5:38 AM Sunday14 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಗ್ರಾಮೀಣ ಮಟ್ಟದ ಜನರಿಗೆ ಕಂಪ್ಯೂಟರ್ ಶಿಕ್ಷಣ: ಅಥಣಿಯಲ್ಲಿ ಪಿಎಂ ದಿಶಾ ವಿಶೇಷ ಕಾರ್ಯಕ್ರಮ

08/09/2021, 09:36

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಪಿಎಂ ದಿಶಾ ವಿಶೇಷ ಕಾರ್ಯಕ್ರಮವನ್ನು ಜಿಲ್ಲಾ ವ್ಯವಸ್ಥಾಪಕರಿಂದ ಅಥಣಿ ತಾಲೂಕು ಪಂಚಾಯತ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು.

ಗ್ರಾಮೀಣ ಮಟ್ಟದ ಜನರಿಗೆ ಕಂಪ್ಯೂಟರ್ ಶಿಕ್ಷಣ ನೀಡುವ ಕುರಿತಾದ ಯೋಜನೆ ಇದಾಗಿದ್ದು ಈಗಾಗಲೇ ಬೆಳಗಾವಿ ಜಿಲ್ಲೆಯಾದ್ಯಂತ ಸಂಪೂರ್ಣ ಉಚಿತವಾಗಿ ಕಂಪ್ಯೂಟರ್ ಶಿಕ್ಷಣವನ್ನು ನೀಡುತ್ತಾ ಬಂದಿದೆ.

ಪಿಎಂ ದಿಶಾ ದೆಹಲಿ ವಿಭಾಗದ ವ್ಯವಸ್ಥಾಪಕರು ವಿಶ್ವಂ ತ್ಯಾಗಿ ಅಥಣಿಗೆ ಭೇಟಿ ನೀಡಿ ಪಿಎಂ ದಿಶಾ ಕುರಿತಾದ ಮಾಹಿತಿಗಳನ್ನು ನೀಡಿದರು.

ಇದೇ ವೇಳೆ ಜಿಲ್ಲಾ ವ್ಯವಸ್ಥಾಪಕ ವೀರೇಶ್ ಪುರಾಣಿಕ ಮಾತನಾಡಿ, ಪಿಎಂ ದಿಶಾ ಕಾರ್ಯಕ್ರಮವು ಗ್ರಾಮೀಣ ಮಟ್ಟದ ಕಾರ್ಯಕ್ರಮವಾಗಿದ್ದು, ಇದರಿಂದ ಗ್ರಾಮೀಣ ಮಟ್ಟದಲ್ಲಿ ಬಹಳ ಜನರಿಗೆ ಅನುಕೂಲವಾಗಿದೆ. 

ಮುಂಬರುವ ದಿನಗಳಲ್ಲಿ ಸಿಎಸ್ಸಿ ಎಲ್ಲಿ ಆಧಾರ್ ಕಾರ್ಡ್ ಅಸಂಘಟಿತ ವಲಯದ ಕಾರ್ಮಿಕರ ಕಾರ್ಡ್ ಆಯುಷ್ಮಾನ್ ಭಾರತ ಅಂತಹ ನೂರಾರು ಯೋಜನೆಗಳು ಪ್ರಾರಂಭವಾಗಲಿದ್ದು ಆದಷ್ಟು ಅದರ ಅನುಕೂಲಗಳನ್ನು ಪಡೆಯ ಬೇಕೆಂದರು.

ಇದೇ ಸಂದರ್ಭದಲ್ಲಿ  ಜಿಲ್ಲಾ ವ್ಯವಸ್ಥಾಪಕ ಕಿರಣ್ ಕುಮಾರ್ ಜ್ಯೋಶಿ, ಮಲ್ಲಿಕಾರ್ಜುನ್ ಗೌರೀಶ ಲೆಂಡೇ, ಸಿಕಂದರ್, ಮುಲ್ಲಾ ನಿಜಾಮ ಮುಜಾವರ್ ಹಾಗೂ ಅಥಣಿ ಕಾಗವಾಡ ರಾಯಬಾಗ ಗೋಕಾಕ್ ಮುಂತಾದ ಕಡೆಗಳಲ್ಲಿ ಸಿಎಸ್ಸಿ ವಿಎಲ್ ಈ ಭಾಗವಹಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು