಂತೆ ಐದು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಕೊಲೆ ಕೇಸಿಗೆ ಸಂಬಂಧಿಸಿದಂತೆ ಹಾಗೂ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಿದ ನಮ್ಮ ಸಮಾಜದವರೇ ಆದ ಮತ್ತಿಬ್ಬರು ಪ್ರಮುಖ ಆರೋಪಿಗಳಾದ ಬಾಲಚಂದ್ರ ಮತ್ತು ಗೋಳೂರು ಮಂಜು ಎಂಬವರನ್ನು ಬಂಧಿಸುವಂತೆ ಪ್ರತಿಭಟನಾಕಾರರು ಮತ್ತು ಕುಟುಂಬಸ್ಥರು ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆಗೆ ಒತ್ತಾಯಿಸಿದ್ದಾರೆ.
ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ಜಮಾಯಿಸಿದ ಉಪ್ಪಾರ ಸಂಘದ ಪದಾಧಿಕಾರಿಗಳು ಮತ್ತು ಮುಖಂಡರುಗಳು ದಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮುಖಂಡರು ಹಾಗೂ ಮೃತನ ಪತ್ನಿ ಸೌಭಾಗ್ಯ ಮಾತನಾಡಿ ಕೂಡಲೇ ಮಂಜು ಮತ್ತು ಬಾಲು ಅವರನ್ನು ಬಂಧಿಸಬೇಕು. ಬಂಧಿತ ವ್ಯಕ್ತಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಮೃತನ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಬೇಕು. ಇಲ್ಲವಾದಲ್ಲಿ ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲೂ ಇನ್ನೂ ಹೆಚ್ಚಿನ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು.
ತಹಶೀಲ್ದಾರ್ ಶಿವಕುಮಾರ್ ಕಾಸನೂರು ಹಾಗೂ ಡಿ ವೈ ಎಸ್ ಪಿ ರಘು ರವರಿಗೆ ಮನವಿಪತ್ರ ನೀಡುವುದರ ಮೂಲಕ ಉಳಿದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಲು ಗಡುವು ನೀಡಿ ಎಚ್ಚರಿಸಿದರು. ಅಲ್ಲದೆ
ಸೌಭಾಗ್ಯ ಅವರಿಗೆ ಅಧ್ಯಕ್ಷ ಸ್ಥಾನ ಕಲ್ಪಿಸಿ ಕೊಡಬೇಕು ಎಂದು ಅಗ್ರಹಿಸಿದರು
ಪ್ರತಿಭಟನೆಯಲ್ಲಿ ತಾಲ್ಲೂಕು ಉಪಾರರ ಸಂಘದ ಮುಖಂಡರುಗಳಾದ ಮೂಗ ಶೆಟ್ಟಿ, ಸೋಮಣ್ಣ, ಕೆ ಬಿ
ಸ್ವಾಮಿ, ಕರಳಪುರ ನಾಗರಾಜ್, ಮಹದೇವ್, ಮುದ್ದು ಮಾದ ಶೆಟ್ಟಿ, ಲತಾ ಸಿದ್ದಶೆಟ್ಟಿ ಸಿದ್ದರಾಜು, ಶಿವಣ್ಣ, ಸೋಮು ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಉಪ್ಪಾರ ಸಮುದಾಯದ ನೂರಾರು ಮುಖಂಡರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು