6:26 PM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಮಸ್ಕಿ ಗ್ರಾಮೀಣ ಪ್ರದೇಶದಲ್ಲೂ ಕೊರೊನಾ ಆರ್ಭಟ: ಸಾಮಾನ್ಯ ಜನಜೀವನ ತತ್ತರ: ಜೀವ ಕೈಯಲ್ಲಿ ಹಿಡಿದುಕೊಳ್ಳುವ ಸ್ಥಿತಿ!!

22/05/2021, 08:50

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ಮಸ್ಕಿ ಕ್ಷೇತ್ರ ಸೇರಿದಂತೆ ತಾಲೂಕಿನ  ಎಲ್ಲಾ ಹಳ್ಳಿ ಗ್ರಾಮೀಣ ಪ್ರದೇಶಗಳು ಮಹಾಮಾರಿ ಕೊರೊನಾಕ್ಕೆ ತತ್ತರಿಸಿದೆ.ಹೊರಗಡೆ ತಿರುಗಾಡಲು ಹೆದರಿ ಜೀವ ಅಂಗೈಯಲ್ಲಿ ಹಿಡಿದುಕೊಂಡು ಜೀವನ ಮಾಡುವ ಪರಿಸ್ಥಿತಿ ಎದುರಾಗಿದೆ. ದಿನದಿನಕ್ಕೂ ಹೆಚ್ಚುತ್ತಿರುವ ಈ ರೋಗವು ಜನಜೀವನವನ್ನು ಹಿಂಡಿ ಹಿಪ್ಪೆ ಮಾಡುವ ಪರಿಸ್ಥಿತಿ ಎದುರಾಗಿದೆ.

ಜಿಲ್ಲಾಡಳಿತ ಕೋವಿಡ್ ತಡೆಗಟ್ಟಲು ಕಠಿಣ ಲಾಕ್ ಡೌನ್ ಜಾರಿ ಮಾಡಿದ್ದರೂ ಸಹ ಮಸ್ಕಿ ಕ್ಷೇತ್ರದ ಜನತೆ ಕ್ಯಾರೆ ಅನ್ನುತ್ತಿಲ್ಲ. ಸಾಮಾಜಿಕ ಅಂತರ, ಮುಖಕ್ಕೆ ಮಾಸ್ಕ್ ಹಾಕುವುದಿಲ್ಲ. ಸ್ಯಾನಿಟೈಸರ್ ಬಳಸುವುದೇ ಇಲ್ಲ. ತಾಂಡಗಳಲ್ಲಿ  ದೊಡ್ಡಿಗಳಲ್ಲಿ ಇಲ್ಲವೇ ಇಲ್ಲ ಇಂತಹ ಸಂದರ್ಭದಲ್ಲಿ ನಾಲ್ಕು ದಿನಗಳಲ್ಲಿ 75ಕ್ಕೂ ಹೆಚ್ಚು ಸೋಂಕಿತರು ಕಂಡುಬಂದಿದ್ದಾರೆ. ಜನರು ವಿನಾಕಾರಣ ಹೊರಗಡೆ ಬರುತ್ತಿದ್ದಾರೆ. ಬೆಂಗಳೂರು, ಮಂಗಳೂರು, ಮಹಾರಾಷ್ಟ್ರ, ಉಡುಪಿ, ಶಿವಮೊಗ್ಗ ಕಡೆ ದುಡಿಯಲು ಹೋದವರು ತಮ್ಮ ಗ್ರಾಮಕ್ಕೆ ವಾಪಸ್ಸಾಗಿ ತಮಗೆ ಅಂಟಿದ ಸೋಂಕು ಗ್ರಾಮೀಣ ಪ್ರದೇಶಕ್ಕೂ ಹಂಚುತ್ತಿದ್ದಾರೆ. ಜಿಲ್ಲಾಡಳಿತ ಗ್ರಾಮೀಣ ಮಟ್ಟದಲ್ಲಿ ಹರಡುವುದನ್ನು ತಡೆಗಟ್ಟುವಲ್ಲಿ ವಿಫಲವಾಗಿದೆ. ಪಟ್ಟಣದಲ್ಲಿ ಬಾರಿ ಕೋಟಿಗಳನ್ನು ಹಾಕಿದ್ದು ವಾಹನ ಚಾಲಕರು ಅವುಗಳನ್ನು ಕಿತ್ತು ತಿರುಗಾಡುತ್ತಾರೆ. ಪುರಸಭೆ, ಪಟ್ಟಣ ಸೇರಿ ದಂತೆ ಸ್ಯಾನಿಟೈಸರ್ ಸಿಂಪಡಿಸಲಾಗುತ್ತದೆ.

ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಸ್ಯಾನಿಟೈಸರ್ ಸಿಂಪಡಿಸಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ್ ಪಾಟೀಲ್, ಕೃಷ್ಣ ಹುನಗುಂದ, ಶರಣೆಗೌಡ ಹಂದ್ರಾಳ, ತಿಮ್ಮಣ್ಣ ಬೋವಿ, ಮಲ್ಲಿಕಾರ್ಜುನ್, ಮಂಜುನಾಥ್, ತಿಮ್ಮನಗೌಡ, ಬಸವಲಿಂಗಪ್ಪ ಗೌಡ , ಸಂದೇಶ್ ಜಯಶ್ರೀ ಪಾಟೀಲ್ ಸೇರಿದಂತೆ ಗ್ರಾಮಗಳ ಸಾಮಾಜಿಕ ಅಂತರ ಕಾಪಾಡುವುದರ ಜೊತೆಗೆ ಹೊರಗಡೆ ಬರಬೇಡಿ. ನಿಮ್ಮ ಜೀವ ನಿಮ್ಮ ಕೈಯಲ್ಲಿದೆ ಎನ್ನುವ ಧ್ವನಿಯಲ್ಲಿ ಜನರಿಗೆ ಎಚ್ಚರಿಸುವ ದೃಶ್ಯ ಕಂಡುಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು