2:22 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಮಸ್ಕಿ ಗ್ರಾಮೀಣ ಪ್ರದೇಶದಲ್ಲೂ ಕೊರೊನಾ ಆರ್ಭಟ: ಸಾಮಾನ್ಯ ಜನಜೀವನ ತತ್ತರ: ಜೀವ ಕೈಯಲ್ಲಿ ಹಿಡಿದುಕೊಳ್ಳುವ ಸ್ಥಿತಿ!!

22/05/2021, 08:50

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ಮಸ್ಕಿ ಕ್ಷೇತ್ರ ಸೇರಿದಂತೆ ತಾಲೂಕಿನ  ಎಲ್ಲಾ ಹಳ್ಳಿ ಗ್ರಾಮೀಣ ಪ್ರದೇಶಗಳು ಮಹಾಮಾರಿ ಕೊರೊನಾಕ್ಕೆ ತತ್ತರಿಸಿದೆ.ಹೊರಗಡೆ ತಿರುಗಾಡಲು ಹೆದರಿ ಜೀವ ಅಂಗೈಯಲ್ಲಿ ಹಿಡಿದುಕೊಂಡು ಜೀವನ ಮಾಡುವ ಪರಿಸ್ಥಿತಿ ಎದುರಾಗಿದೆ. ದಿನದಿನಕ್ಕೂ ಹೆಚ್ಚುತ್ತಿರುವ ಈ ರೋಗವು ಜನಜೀವನವನ್ನು ಹಿಂಡಿ ಹಿಪ್ಪೆ ಮಾಡುವ ಪರಿಸ್ಥಿತಿ ಎದುರಾಗಿದೆ.

ಜಿಲ್ಲಾಡಳಿತ ಕೋವಿಡ್ ತಡೆಗಟ್ಟಲು ಕಠಿಣ ಲಾಕ್ ಡೌನ್ ಜಾರಿ ಮಾಡಿದ್ದರೂ ಸಹ ಮಸ್ಕಿ ಕ್ಷೇತ್ರದ ಜನತೆ ಕ್ಯಾರೆ ಅನ್ನುತ್ತಿಲ್ಲ. ಸಾಮಾಜಿಕ ಅಂತರ, ಮುಖಕ್ಕೆ ಮಾಸ್ಕ್ ಹಾಕುವುದಿಲ್ಲ. ಸ್ಯಾನಿಟೈಸರ್ ಬಳಸುವುದೇ ಇಲ್ಲ. ತಾಂಡಗಳಲ್ಲಿ  ದೊಡ್ಡಿಗಳಲ್ಲಿ ಇಲ್ಲವೇ ಇಲ್ಲ ಇಂತಹ ಸಂದರ್ಭದಲ್ಲಿ ನಾಲ್ಕು ದಿನಗಳಲ್ಲಿ 75ಕ್ಕೂ ಹೆಚ್ಚು ಸೋಂಕಿತರು ಕಂಡುಬಂದಿದ್ದಾರೆ. ಜನರು ವಿನಾಕಾರಣ ಹೊರಗಡೆ ಬರುತ್ತಿದ್ದಾರೆ. ಬೆಂಗಳೂರು, ಮಂಗಳೂರು, ಮಹಾರಾಷ್ಟ್ರ, ಉಡುಪಿ, ಶಿವಮೊಗ್ಗ ಕಡೆ ದುಡಿಯಲು ಹೋದವರು ತಮ್ಮ ಗ್ರಾಮಕ್ಕೆ ವಾಪಸ್ಸಾಗಿ ತಮಗೆ ಅಂಟಿದ ಸೋಂಕು ಗ್ರಾಮೀಣ ಪ್ರದೇಶಕ್ಕೂ ಹಂಚುತ್ತಿದ್ದಾರೆ. ಜಿಲ್ಲಾಡಳಿತ ಗ್ರಾಮೀಣ ಮಟ್ಟದಲ್ಲಿ ಹರಡುವುದನ್ನು ತಡೆಗಟ್ಟುವಲ್ಲಿ ವಿಫಲವಾಗಿದೆ. ಪಟ್ಟಣದಲ್ಲಿ ಬಾರಿ ಕೋಟಿಗಳನ್ನು ಹಾಕಿದ್ದು ವಾಹನ ಚಾಲಕರು ಅವುಗಳನ್ನು ಕಿತ್ತು ತಿರುಗಾಡುತ್ತಾರೆ. ಪುರಸಭೆ, ಪಟ್ಟಣ ಸೇರಿ ದಂತೆ ಸ್ಯಾನಿಟೈಸರ್ ಸಿಂಪಡಿಸಲಾಗುತ್ತದೆ.

ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಸ್ಯಾನಿಟೈಸರ್ ಸಿಂಪಡಿಸಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ್ ಪಾಟೀಲ್, ಕೃಷ್ಣ ಹುನಗುಂದ, ಶರಣೆಗೌಡ ಹಂದ್ರಾಳ, ತಿಮ್ಮಣ್ಣ ಬೋವಿ, ಮಲ್ಲಿಕಾರ್ಜುನ್, ಮಂಜುನಾಥ್, ತಿಮ್ಮನಗೌಡ, ಬಸವಲಿಂಗಪ್ಪ ಗೌಡ , ಸಂದೇಶ್ ಜಯಶ್ರೀ ಪಾಟೀಲ್ ಸೇರಿದಂತೆ ಗ್ರಾಮಗಳ ಸಾಮಾಜಿಕ ಅಂತರ ಕಾಪಾಡುವುದರ ಜೊತೆಗೆ ಹೊರಗಡೆ ಬರಬೇಡಿ. ನಿಮ್ಮ ಜೀವ ನಿಮ್ಮ ಕೈಯಲ್ಲಿದೆ ಎನ್ನುವ ಧ್ವನಿಯಲ್ಲಿ ಜನರಿಗೆ ಎಚ್ಚರಿಸುವ ದೃಶ್ಯ ಕಂಡುಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು