3:48 PM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಗ್ರಾಮೀಣ ಜನರ ಆರೋಗ್ಯದ ಹಿತದೃಷ್ಟಿಯಿಂದ ಕಡಿಮೆ ವೆಚ್ಚದಲ್ಲಿ ಆಧುನಿಕ ಆರೋಗ್ಯ ಸೌಲಭ್ಯ: ಡಾ.ಎಂ.ಎಂ. ಶೇಖರ್

23/12/2022, 19:58

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info. reporterkarnataka@gmail.com

ಗ್ರಾಮಾಂತರ ಪ್ರದೇಶದಲ್ಲಿ ಬಡ ಜನರ ಆಶಾಕಿರಣವಾಗಿರುವ ಶ್ರೀ ಆದಿಚುಂಚನಗಿರಿ ಸೂಪರ್ ಹಾಸ್ಪಿಟಲ್ ನಲ್ಲಿ ವಿವಿಧ ಸೌಲಭ್ಯಗಳು ದೊರೆಯಲಿವೆ ಎಂದು ವೈದ್ಯಕೀಯ ಮಹಾವಿದ್ಯಾಲಯದ ಕುಲಪತಿ ಡಾ. ಎಂ. ಎಂ. ಶೇಖರ್ ಹೇಳಿದರು.

ಅವರು ನಾಗಮಂಗಲ ತಾಲೂಕು ಬಿಜಿ ನಗರದಲ್ಲಿರುವ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಶ್ರೀ ಆದಿಚುಂಚನಗಿರಿ ಸೂಪರ್ ಸ್ಪೆಶಾಲಿಟಿ ಹಾಸ್ಪಿಟಲ್ ಮೇಲ್ದರ್ಜೆಗೆಯಾಗಿದ್ದು ಈ ಆಸ್ಪತ್ರೆಯಲ್ಲಿನ ವಿವಿಧ ವಿಭಾಗಗಳಲ್ಲಿ ಬಡಜನರು ನಗರಗಳಲ್ಲಿ ದೊರೆಯುವ ಸೌಲಭ್ಯಗಳನ್ನು ಕಡಿಮೆ ವೆಚ್ಚದಲ್ಲಿ ಅನುಕೂಲವಾಗುವ ತಪಾಸಣಾ ಸೇವೆಗಳು ಲಭ್ಯವಿದ್ದು, ಶ್ರೀಗಳ ಬಹುದಿನದ ಕನಸು ನನಸಾಗಿರುವುದು ನಿಜಕ್ಕೂ ಸಂತೋಷವಾಗಿದೆ ಎಂದು ಹೇಳಿದರು.

ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಕಾರ್ಯನಿರ್ವಹಿಸುತ್ತಿದ್ದು ಸಾರ್ವಜನಿಕರು ಸದುಪಯೋಗಪಡಿಸಿ ಪಡೆಸಿಕೊಳ್ಳುವಂತೆ ಈ ಸಂದರ್ಭದಲ್ಲಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಡಾ. ಸಿ. ಕೆ. ಸುಬ್ಬ (ಕುಲ ಸಚಿವರು ಆದಿಚುಂಚನಗಿರಿ ವಿಶ್ವವಿದ್ಯಾನಿಲಯ) ಡಾ. ಎಂ. ಜೆ. ಶಿವರಾಂ (ಪ್ರಾಚಾರ್ಯರು ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ) ಡಾ. ಕೆ. ಎಂ. ಶಿವಕುಮಾರ್ (ಮುಖ್ಯಸ್ಥರು ಆದಿಚುಂಚನಗಿರಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ) ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿನ ವಿವಿಧ ವಿಭಾಗದ ಆರೋಗ್ಯ ತಪಾಸಣಾ ಕೇಂದ್ರಗಳ ಬಗ್ಗೆ ವಿವರವಾದ ಮಾಹಿತಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು