4:40 AM Thursday2 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ…

ಇತ್ತೀಚಿನ ಸುದ್ದಿ

ಗ್ರಾಮೀಣ ಜನರ ಸಮಸ್ಯೆ ನಿವಾರಣೆಗೆ ಮಾಧ್ಯಮ ರಂಗದ ನಿರಂತರ ಪ್ರಯತ್ನ ಇತರರಿಗೆ ಮಾದರಿ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

28/10/2024, 19:41

ಮಂಗಳೂರು(reporterkarnataka.com): ಗ್ರಾಮೀಣ ಭಾಗದ ಜನರ ಸಮಸ್ಯೆ ಗಳ ಬಗ್ಗೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದು ಪರಿಗಣಿಸಲ್ಪಟ್ಟ ಮಾಧ್ಯಮ ರಂಗದ ಪ್ರತಿನಿಧಿಗಳು ಗಮನ ಹರಿಸಿ, ನಿವಾರಣೆಗೆ ನಿರಂತರವಾಗಿ ಪ್ರಯತ್ನಿ ಸುತ್ತಿರುವುದು ಇತರರಿಗೆ ಮಾದರಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.

ಅವರು ಇಂದು ನಗರದ ಪತ್ರಿಕಾ ಭವನದಲ್ಲಿ
ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಎಂಸಿಎಫ್ ಸಂಸ್ಥೆಯ ಸಿಎಸ್ ಆರ್ ನಿಧಿಯ ಮೂಲಕ ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸೋಮವಾರ ಸಮವಸ್ತ್ರ ವಿತರಿಸಿ ಮಾತನಾಡುತ್ತಿದ್ದರು.
ಮಾಧ್ಯಗಳು ಜನರ ಸಮಸ್ಯೆ ಗಳ ಬಗ್ಗೆ ಬೆಳಕು ಚೆಲ್ಲುವುದರ ಜೊತೆ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತದ ಜೊತೆ ಅಲ್ಲಿನ ಸ್ಥತ ಜನರ ಜೊತೆ ಸೇರಿ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಗ್ರಾಮೀಣ ಭಾಗದಲ್ಲಿ ನಡೆಸುತ್ತಿರುವ ಗ್ರಾಮ ವಾಸ್ತವ್ಯದ ಮೂಲಕ ಅವರ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಿ ರುವುದು ಮತ್ತು ಆ ಸಮಸ್ಯೆ ಪರಿಹರಿಸಲು ಗ್ರಾಮದ ಜನರು ಜೊತೆ ಸೇರಿ ಮಾಡುತ್ತಿರುವ ಕೆಲಸ ತಾನು ಇತರ ಕಡೆ ನೋಡಿಲ್ಲ‌. ಇದು ಜಿಲ್ಲೆಯ ಅಭಿವೃದ್ಧಿಗೆ ಪೂರಕ ಎಂದರು.
ಇದೇ ಸಂದರ್ಭದಲ್ಲಿ ಕುತ್ಲೂರು ಗ್ರಾಮದ ಸಾಹಸ ಪ್ರವಾ ಸೋದ್ಯಮ ಸಾಕ್ಷ್ಯ ಚಿತ್ರದ ಮೂಲಕ ಪ್ರಶಸ್ತಿ ಪಡೆದ ಕುತ್ಲೂರು ಗ್ರಾಮದ ಪ್ರತಿನಿಧಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಸನ್ಮಾನಿಸಿದರು.
ಸಮಾರಂಭದ ವೇದಿಕೆಯಲ್ಲಿ ಎಂಸಿಎಫ್ ನ ಚೀಫ್ ಪ್ರೊಡಕ್ಷನ್ ಆಫೀಸರ್ ಗಿರೀಶ್ ಎಂಸಿಎಫ್ ನ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಸುತ್ತಾ,ಕುತ್ಲೂರು ಗ್ರಾಮಾಂತರ ಪ್ರದೇಶ ಸೇರಿದಂತೆ ಸಂಸ್ಥೆಯ ಸಿಎಸ್ ಆರ್ ನಿಧಿಯ ವತಿಯಿಂದ ಸುಮಾರು 350 ಮಕ್ಕಳಿಗೆ ಈ ಬಾರಿ ಸಮವಸ್ತ್ರ ನೀಡಲು ಸಂತೋಷ ಪಡುವುದಾಗಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಎಂಸಿಫ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಅವಿನಂದನ್, ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ,ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಮ
ಚಂದ್ರ ಭಟ್ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್. ಕಾರ್ಯಕ್ರಮ ನಿರೂಪಿಸಿ, ಪ್ರದಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು