11:25 PM Friday11 - April 2025
ಬ್ರೇಕಿಂಗ್ ನ್ಯೂಸ್
ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್…

ಇತ್ತೀಚಿನ ಸುದ್ದಿ

ಗ್ರಾಮೀಣ ಮಟ್ಟದ ಜನರಿಗೆ ಕಂಪ್ಯೂಟರ್ ಶಿಕ್ಷಣ: ಅಥಣಿಯಲ್ಲಿ ಪಿಎಂ ದಿಶಾ ವಿಶೇಷ ಕಾರ್ಯಕ್ರಮ

08/09/2021, 09:36

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಪಿಎಂ ದಿಶಾ ವಿಶೇಷ ಕಾರ್ಯಕ್ರಮವನ್ನು ಜಿಲ್ಲಾ ವ್ಯವಸ್ಥಾಪಕರಿಂದ ಅಥಣಿ ತಾಲೂಕು ಪಂಚಾಯತ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು.

ಗ್ರಾಮೀಣ ಮಟ್ಟದ ಜನರಿಗೆ ಕಂಪ್ಯೂಟರ್ ಶಿಕ್ಷಣ ನೀಡುವ ಕುರಿತಾದ ಯೋಜನೆ ಇದಾಗಿದ್ದು ಈಗಾಗಲೇ ಬೆಳಗಾವಿ ಜಿಲ್ಲೆಯಾದ್ಯಂತ ಸಂಪೂರ್ಣ ಉಚಿತವಾಗಿ ಕಂಪ್ಯೂಟರ್ ಶಿಕ್ಷಣವನ್ನು ನೀಡುತ್ತಾ ಬಂದಿದೆ.

ಪಿಎಂ ದಿಶಾ ದೆಹಲಿ ವಿಭಾಗದ ವ್ಯವಸ್ಥಾಪಕರು ವಿಶ್ವಂ ತ್ಯಾಗಿ ಅಥಣಿಗೆ ಭೇಟಿ ನೀಡಿ ಪಿಎಂ ದಿಶಾ ಕುರಿತಾದ ಮಾಹಿತಿಗಳನ್ನು ನೀಡಿದರು.

ಇದೇ ವೇಳೆ ಜಿಲ್ಲಾ ವ್ಯವಸ್ಥಾಪಕ ವೀರೇಶ್ ಪುರಾಣಿಕ ಮಾತನಾಡಿ, ಪಿಎಂ ದಿಶಾ ಕಾರ್ಯಕ್ರಮವು ಗ್ರಾಮೀಣ ಮಟ್ಟದ ಕಾರ್ಯಕ್ರಮವಾಗಿದ್ದು, ಇದರಿಂದ ಗ್ರಾಮೀಣ ಮಟ್ಟದಲ್ಲಿ ಬಹಳ ಜನರಿಗೆ ಅನುಕೂಲವಾಗಿದೆ. 

ಮುಂಬರುವ ದಿನಗಳಲ್ಲಿ ಸಿಎಸ್ಸಿ ಎಲ್ಲಿ ಆಧಾರ್ ಕಾರ್ಡ್ ಅಸಂಘಟಿತ ವಲಯದ ಕಾರ್ಮಿಕರ ಕಾರ್ಡ್ ಆಯುಷ್ಮಾನ್ ಭಾರತ ಅಂತಹ ನೂರಾರು ಯೋಜನೆಗಳು ಪ್ರಾರಂಭವಾಗಲಿದ್ದು ಆದಷ್ಟು ಅದರ ಅನುಕೂಲಗಳನ್ನು ಪಡೆಯ ಬೇಕೆಂದರು.

ಇದೇ ಸಂದರ್ಭದಲ್ಲಿ  ಜಿಲ್ಲಾ ವ್ಯವಸ್ಥಾಪಕ ಕಿರಣ್ ಕುಮಾರ್ ಜ್ಯೋಶಿ, ಮಲ್ಲಿಕಾರ್ಜುನ್ ಗೌರೀಶ ಲೆಂಡೇ, ಸಿಕಂದರ್, ಮುಲ್ಲಾ ನಿಜಾಮ ಮುಜಾವರ್ ಹಾಗೂ ಅಥಣಿ ಕಾಗವಾಡ ರಾಯಬಾಗ ಗೋಕಾಕ್ ಮುಂತಾದ ಕಡೆಗಳಲ್ಲಿ ಸಿಎಸ್ಸಿ ವಿಎಲ್ ಈ ಭಾಗವಹಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು