3:14 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಸ್ಕಿ ಗ್ರಾಮೀಣ ಪ್ರದೇಶದಲ್ಲೂ ಕೊರೊನಾ ಆರ್ಭಟ: ಸಾಮಾನ್ಯ ಜನಜೀವನ ತತ್ತರ: ಜೀವ ಕೈಯಲ್ಲಿ ಹಿಡಿದುಕೊಳ್ಳುವ ಸ್ಥಿತಿ!!

22/05/2021, 08:50

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ಮಸ್ಕಿ ಕ್ಷೇತ್ರ ಸೇರಿದಂತೆ ತಾಲೂಕಿನ  ಎಲ್ಲಾ ಹಳ್ಳಿ ಗ್ರಾಮೀಣ ಪ್ರದೇಶಗಳು ಮಹಾಮಾರಿ ಕೊರೊನಾಕ್ಕೆ ತತ್ತರಿಸಿದೆ.ಹೊರಗಡೆ ತಿರುಗಾಡಲು ಹೆದರಿ ಜೀವ ಅಂಗೈಯಲ್ಲಿ ಹಿಡಿದುಕೊಂಡು ಜೀವನ ಮಾಡುವ ಪರಿಸ್ಥಿತಿ ಎದುರಾಗಿದೆ. ದಿನದಿನಕ್ಕೂ ಹೆಚ್ಚುತ್ತಿರುವ ಈ ರೋಗವು ಜನಜೀವನವನ್ನು ಹಿಂಡಿ ಹಿಪ್ಪೆ ಮಾಡುವ ಪರಿಸ್ಥಿತಿ ಎದುರಾಗಿದೆ.

ಜಿಲ್ಲಾಡಳಿತ ಕೋವಿಡ್ ತಡೆಗಟ್ಟಲು ಕಠಿಣ ಲಾಕ್ ಡೌನ್ ಜಾರಿ ಮಾಡಿದ್ದರೂ ಸಹ ಮಸ್ಕಿ ಕ್ಷೇತ್ರದ ಜನತೆ ಕ್ಯಾರೆ ಅನ್ನುತ್ತಿಲ್ಲ. ಸಾಮಾಜಿಕ ಅಂತರ, ಮುಖಕ್ಕೆ ಮಾಸ್ಕ್ ಹಾಕುವುದಿಲ್ಲ. ಸ್ಯಾನಿಟೈಸರ್ ಬಳಸುವುದೇ ಇಲ್ಲ. ತಾಂಡಗಳಲ್ಲಿ  ದೊಡ್ಡಿಗಳಲ್ಲಿ ಇಲ್ಲವೇ ಇಲ್ಲ ಇಂತಹ ಸಂದರ್ಭದಲ್ಲಿ ನಾಲ್ಕು ದಿನಗಳಲ್ಲಿ 75ಕ್ಕೂ ಹೆಚ್ಚು ಸೋಂಕಿತರು ಕಂಡುಬಂದಿದ್ದಾರೆ. ಜನರು ವಿನಾಕಾರಣ ಹೊರಗಡೆ ಬರುತ್ತಿದ್ದಾರೆ. ಬೆಂಗಳೂರು, ಮಂಗಳೂರು, ಮಹಾರಾಷ್ಟ್ರ, ಉಡುಪಿ, ಶಿವಮೊಗ್ಗ ಕಡೆ ದುಡಿಯಲು ಹೋದವರು ತಮ್ಮ ಗ್ರಾಮಕ್ಕೆ ವಾಪಸ್ಸಾಗಿ ತಮಗೆ ಅಂಟಿದ ಸೋಂಕು ಗ್ರಾಮೀಣ ಪ್ರದೇಶಕ್ಕೂ ಹಂಚುತ್ತಿದ್ದಾರೆ. ಜಿಲ್ಲಾಡಳಿತ ಗ್ರಾಮೀಣ ಮಟ್ಟದಲ್ಲಿ ಹರಡುವುದನ್ನು ತಡೆಗಟ್ಟುವಲ್ಲಿ ವಿಫಲವಾಗಿದೆ. ಪಟ್ಟಣದಲ್ಲಿ ಬಾರಿ ಕೋಟಿಗಳನ್ನು ಹಾಕಿದ್ದು ವಾಹನ ಚಾಲಕರು ಅವುಗಳನ್ನು ಕಿತ್ತು ತಿರುಗಾಡುತ್ತಾರೆ. ಪುರಸಭೆ, ಪಟ್ಟಣ ಸೇರಿ ದಂತೆ ಸ್ಯಾನಿಟೈಸರ್ ಸಿಂಪಡಿಸಲಾಗುತ್ತದೆ.

ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಸ್ಯಾನಿಟೈಸರ್ ಸಿಂಪಡಿಸಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ್ ಪಾಟೀಲ್, ಕೃಷ್ಣ ಹುನಗುಂದ, ಶರಣೆಗೌಡ ಹಂದ್ರಾಳ, ತಿಮ್ಮಣ್ಣ ಬೋವಿ, ಮಲ್ಲಿಕಾರ್ಜುನ್, ಮಂಜುನಾಥ್, ತಿಮ್ಮನಗೌಡ, ಬಸವಲಿಂಗಪ್ಪ ಗೌಡ , ಸಂದೇಶ್ ಜಯಶ್ರೀ ಪಾಟೀಲ್ ಸೇರಿದಂತೆ ಗ್ರಾಮಗಳ ಸಾಮಾಜಿಕ ಅಂತರ ಕಾಪಾಡುವುದರ ಜೊತೆಗೆ ಹೊರಗಡೆ ಬರಬೇಡಿ. ನಿಮ್ಮ ಜೀವ ನಿಮ್ಮ ಕೈಯಲ್ಲಿದೆ ಎನ್ನುವ ಧ್ವನಿಯಲ್ಲಿ ಜನರಿಗೆ ಎಚ್ಚರಿಸುವ ದೃಶ್ಯ ಕಂಡುಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು